Marriage”ಸಪ್ತಪದಿ’ ಶೀಘ್ರ ಮರು ಆರಂಭ? ಏನಿದು ಯೋಜನೆ?


Team Udayavani, Oct 4, 2023, 12:38 AM IST

Marriage”ಸಪ್ತಪದಿ’ ಶೀಘ್ರ ಮರು ಆರಂಭ? ಏನಿದು ಯೋಜನೆ?

ಉಡುಪಿ: ಮದುವೆಗೆ ದುಂದುವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಮುಜರಾಯಿ ಇಲಾಖೆ 2021ರಲ್ಲಿ ರಾಜ್ಯಾದ್ಯಂತ ಜಾರಿಗೆ ತಂದಿದ್ದ “ಸಪ್ತಪದಿ’ ಯೋಜನೆ ಮುಂದುವರಿಯುವ ಸೂಚನೆ ಲಭಿಸಿದೆ.

ಬಿಜೆಪಿ ಸರಕಾರದಲ್ಲಿ ಮುಜರಾಯಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರ ಮುತುವರ್ಜಿಯಿಂದ “ಸಪ್ತಪದಿ’ ಆರಂಭವಾಗಿತ್ತು. ಹೊಸ ಸರಕಾರ ಈ ಯೋಜನೆ ಮುಂದುವರಿ ಸುವ ಬಗ್ಗೆ ಇದುವರೆಗೂ ಯಾವುದೇ ಸೂಚನೆ ಹೊರಡಿಸಿರಲಿಲ್ಲ. ಆದರೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಯೋಜನೆ ಮುಂದುವರಿಸುವ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿರು ವುದು ಯೋಜನೆಯ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಂತಾಗಿದೆ.

ಏನಿದು ಯೋಜನೆ?
ವಧು-ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವ ಜತೆಗೆ ಎರಡೂ ಕಡೆಯ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇಗುಲಗಳ ಆಡಳಿತ ಮಂಡಳಿಗಳೇ ಮಾಡುತ್ತಿದ್ದವು. ಮದುಮಗನಿಗೆ ಅಂಗಿ, ಧೋತಿ ಹಾಗೂ 5 ಸಾವಿರ ರೂ.ನಗದು ಸಹಾಯ, ವಧುವಿಗೆ ಸೀರೆ, 1 ಸಾವಿರ ರೂ.ನಗದು ಮತ್ತು ಮಾಂಗಲ್ಯ ಸೂತ್ರಕ್ಕಾಗಿ 8 ಗ್ರಾಂ ಚಿನ್ನವನ್ನು ನೀಡಲಾಗುತ್ತಿತ್ತು. ವಧು ಮತ್ತು ವರರಿಬ್ಬರಿಗೂ ಒಟ್ಟು ಸಹಾಯದ ಮೊತ್ತ ಸುಮಾರು 55 ಸಾವಿರ ರೂ.ಆಗುತ್ತಿದ್ದು, ಪ್ರತೀ ಜೋಡಿಗೆ ಮದುವೆ ಸಮಾರಂಭಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಲು ದೇವಸ್ಥಾನಗಳಿಗೆ ಸರಕಾರದ ವತಿಯಿಂದ 55 ಸಾವಿರ ರೂ.ನೀಡಲಾಗುತ್ತಿತ್ತು.

ಕೋಟ್ಯಂತರ ರೂ. ವೆಚ್ಚ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಈ ಯೋಜನೆಗಾಗಿ 13,95,293 ರೂ., ಮಂದಾರ್ತಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ 32,92,591 ರೂ., ಕಮಲಶಿಲೆಯ ಶ್ರೀ ಬ್ರಾಹ್ಮಿà ದುರ್ಗಾಪರಮೇಶ್ವರೀ ದೇವಸ್ಥಾನ 1,50,000 ರೂ., ನೀಲಾವರದ ಶ್ರೀ ಮಹಿಷಮರ್ದಿನಿ ದೇವಸ್ಥಾನ 1,17,265 ರೂ., ಕೋಟದ ಶ್ರೀ ಅಮೃತೇಶ್ವರೀ ದೇವಸ್ಥಾನ 8,19,024 ರೂ., ಮಾರಣಕಟ್ಟೆಯ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ 17,26,172 ರೂ.ಗಳನ್ನು ಇದಕ್ಕಾಗಿ ವಿನಿಯೋಗಿಸಿದೆ.

ಉಡುಪಿಯಲ್ಲಿ 153 ಜೋಡಿ ವಿವಾಹ
ಸಪ್ತಪದಿ ಯೋಜನೆಯ ಅನ್ವಯ 2021ರಿಂದ 2023ರ ಮಾರ್ಚ್‌ ತಿಂಗಳವರೆಗೆ ಕೊಲ್ಲೂರು ಶ್ರೀ ಮೂಖಾಂಬಿಕಾ ದೇವಸ್ಥಾನದಲ್ಲಿ ಇದುವರೆಗೆ 23 ಜೋಡಿ, ಮಂದಾರ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 76, ಕಮಲಶಿಲೆಯ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 3, ನೀಲಾವರದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 2, ಕೋಟದ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ 12, ಮಾರಣಕಟ್ಟೆಯ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ 37 ಜೋಡಿ ವಿವಾಹವಾಗಿದ್ದಾರೆ.

ಸಪ್ತಪದಿ ಯೋಜನೆಯ ಬಗ್ಗೆ ಹಲವಾರು ಮಂದಿ ವಿಚಾರಿಸುತ್ತಿದ್ದಾರೆ. ಆದರೆ ಯೋಜನೆಯನ್ನು ಮುಂದುವರಿಸುವ ಬಗ್ಗೆ ಇದುವರೆಗೂ ಸರಕಾರದಿಂದ ಯಾವುದೇ ಸೂಚನೆ ಬಂದಿಲ್ಲ. ಬಂದಲ್ಲಿ ಎಲ್ಲ ಅಗತ್ಯಕ್ರಮಗಳನ್ನು ತೆಗೆದುಕೊಳ್ಳುವಂತೆ ದೇವಸ್ಥಾನಗಳಿಗೆ ಸೂಚಿಸಲಾಗುವುದು.
– ಪ್ರಶಾಂತ್‌ ಕುಮಾರ್‌ ಶೆಟ್ಟಿ, ಸಹಾಯಕ ಆಯುಕ್ತರು,
ಧಾರ್ಮಿಕ ದತ್ತಿ ಇಲಾಖೆ

ಆಷಾಢ ತಿಂಗಳಿದ್ದ ಕಾರಣ ಈ ಬಗ್ಗೆ ಯಾವುದೇ ಸೂಚನೆ ಹೊರಡಿಸಿಲ್ಲ. ಈ ಯೋಜನೆಯನ್ನು ಸ್ಥಗಿತಗೊಳಿಸುವ ಉದ್ದೇಶವಿಲ್ಲ. ಶೀಘ್ರದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು.
– ರಾಮಲಿಂಗಾರೆಡ್ಡಿ, ಸಚಿವರು, ಧಾರ್ಮಿಕ ದತ್ತಿ ಇಲಾಖೆ

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

13(3)

Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!

7

Udupi: ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.