ಹಸನಬ್ಬ ಕೊಲೆ ಪ್ರಕರಣ ನ್ಯಾಯಾಂಗ ಬಂಧನ ಜೂ.28ರವರೆಗೆ ವಿಸ್ತರಣೆ
Team Udayavani, Jun 16, 2018, 1:25 PM IST
ಉಡುಪಿ: ಪೆರ್ಡೂರಿನ ಶೇನರಬೆಟ್ಟಿನಲ್ಲಿ ನಡೆದಿದ್ದ ಹಸನಬ್ಬ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನವನ್ನು ಜೂ.28ರವರೆಗೆ ವಿಸ್ತರಿಸಲಾಗಿದೆ.
ಆರೋಪಿಗಳಾದ ಸುರೇಶ್ ಮೆಂಡನ್, ಪ್ರಸಾದ್ ಕೊಂಡಾಡಿ, ಉಮೇಶ್ ಶೆಟ್ಟಿ, ರತನ್ ಪೂಜಾರಿ, ಚೇತನ್ ಆಚಾರ್ಯ, ಶೈಲೇಶ್ ಶೆಟ್ಟಿ ಮತ್ತು ಗಣೇಶ್ ನಾಯ್ಕ ಅವರನ್ನು ಜೂ.15ರಂದು ಕಾರವಾರ ಕಾರಾಗೃಹದಿಂದ ಹಾಗೂ ಇನ್ನೋರ್ವ ಆರೋಪಿ ದೀಪಕ್ ಹೆಗ್ಡೆ ಅವರನ್ನು ಮಂಗಳೂರು ಜೈಲಿನಿಂದ ಕರೆತಂದು ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯದ ನ್ಯಾಯಾಧೀಶ ವಿ.ಎಸ್.ಪಂಡಿತ್ ಅವರ ಮುಂದೆ ಹಾಜರುಪಡಿಸಲಾಯಿತು.
ಪೊಲೀಸ್ ಸಿಬಂದಿ ಗೈರು
ಇತರ ಆರೋಪಿಗಳಾಗಿರುವ ಎಸ್ಐ ಡಿ.ಎನ್.ಕುಮಾರ್, ಹೆಡ್ಕಾನ್ಸ್ಟೆಬಲ್ ಮೋಹನ್ ಕೊತ್ವಾಲ್ ಮತ್ತು ಚಾಲಕ ಗೋಪಾಲ ಅವರು ವೈದ್ಯಕೀಯ ಕಾರಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ನ್ಯಾಯಾಲಯದ ಆವರಣದಲ್ಲಿ ಆರೋಪಿಗಳ ಮನೆಯವರು, ಗೆಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದರು.
ಮಾರಾಟ ಮಾಡಿದ್ದೂ ತಪ್ಪು
ಸ್ಕಾರ್ಪಿಯೋ ವಾಹನದಲ್ಲಿ 13 ದನಗಳನ್ನು ಸಾಗಿಸಲಾಗಿದೆ. ಈ ರೀತಿ ಸಾಗಿಸುತ್ತಾರೆ ಎಂಬುದು ತಿಳಿದೂ ಮಾರಾಟ ಮಾಡಿದವರ ಪೈಕಿ ದೀಪಕ್ ಘಟನೆ ಕುರಿತು ಇತರರಿಗೆ ಆಗಾಗ್ಗೆ ಮೊಬೈಲ್ ಸಂದೇಶಗಳನ್ನು ರವಾನಿಸುತ್ತಿದ್ದರು. ಹಾಗಾಗಿ ಅವರನ್ನು ಕೊಲೆ ಪ್ರಕರಣದಲ್ಲಿಯೂ ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೊಡೆತ ಖಚಿತವಾಗಿಲ್ಲ: ಮರಣೋತ್ತರ ಪರೀಕ್ಷಾ ವರದಿ ಪ್ರಕಾರ ಹಸನಬ್ಬ ತಲೆಗೆ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ. ಹಾಗಾಗಿ ಇದೊಂದು ಕೊಲೆ ಪ್ರಕರಣವಾಗಿದೆ. ಆದರೆ ಪೆಟ್ಟು ಕೈಯಿಂದಲೋ, ಕಲ್ಲಿನಿಂದಲೋ ಅಥವಾ ಇತರ ವಸ್ತುಗಳಿಂದಲೋ ಎಂಬುದು ಇನ್ನಷ್ಟೇ ತಿಳಿಯಬೇಕಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.