Karkala ಮಾನಸಿಕ ಖಿನ್ನತೆ: ವ್ಯಕ್ತಿ ಆತ್ಮಹತ್ಯೆ
Team Udayavani, Aug 22, 2023, 10:06 PM IST
ಕಾರ್ಕಳ: ಕಳೆದ 10 ವರ್ಷಗಳಿಂದ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯೋರ್ವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೈದ ಘಟನೆ ಸಂಭವಿಸಿದೆ.
ದಿ| ಹರಿಶ್ಚಂದ್ರ ಆಚಾರ್ಯ ಅವರ ತಮ್ಮ ಸಂತೋಷ (41) ಆತ್ಮಹತ್ಯೆ ಮಾಡಿಕೊಂಡವರು. ಮದುವೆಯಾಗದ ಬೇಸರದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಮನೆಯ ಕೋಣೆಯಲ್ಲಿರುವ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆ
ಕಾರ್ಕಳ: ಪೋಕ್ಸೋ ಪ್ರಕರಣದ ಆರೋಪಿಯೋರ್ವ ಉಡುಪಿಯ ನ್ಯಾಯಾಲಯಕ್ಕೆ ಹಾಜರಾಗಿ ತನ್ನ ಸೋದರ ಮಾವ ಸಾಧಿಕ್ ಅವರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಕ್ಕುಂದೂರು ಗ್ರಾಮದಲ್ಲಿ ಸಂಭವಿಸಿದೆ.
ಅಬ್ದುಲ್ ಅವರ ಮಗ ಮಹಮ್ಮದ್ ಯಾಸೀನ್ ಆತ್ಮಹತ್ಯೆಗೈದವರು. ಆತ ತನ್ನ ಮನೆಯ ಪಕ್ಕದಲ್ಲಿರುವ ಸೋದರ ಮಾವ ಸಾಧಿಕ್ ಅರ ಮನೆಯಲ್ಲಿ ಹಾಸಿಗೆ ತಯಾರಿಸುವ ಕೆಲಸ ಮಾಡಿಕೊಂಡಿದ್ದರು. ಆ. 21ರಂದು ನ್ಯಾಯಾಲಯಕ್ಕೆ ಹೋಗಿ ಬಂದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಹೋದರರು ಮನೆಯ ಬಾಗಿಲು ಒಡೆದು ಯಾಸೀನ್ನನ್ನು ಕೆಳಗಿಳಿಸಿ ಆಸ್ಪತ್ರೆಗೆ ಕೊಂಡೊಯ್ದರೂ ಆಗಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.