Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು
Team Udayavani, Sep 30, 2024, 4:17 PM IST
ಕಾರ್ಕಳ: ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೋಮವಾರ (ಸೆ.30) ನಡೆದಿದೆ.
ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಪತಿ ಮತ್ತು ಮೂವರು ಮಕ್ಕಳು ಸಾವನಪ್ಪಿದ್ದಾರೆ ಎಂದು ವರದಿ ಹೇಳಿದೆ.
ಮೃತರನ್ನು ಸುರೇಶ್ ಆಚಾರ್ಯ (36 ವ), ಮಕ್ಕಳಾದ ಸುಮೀಕ್ಷಾ (7 ವ) ಸುಶ್ಮಿತಾ (5 ವ), ಸುಶಾಂತ್ (2 ವ) ಎಂದು ಗುರುತಿಸಲಾಗಿದೆ. ಸುರೇಶ್ ಆಚಾರ್ಯ ಅವರ ಪತ್ನಿ ಮೀನಾಕ್ಷಿ (32 ವ) ಗಂಭೀರ ಗಾಯಗೊಂಡಿದ್ದು, ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ನಲ್ಲೂರು ಗ್ರಾಮದ ಕೊಡಪಟ್ಯಾ ಮನೆಯವರು. ಇವರು ವೇಣೂರಿನಿಂದ ನಲ್ಲೂರಿಗೆ ಬರುತ್ತಿದ್ದರು. ಈ ವೇಳೆ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್
Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್ ವಿದ್ಯಾರ್ಥಿಗಳು
Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ
Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ
VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.