ಹೆಬ್ರಿ ತಾಲೂಕು ಆಡಳಿತಕ್ಕೆ ವಾಣಿಜ್ಯ ಮಳಿಗೆ, ಕ್ವಾಟ್ರಸ್‌ ನಿರ್ವಹಣೆ ಜವಾಬ್ದಾರಿ

ಕಾರ್ಕಳ ತಾ.ಪಂ. ಸಾಮಾನ್ಯ ಸಭೆ

Team Udayavani, Apr 30, 2022, 12:55 PM IST

meeting

ಕಾರ್ಕಳ: ಹೆಬ್ರಿ ತಾಲೂಕಿನ ವಾಣಿಜ್ಯ ಮಳಿಗೆ, ಕ್ವಾಟ್ರಸ್‌ ನಿರ್ವಹಣೆ ಜವಾಬ್ದಾರಿಯನ್ನು ಇದುವರೆಗೆ ಕಾರ್ಕಳ ತಾ.ಪಂ. ವತಿಯಿಂದಲೇ ನಿರ್ವಹಿಸಲಾಗುತ್ತಿತ್ತು. ಅದರ ಪೂರ್ಣ ಜವಾಬ್ದಾರಿಯನ್ನು ಇನ್ನು ಮುಂದೆ ಹೆಬ್ರಿ ತಾ.ಪಂ.ಗೇ ವಹಿಸಲು ಕಾರ್ಕಳ ತಾ.ಪಂನಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು.

ಕಾರ್ಕಳ ತಾ.ಪಂ. ಸಾಮಾನ್ಯ ಸಭೆ ಶುಕ್ರವಾರ ತಾ.ಪಂ. ಸಾಮರ್ಥ್ಯ ಸಭಾಂಗಣದಲ್ಲಿ ನಡೆಯಿತು. ಪ್ರತಿಭಾ ಆರ್‌. ಕಾರ್ಕಳ ತಾ.ಪಂ. ಆಡಳಿತಾಧಿಕಾರಿ, ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ ಉಡುಪಿ ಅಧ್ಯಕ್ಷತೆ ವಹಿಸಿದ್ದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಗುರುದತ್ತ್, ಸಹಾಯಕ ಲೆಕ್ಕಾಧಿಕಾರಿ ನಿತಿನ್‌ಕುಮಾರ್‌, ಕಚೇರಿ ವ್ಯವಸ್ಥಾಪಕ ರಾಮದಾಸ್‌ ಉಪಸ್ಥಿತರಿದ್ದರು. ಸಭೆಯಲ್ಲಿ ಶಿಕ್ಷಣ ಇಲಾಖೆಯ 2022-23ನೇ ಸಾಲಿನ ಯೋಜನೇತರ ಶೀರ್ಷಿಕೆಯಡಿ ಕಚೇರಿಗೆ 6 ಬ್ಯಾಟರಿಗಳ ಖರೀದಿಗೆ ದರ ಪಟ್ಟಿ ಅನುಮೋದನೆ ನೀಡಲಾಯಿತು. 2023- 24ನೇ ಸಾಲಿನ ತಾ.ಪಂ. ವೇತನ/ ವೇತನೇತರ ಆಯವ್ಯಯಕ್ಕೆ ಅನುಮೋದನೆ ನೀಡುವ ಕುರಿತು ಚರ್ಚಿಸಲಾಯಿತು.

ತಾಲೂಕಿನ 27 ಗ್ರಾ.ಪಂ.ಗಳ 2023-24ನೇ ಸಾಲಿನ ಆಯವ್ಯಯಕ್ಕೆ ಅನುಮೋದನೆ ನೀಡಲಾಯಿತು. 2022-23ನೇ ಸಾಲಿನಲ್ಲಿ ತಾ.ಪಂ.ಗೆ ಬಾಹ್ಯ ಮೂಲದಿಂದ ಸಿಬಂದಿಯನ್ನು ಪಡೆಯಲು ಹೊರಗುತ್ತಿಗೆ ಸಂಸ್ಥೆಯನ್ನು ಆಯ್ಕೆ ಮಾಡಲು ಕರೆಯಲಾದ ಇ-ಟೆಂಡರ್‌ ಪ್ರಕ್ರಿಯೆಗೆ ಅನುಮೋದನೆ ನೀಡುವ ಕುರಿತು ಚರ್ಚಿಸಲಾಯಿತು.

2021-22ನೇ ಸಾಲಿನ ತಾ.ಪಂ.ನ ಡಿಸೆಂಬರ್‌-2021, ಜನವರಿ-2022, ಫೆಬ್ರವರಿ-2022 ಹಾಗೂ ಮಾರ್ಚ್‌-2022 ಮಾಸಿಕ ಲೆಕ್ಕಪತ್ರ ಅನುಮೋದನೆ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು. ಸ್ಥಳೀಯ ಯೋಜನಾ ಪ್ರದೇಶದ ಹೊರಗಡೆ ಇರುವ ಭೂಪರಿವರ್ತನ ಸ್ಥಳಗಳಲ್ಲಿ ಏಕ/ಬಹು ವಿನ್ಯಾಸದ ಪ್ರಸ್ತಾವನೆಗೆ ಅನುಮೋದನೆಯನ್ನು ಸಭೆಯಲ್ಲಿ ನೀಡಲಾಯಿತು. ಹೆಬ್ರಿ ತಾ.ಪಂ.ಗೆ ಕೆಲವು ವಸ್ತುಗಳ ನಿರ್ವಹಣೆ ಜವಾಬ್ದಾರಿಯನ್ನು ಹಸ್ತಾಂತರಕ್ಕೆ ನಿರ್ಧರಿಸಲಾಯಿತು.

ಉಪ ತಹಶೀಲ್ದಾರ್‌ ಮಂಜುನಾಥ ನಾಯಕ್‌, ಕಂದಾಯ, ರೇಷ್ಮೆ, ಕಾರ್ಮಿಕ, ಮೀನುಗಾರಿಕೆ, ಕೃಷಿ, ಆರೋಗ್ಯ, ಪಶು ಸಂಗೋಪನ, ಶಿಶು ಅಭಿವೃದ್ಧಿ, ಪಿಆರ್‌ಇಡಿ, ಶಿಕ್ಷಣ, ಪಿಡಬ್ಲೂéಡಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.