ಕಲ್ಯಾಣಪುರ: ಷಡಾಧಾರ (ನಿಧಿಕುಂಭ)ಸ್ಥಾಪನೆ
Team Udayavani, Jul 13, 2017, 1:30 AM IST
ಬ್ರಹ್ಮಾವರ, ಜು.12: ಶಿಲಾಮಯ ದೇಗುಲ ನೂರಾರು ವರ್ಷಕ್ಕೊಮ್ಮೆ ಪುನಃನಿರ್ಮಾಣಗೊಳ್ಳುವುದರಿಂದ ಜೀರ್ಣೋದ್ಧಾರ ನಮಗೆ ದೊರಕಿದ ಯೋಗ. ಭಕ್ತಿ ಹಾಗೂ ನಿಷ್ಕಲ್ಮಶ ಮನಸ್ಸಿನಿಂದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ ಹೇಳಿದರು.
ಅವರು ಬುಧವಾರ ಕಲ್ಯಾಣಪುರ ಸಂತೆಕಟ್ಟೆ ಶ್ರೀ ಆದಿಶಕ್ತಿ ಮತ್ತು ಶ್ರೀ ವೀರಭದ್ರ ದೇವರ ನೂತನ ಗರ್ಭಗುಡಿಯ ಷಡಾಧಾರ ಸ್ಥಾಪನೆ ಹಾಗೂ ಶ್ರೀ ಬ್ರಹ್ಮಲಿಂಗ ದೇವರ ನೂತನ ಗುಡಿಯ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ದೇವಾಲಯ, ವಿದ್ಯಾಲಯ ಜನರ ಸಂಸ್ಕೃತಿಯನ್ನು ಸೂಚಿಸುತ್ತದೆ. ಭಾರತದಲ್ಲಿ ಇಂತಹ ಸಂಸ್ಕೃತಿ ಸುದೃಢವಾಗಿ ಉಳಿದಿದೆ. ಸಂಘಟಿತ ಆರಾಧನೆಗೆ ಫಲ ಹೆಚ್ಚು ಎಂದರು.
ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಪುತ್ತೂರು ಹಯವದನ ತಂತ್ರಿಗಳು ಷಡಾಧಾರ ಸ್ಥಾಪನೆ ನೆರವೇರಿಸಿದರು.
ವಿಧ್ವಾನ್ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಷಡಾಧಾರ ಸ್ಥಾಪನೆಯ ಪ್ರಕ್ರಿಯೆಗಳನ್ನು ತಿಳಿಸಿದರು. ಈ ಸಂದರ್ಭ ಕ್ಷೇತ್ರದ ಅರ್ಚಕ ರಾಮಕೃಷ್ಣನ್ ಉಪಾಧ್ಯಾಯ, ಆಡಳಿತ ಮಂಡಳಿ ಉಪಾಧ್ಯಕ್ಷ ಜ್ಯೋತಿಪ್ರಸಾದ್ ಶೆಟ್ಟಿಗಾರ್ ಕಿನ್ನಿಮುಲ್ಕಿ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ರಾಜೇಶ್ ಪಿ., ಕಾರ್ಯಾಧ್ಯಕ್ಷ ಸಿ.ಪ್ರಭಾಕರ್, ಪ್ರ.ಕಾರ್ಯದರ್ಶಿ ಸಂತೋಷ್ ಸಗ್ರಿ, ಪದ್ಮಶಾಲಿ ಯುವ ವೇದಿಕೆ ಅಧ್ಯಕ್ಷ ಅಜಿತ್ ಅಂಬಲಪಾಡಿ, ಆದಿಶಕ್ತಿ ಪದ್ಮಶಾಲಿ ಮಹಿಳಾ ವೇದಿಕೆ ಅಧ್ಯಕ್ಷೆ ವೇದಾವತಿ ಕುಕ್ಕಿಕಟ್ಟೆ, ಭಜನಾ ಮಂಡಳಿ ಅಧ್ಯಕ್ಷ ದಯಾನಂದ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.
ಸರೋಜಿನಿ ವಿಠಲ್ ಶೆಟ್ಟಿಗಾರ್ ಸಂದೇಶ ಪತ್ರ ವಾಚಿಸಿದರು. ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ರಾಮದಾಸ್ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿ, ಯೋಜನಾ ಪ್ರಮುಖ್ ಭಾಸ್ಕರ ಶೆಟ್ಟಿಗಾರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.