Karkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

ಅಮಲು ಪದಾರ್ಥ ನೀಡಿ ಕೃತ್ಯ, ಹಿಂದೂ ಸಂಘಟನೆಗಳಿಂದ ಖಂಡನೆ, ಓರ್ವ ವಶಕ್ಕೆ

Team Udayavani, Aug 24, 2024, 7:15 AM IST

KARKarkala: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ?

ಕಾರ್ಕಳ: ನಗರ ಠಾಣೆ ವ್ಯಾಪ್ತಿಯಲ್ಲಿ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ.

ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿಗೆ ಅನ್ಯಕೋಮಿನ ಮೂವರು ಯುವಕರು ಅಮಲು ಪದಾರ್ಥ ನೀಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ಶುಕ್ರವಾರ ಸಂಜೆ 7 ಗಂಟೆಯ ವೇಳೆ ಘಟನೆ ನಡೆದಿದ್ದಾಗಿ ತಿಳಿದುಬಂದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಯುವತಿಯನ್ನು ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದು, ಪೊಲೀಸರು ತೀವ್ರ ನಿಗಾ ಇರಿಸಿದ್ದಾರೆ. ಪ್ರಕರಣ ಸಂಬಂಧ ಅಲ್ತಾಫ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸಂತ್ರಸ್ತೆ ಯುವತಿ ಕುಕ್ಕುಂದೂರಿನ ಅಯ್ಯಪ್ಪ ನಗರದ ನಿವಾಸಿ. ಮನೆಯ ಪಕ್ಕದ ರಂಗನಪಲ್ಕೆ ಎಂಬ ಸ್ಥಳಕ್ಕೆ ಕರೆದೊಯ್ದು ಹಾಡಿಯಲ್ಲಿ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಆರಂಭದಲ್ಲಿ ಯುವತಿಗೆ ಮದ್ಯ ಹಾಗೂ ಇತರ ಮಾದಕ ಪದಾರ್ಥ ನೀಡಿ ಓರ್ವ ಅತ್ಯಾಚಾರ ಎಸಗಿದ್ದು, ಬಳಿಕ ಮತ್ತಿಬ್ಬರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದು ಬಂದಿದೆ.

ಬಜರಂಗದಳ ರಾಜ್ಯ ಸಂಚಾಲಕ ಸುನಿಲ್‌ ಕೆ.ಆರ್‌. ಅವರು ಘಟನೆಯನ್ನು ಖಂಡಿಸಿದ್ದು ನಾಳೆಯೊಳಗೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದಲ್ಲಿ ಠಾಣೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬೋವಿ ಸಮುದಾಯದವರು ಕೂಡ ಘಟನೆಯನ್ನು ಖಂಡಿಸಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಓರ್ವ ಆರೋಪಿ ಪರಿಚಿತ?
ಆರೋಪಿಗಳ ಪೈಕಿ ಓರ್ವನು ಯುವತಿಗೆ ಪರಿಚಿತನಾಗಿದ್ದಾನೆ ಎಂದು ತಿಳಿದುಬಂದಿದೆ. ಈತನೇ ಈಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಬಳಿಕ ಮತ್ತಿಬ್ಬರನ್ನು ಕರೆಸಿಕೊಂಡಿದ್ದ ಎಂದು ಹೇಳಲಾಗುತ್ತಿದೆ. ಯುವತಿಯು ಜೇನುಕೃಷಿ ಮಾಡಿಕೊಂಡಿರುತ್ತಿದ್ದಳು. ಈಕೆಯ ಕುಟುಂಬ ಕೆಲವು ವರ್ಷಗಳ ಹಿಂದೆಯೇ ಕಾರ್ಕಳಕ್ಕೆ ಬಂದು ನೆಲೆಸಿತ್ತು ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Missing

Udupi: ಬನ್ನಂಜೆ ನಿವಾಸಿ ನಾಪತ್ತೆ

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

Kaup: ಸ್ಕೂಟಿಗೆ ರಿಕ್ಷಾ ಢಿಕ್ಕಿ; ಗಾಯ

Kaup: ಸ್ಕೂಟಿಗೆ ರಿಕ್ಷಾ ಢಿಕ್ಕಿ; ಸವಾರನಿಗೆ ಗಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.