ಕಾರ್ಕಳ: 442 ಅನರ್ಹ ಪಡಿತರ ಚೀಟಿ ಪತ್ತೆ

17,161 ಎಪಿಎಲ್‌, 33,533 ಬಿಪಿಲ್‌, 4,168 ಅಂತ್ಯೋದಯ ಪಡಿತರ ಚೀಟಿ

Team Udayavani, Nov 8, 2019, 5:54 AM IST

BPL-RATION-CARD

ಕಾರ್ಕಳ: ಸರಕಾರದ ಮಾನದಂಡಕ್ಕೆ ವಿರುದ್ಧವಾಗಿ ಈವರೆಗೆ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ 442 ಕುಟುಂಬಗಳು ಕಾರ್ಕಳದಲ್ಲಿ ಪತ್ತೆಯಾಗಿವೆ. ಆರ್‌ಟಿಒ ಮಾಹಿತಿ ಪ್ರಕಾರ 102, ಸ್ವಯಂ ಪ್ರೇರಿತರಾಗಿ 340 ಕುಟುಂಬಗಳು ಈಗಾಗಲೇ ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತನೆಯಾಗಿದ್ದು, ಅನರ್ಹರು ಕೂಡಲೇ ಕಾರ್ಡ್‌ ತಂದೊಪ್ಪಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.ಕಾರ್ಕಳ ತಾಲೂಕಿನಲ್ಲಿ 17,161 ಎಪಿಎಲ್‌, 33,533 ಬಿಪಿಲ್‌, 4,168 ಅಂತ್ಯೋದಯ ಪಡಿತರ ಚೀಟಿಯಿದ್ದು ಒಟ್ಟು 54, 862 ಪಡಿತರ ಕಾರ್ಡ್‌ ಇದೆ.

ಸೌಲಭ್ಯ
ಎಪಿಎಲ್‌ ಕಾರ್ಡ್‌ದಾರರಿಗೆ ಕೆ.ಜಿ.ಯೊಂದಕ್ಕೆ ರೂ. 15ರಂತೆ ತಿಂಗಳಿಗೆ ಗರಿಷ್ಠವಾಗಿ 10 ಕೆ.ಜಿ. ಅಕ್ಕಿ, ಬಿಪಿಎಲ್‌ ಕುಟುಂಬಗಳಿಗೆ ಪ್ರಸ್ತುತ ಓರ್ವ ಸದಸ್ಯನಿಗೆ ತಲಾ 7 ಕೆ.ಜಿ.ಯಂತೆ ಉಚಿತವಾಗಿ ಅಕ್ಕಿ ನೀಡಲಾಗುತ್ತಿದೆ. ಅಂತ್ಯೋದಯ ಕಾರ್ಡ್‌ದಾರರಿಗೆ ಕುಟುಂಬಕ್ಕೆ 35 ಕೆ.ಜಿ. ಅಕ್ಕಿ ನೀಡಲಾಗುತ್ತಿದೆ. ಇದಲ್ಲದೇ ಅಂತ್ಯೋದಯ, ಬಿಪಿಎಲ್‌ ಕಾರ್ಡ್‌ದಾರರಿಗೆ ಸರಕಾರದಿಂದ ಅನೇಕ ಸೌಲಭ್ಯಗಳೂ ದೊರೆಯುತ್ತಿವೆ.

ಹಳೆ ಕಾರ್‌ ಹೊಂದಿದ್ದರೂ ಬಿಪಿಎಲ್‌ ಕಾರ್ಡ್‌ ಕಟ್‌
ಸಾಕಷ್ಟು ಆಸ್ತಿಪಾಸ್ತಿ ಹೊಂದಿದವರೂ ಬಿಪಿಎಲ್‌ ಪಡಿತರ ಚೀಟಿ ಹೊಂದಿದವರಿದ್ದಾರೆ. ಆದರೆ, ಕಡಿಮೆ ಆಸ್ತಿಯಿದ್ದಾಗ್ಯೂ ಹಳೆ ಕಾರ್‌ ಹೊಂದಿದ್ದಲ್ಲಿ ಕೂಡ ನಿಯಮದನ್ವಯ ಬಿಪಿಎಲ್‌ ಪಡಿತರ ಚೀಟಿ ರದ್ದಾಗುವುದು. ಇಂತಹ ನಿಯಮ ಸರಿಯಲ್ಲ ಎನ್ನುವ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿವೆ.

ಹೇಗೆ ಅನರ್ಹರು ?
-  ಆದಾಯ ತೆರಿಗೆ ಪಾವತಿದಾರರು.ಸರಕಾರಿ ,ಅರೆ ಸರಕಾರಿ ಉದ್ಯೋಗ ಹೊಂದಿರುವ ಕುಟುಂಬ.
-   ರೂ. 1.20 ಲಕ್ಷಕ್ಕಿಂತ ಅಧಿಕ ವಾರ್ಷಿಕ ಆದಾಯ ಹೊಂದಿರುವ ಕುಟುಂಬ.
-   ಪಡಿತರ ಚೀಟಿ ವಿಳಾಸದಲ್ಲಿ ವಾಸವಾಗಿರದೇ ಇರುವುದು.
-   ಮರಣ ಹೊಂದಿದವರು ಮತ್ತು ಕುಟುಂಬದಲ್ಲಿ ವ್ಯಾಸ್ತವ್ಯ ಹೊಂದದೇ ಇರುವಂತಹ ಸದಸ್ಯರ ಹೆಸರನ್ನು ಪಡಿತರ ಚೀಟಿಯಿಂದ ತೆಗೆಯದೇ ಉಳಿಸಿಕೊಂಡವರು.
-   ಜೀವನೋಪಾಯಕ್ಕಾಗಿ ಹೊಂದಿರುವ ಒಂದು ಟೂರಿಸ್ಟ್‌ ಕಾರು, ಲಾರಿ ಹೊರತುಪಡಿಸಿ ಕಾರು, ಲಾರಿ, ಜೇಸಿಬಿ ಮೊದಲಾದ ವಾಹನ ಹೊಂದಿರುವವರು.
-   ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‌ ಭೂಮಿ ಹಾಗೂ ನಗರ ಪ್ರದೇಶದಲ್ಲಿ 1 ಸಾವಿರ ಚದರಡಿ ಹೆಚ್ಚಿನ ವಿಸ್ತೀರ್ಣದ ಸ್ವಂತ ಮನೆ ಹೊಂದಿರುವವರು.
-  ಒಂದು ಮನೆಯಲ್ಲಿ 1ಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವುದು.

ಅನರ್ಹರು ಕಾರ್ಡ್‌ ತಂದೊಪ್ಪಿಸಿ
ಅನರ್ಹರು ಬಿಪಿಎಲ್‌ ಕಾರ್ಡ್‌ ಒಪ್ಪಿಸಲು ಈಗಲೂ ಅವಕಾಶವಿದೆ. ಅವರಾಗಿಯೇ ತಂದೊಪ್ಪಿಸಲು ವಿಳಂಬ ಮಾಡಿದಲ್ಲಿ ಆಹಾರ ಇಲಾಖೆ ಪತ್ತೆ ಹಚ್ಚಲು ಮುಂದಾಗಲಿದ್ದು, ಅಂತಹವರಿಗೆ ದಂಡ ವಿಧಿಸಲಾಗುವುದು. ಕಾಯ್ದೆಯನ್ವಯ ಕ್ರಿಮಿನಲ್‌ ಕೇಸ್‌ ಹಾಕಲು ಅವಕಾಶವಿದೆ.
-ಬಿ.ಕೆ. ಕುಸುಮಾಧರ್‌, ಉಪನಿರ್ದೇಶಕರು, ಆಹಾರ ಇಲಾಖೆ ಉಡುಪಿ

ದಂಡ ವಿಧಿಸಿಲ್ಲ
ಸರಕಾರದ ಮಾನದಂಡಗಳನ್ನು ಮೀರಿ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಫ‌‌ಲಾನುಭವಿಗಳಿಗೆ ದಂಡರಹಿತವಾಗಿ ಎಪಿಎಲ್‌ಗೆ ಪರಿವರ್ತಿಸಲು ಅ.30ರವರೆಗೆ ಅವಕಾಶವಿತ್ತು. ಹೀಗಾಗಿ ಯಾರಿಗೂ ದಂಡ ವಿಧಿಸಿಲ್ಲ.
-ಪುರಂದರ ಹೆಗ್ಡೆ, ತಹಶೀಲ್ದಾರರು, ಕಾರ್ಕಳ

ವಿಶೇಷ ವರದಿ- ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.