ಜ್ಞಾನಪೀಠ ಪುರಸ್ಕೃತರು ಕಲಿತ ಶಾಲೆಗಳಿಗೆ ಇನ್ನೂ ಕೈಗೂಡದ ಅಭಿವೃದ್ಧಿ ಭಾಗ್ಯ


Team Udayavani, Dec 26, 2021, 7:00 AM IST

Untitled-2

ಸಾಂದರ್ಭಿಕ ಚಿತ್ರ

ಕೋಟ: ರಾಜ್ಯದ ಎಂಟು ಮಂದಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿಗಳು ಶಿಕ್ಷಣ ಪಡೆದ 11 ಸರಕಾರಿ ಶಾಲೆಗಳನ್ನು 16.88 ಕೋಟಿ ರೂ.ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿಗೊಳಿಸುವ ಯೋಜನೆಯನ್ನು ರಾಜ್ಯ ಸರಕಾರ ಘೋಷಿಸಿದ್ದರೂ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ.

ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌. ಯಡಿಯೂರಪ್ಪ 2021ರ ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ ವೇಳೆ ಈ ಯೋಜನೆಯನ್ನು ಘೋಷಿಸಿದ್ದರು. ಬಳಿಕ ಸರಕಾರವು ಅನುದಾನ ಮೀಸಲಿರಿಸಿ 2021-22ನೇ ಸಾಲಿನ ಅರ್ಥಿಕ ವರ್ಷ ಕೊನೆಗೊಳ್ಳುವುದರೊಳಗೆ ಅನುಷ್ಠಾನಗೊಳಿಸುವಂತೆ 2021ರ ಜು. 17ರಂದು ಮರು ಆದೇಶ ನೀಡಿತ್ತು. ಅದಾಗಿ 3 ತಿಂಗಳು ಕಳೆದರೂ ಕಾಮಗಾರಿ ಆರಂಭವಾಗಿಲ್ಲ. ಆರ್ಥಿಕ ವರ್ಷ ಅಂತ್ಯಗೊಳ್ಳಲು 3 ತಿಂಗಳಷ್ಟೇ ಬಾಕಿ ಇದ್ದು ಅಷ್ಟರೊಳಗೆ ಕಾಮಗಾರಿ ಅನುಷ್ಠಾನವಾಗದಿದ್ದರೆ ಬಹು ನಿರೀಕ್ಷಿತ ಯೋಜನೆಯೊಂದು ಹಳ್ಳ ಹಿಡಿಯುವ ಆತಂಕವಿದೆ.

ಈ ಶಾಲೆಗಳಲ್ಲಿ ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ, ಸ್ಮಾರ್ಟ್‌ ತರಗತಿ, ಪೀಠೊಪಕರಣ, ನೀರು, ಕ್ರೀಡಾ ಸಾಮಗ್ರಿ ಸೇರಿದಂತೆ ಸಮಗ್ರ ಅಭಿವೃದ್ಧಿ ಹಾಗೂ ಜ್ಞಾನಪೀಠ ಪುರಸ್ಕೃತರ ಗೌರವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುವಂತೆ ಆದೇಶಿಸಲಾಗಿತ್ತು. ಇದಕ್ಕಾಗಿ ಜಿ.ಪಂ. ಇಸಿಒ, ಡಿಡಿಪಿಇ, ಜಿ.ಪಂ. ಉಪಕಾರ್ಯದರ್ಶಿ ಸೇರಿದಂತೆ ಆರು ಸದಸ್ಯ ರನ್ನೊಳಗೊಂಡ ಸಮಿತಿ ಕೂಡ ರಚನೆಯಾಗಿದೆ.

ಯೋಜನೆ ಅಂತಿಮ; ಕಾಮಗಾರಿ ವಿಳಂಬ :

ಕಾಮಗಾರಿಯ ಅಂದಾಜು ವೆಚ್ಚದ ಯೋಜನೆ ಪಟ್ಟಿ ಯನ್ನು ಎಲ್ಲ ಶಾಲೆಗಳಿಂದ ಇಲಾಖೆಗೆ ತಲುಪಿಸಲಾಗಿದೆ. ಈ ಹಿಂದೆ ನಿರ್ಮಿತಿ ಕೇಂದ್ರಕ್ಕೆ ವಹಿಸಿದ್ದ ಕಾಮಗಾರಿಯನ್ನು ಇದೀಗ ಬೇರೊಂದು ಸಂಸ್ಥೆಗೆ ನೀಡಲಾಗಿದೆ. 2021-22

ವರ್ಷ ಕೊನೆಗೊಳ್ಳುವ ಮೊದಲೇ ಅನುಷ್ಠಾನಿಸುವುದು ಅಗತ್ಯ ಎನ್ನುತ್ತಾರೆ ಶಿಕ್ಷಣಪ್ರೇಮಿಗಳು.

ಯಾವೆಲ್ಲ ಶಾಲೆಗಳು ಆಯ್ಕೆ ? :

1.ಕುವೆಂಪು ಕಲಿತ ತೀರ್ಥಹಳ್ಳಿ  ಮಾದರಿ ಹಿ.ಪ್ರಾ. ಶಾಲೆ

2.ದ.ರಾ. ಬೇಂದ್ರೆ ಕಲಿತ ಧಾರವಾಡದ  ಗಾಂಧೀ ಚೌಕ ಹಿ.ಪ್ರಾ. ಶಾಲೆ

3.ಡಾ| ಶಿವರಾಮ ಕಾರಂತ ಓದಿದ  ಕೋಟ ಸ.ಹಿ.ಪ್ರಾ. ಶಾಲೆ

4.ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಅಭ್ಯಾಸ ಮಾಡಿದ ಶಿವಾರಪಟ್ಟಣ ಸ.ಹಿ.ಪ್ರಾ. ಶಾಲೆ

5.ವಿ.ಕೆ. ಗೋಕಾಕ್‌ ಕಲಿತ ಸವಣೂರು ಸ.ಹಿ.ಪ್ರಾ. ಶಾಲೆ ಮತ್ತು ಸವಣೂರು ಪ್ರೌಢಶಾಲೆ

6.ಯು.ಆರ್‌. ಆನಂತಮೂರ್ತಿ ಓದಿದ ತೀರ್ಥಹಳ್ಳಿಯ ದೂರ್ವಾಸಪುರಂ ಹಿ.ಪ್ರಾ. ಶಾಲೆ, ಕೋಣಂದೂರು ಪಬ್ಲಿಕ್‌ ಶಾಲೆ

7.ಗಿರೀಶ್‌ ಕಾರ್ನಾಡ್‌ ಕಲಿತ ಶಿರಸಿಯ ರಾಯಪ್ಪ ಹುಲೇಕಲ್‌ ಹಿ.ಪ್ರಾ.ಶಾಲೆ,  ಶಿರಸಿ ಮಾರಿಕಾಂಬಾ ಪ್ರೌಢಶಾಲೆ

8.ಚಂದ್ರಶೇಖರ ಕಂಬಾರ ಓದಿದ ಹುಕ್ಕೇರಿಯ ಘೋಡಗೇರಿ ಹಿ.ಪ್ರಾ. ಶಾಲೆ

ಚುನಾವಣ ನೀತಿಸಂಹಿತೆ ಮುಂತಾದ ಕಾರಣಗಳಿಂದಾಗಿ ಯೋಜನೆ ಅನುಷ್ಠಾನ ವಿಳಂಬವಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಶೀಘ್ರ ಕಾಮಗಾರಿ ಆರಂಭಿಸು ವಂತೆ ನಿರ್ದೇಶನ ನೀಡಲಾಗುವುದು. ಅಗತ್ಯವಿದ್ದರೆ ಹೆಚ್ಚುವರಿ ಸಮಯಾವ ಕಾಶ ನೀಡುವ ಕುರಿತು ಪರಿಶೀಲಿಸಲಾಗುವುದು.  –ಡಾ| ವಿಶಾಲ್‌ ಆರ್‌.,  ಆಯುಕ್ತರು, ರಾಜ್ಯ ಶಿಕ್ಷಣ ಇಲಾಖೆ 

 

-  ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Ajekar ಬಸ್‌ ತಂಗುದಾಣ ನಾಯಿಗಳ ವಾಸಸ್ಥಾನ; ರಾತ್ರಿ-ಹಗಲು ಅಲ್ಲೇ ವಾಸ

6

Kundapura: ಮರವಂತೆ ಮಾರಸ್ವಾಮಿ ಸ್ಟಾಪ್‌ನಲ್ಲಿ ನಿಲ್ಲದ ಸರಕಾರಿ ಬಸ್‌!

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.