Karkala: ಬ್ಯಾಂಕ್ ಸಮಸ್ಯೆ ಪರಿಹಾರ ನೆಪದಲ್ಲಿ ಒಟಿಪಿ ಪಡೆದು ವಂಚನೆ
Team Udayavani, Oct 4, 2024, 7:00 AM IST
ಕಾರ್ಕಳ: ಬ್ಯಾಂಕ್ ಸಮಸ್ಯೆ ನಿವಾರಿಸುವ ನೆಪದಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಗೆ 76 ಸಾವಿರ ರೂ. ವಂಚನೆ ಮಾಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.
ಕಸಬಾ ಗ್ರಾಮದ ಬಾಲಚಂದ್ರ ಅವರು ಆಕ್ಸಿಸ್ ಬ್ಯಾಂಕ್ ಹಾಗೂ ಎಚ್ಡಿಎಫ್ಸಿ ಬ್ಯಾಂಕಿನಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿದ್ದರು. ಸೆ. 30ರಂದು ಅವರಿಗೆ ಮನುಜ್ ಶರ್ಮಾ ಎನ್ನುವವರು ಕರೆ ಮಾಡಿ ಎಚ್ಡಿಎಫ್ಸಿ ಬ್ಯಾಂಕ್ ಸಮಸ್ಯೆಯನ್ನು ನಿವಾರಿಸುವುದಕ್ಕಾಗಿ ಕರೆ ಮಾಡಿರುವುದಾಗಿ ತಿಳಿಸಿದ್ದರು. ಮನುಜ್ ಶರ್ಮಾ, ಬಾಲಚಂದ್ರ ಅವರಿಂದ ಆಕ್ಸಿಸ್ ಹಾಗೂ ಎಚ್ಡಿಎಫ್ಸಿ ಬ್ಯಾಂಕಿನ ವಿವರಗಳನ್ನು ಪಡೆದು ಅನಂತರ ಒಟಿಪಿ ಪಡೆದಿದ್ದಾರೆ. ಅ. 1ರಂದು ಸಂಜೆ 4 ಗಂಟೆಯಿಂದ 6.30ರ ಮಧ್ಯಾವಧಿಯಲ್ಲಿ ಬಾಲಚಂದ್ರ ಅವರ ಖಾತೆಯ ಎರಡು ಬ್ಯಾಂಕ್ನ ಕ್ರೆಡಿಟ್ ಕಾರ್ಡ್ ಮೂಲಕ 76,188 ರೂ. ಕಡಿತವಾಗಿರುತ್ತದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup ಹೊಸ ಮಾರಿಗುಡಿ: ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಮುಹೂರ್ತ
Udupi: ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನವರಾತ್ರಿ ಮಹೋತ್ಸವಕ್ಕೆ ಚಾಲನೆ
Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ
Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ
Dr. G. Shankar: ಅ.5ರಂದು ನಾಡೋಜ ಡಾ| ಜಿ. ಶಂಕರ್ 69ನೇ ಹುಟ್ಟುಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.