ಕಾಪು ಬೀಚ್‌ನಲ್ಲಿ ಭಾರೀ ಜನ ಸಾಗರ

ಟ್ರಾಫಿಕ್‌ ಜಾಂ; ಪಾರ್ಕಿಂಗ್‌ಗೆ ಪರದಾಟ

Team Udayavani, Nov 8, 2021, 5:29 AM IST

ಕಾಪು ಬೀಚ್‌ನಲ್ಲಿ ಭಾರೀ ಜನ ಸಾಗರ

ಕಾಪು: ದೀಪಾವಳಿ ಸಂಭ್ರಮ, ಸರಣಿ ರಜೆ ಮತ್ತು ವಾರಾಂತ್ಯದ ರಜಾ ದಿನದ ಕಾರಣದಿಂದಾಗಿ ಕಾಪು ಬೀಚ್‌ನಲ್ಲಿ ರವಿವಾರ ಭಾರೀ ಜನ ಸಾಗರ ಕಂಡು ಬಂದಿದೆ.

ರವಿವಾರ ಕಾಪು ಬೀಚ್‌ಗೆ ಸಾವಿರಾರು ಮಂದಿ ಆಗಮಿಸಿದ್ದರು. ಇದರಿಂದಾಗಿ ಬೀಚ್‌ಗೆ ಬರುವ ಸಂಪರ್ಕ ರಸ್ತೆಯಲ್ಲಿ ಸಂಪೂರ್ಣ ಟ್ರಾಫಿಕ್‌ ಜಾಂ ಉಂಟಾಯಿತು.

ಬೀಚ್‌ನ ಪಾರ್ಕಿಂಗ್‌ ಪ್ರದೇಶ ಹೌಸ್‌ ಫುಲ್‌ ಆಗಿದ್ದು, ಪ್ರವಾಸಿಗರು ಮತ್ತು ಸ್ಥಳೀಯರು ವಾಹನ ಪಾರ್ಕಿಂಗ್‌ ಮಾಡಲು ಪರದಾಡುವಂತಾಯಿತು.

ಕಾಪು ಬೀಚ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದೀಪಾಲಂಕಾರ ಮಾಡಲಾಗಿದ್ದು, ದೀಪಾವಳಿಯ ಎರಡು ಬೀಚ್‌ ನಿರ್ವಹಣೆಯ ಉಸ್ತುವಾರಿ ವಹಿಸಿರುವ ಲಾಲ್‌ ಬಹದ್ದೂರ್‌ ಶಾಸ್ತ್ರಿ ಸ್ಪೋರ್ಟ್ಸ್ ಆ್ಯಂಡ್‌ ಕಲ್ಚರಲ್‌ ಕ್ಲಬ್‌ ವತಿಯಿಂದ ಸುಡುಮದ್ದು ಪ್ರದರ್ಶನ, ಸಂಗೀತ ಸಂಜೆ ಸಹಿತವಾಗಿ ಜನಾಕರ್ಷಣೆ ಗಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇದರಿಂದಾಗಿ ರವಿವಾರ ಕೂಡ ಕಾಪು ಬೀಚ್‌ ವಿಶೇಷ ಜನಾಕರ್ಷಣೆಯ ಕೇಂದ್ರವಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ:ಮುಸ್ಲಿಮೇತರರಿಗೆ ಕೌಟುಂಬಿಕ ಕಾನೂನು ಸವಲತ್ತು : ಅಬುಧಾಬಿ ಸರ್ಕಾರದಿಂದ ಮಹತ್ವದ ನಿರ್ಧಾರ

ಕೊರೊನಾ ಕಾರಣದಿಂದಾಗಿ ಕಳೆದ ಎಪ್ರಿಲ್‌ನಿಂದೀಚೆಗೆ‌ ವಿಶ್ವ ವಿಖ್ಯಾತ ಕಾಪು ಬೀಚ್‌ಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ವಿರಳವಾಗಿತ್ತು. ಆದರೆ ಕೊರೊನಾ ಸಂಬಂಧಿ ಲಾಕ್‌ಡೌನ್‌ ಸಹಿತವಾಗಿ ಹಲವಾರು ನಿರ್ಬಂಧಗಳನ್ನು ಸರಕಾರ ತೆರವುಗೊಳಿಸಿದ್ದು ಪ್ರವಾಸಿಗರು ಮತ್ತು ಸಾರ್ವಜನಿಕರು ಮುಕ್ತವಾಗಿ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಅವಕಾಶ ದೊರಕಿದೆ. ಇದರಿಂದಾಗಿ ಕಾಪು ಬೀಚ್‌ಗೂ ಕಳೆದ ಕೆಲವು ದಿನಗಳಿಂದ ಜನ ಸಾಗರವೇ ಹರಿದು ಬರುತ್ತಿದೆ.

ಇನ್ನೂ ತೆರೆದುಕೊಳ್ಳದ ಲೈಟ್‌ ಹೌಸ್‌
ಕಾಪು ಬೀಚ್‌ನಲ್ಲಿ ಜನಾಕರ್ಷಣೆಯ ಕೇಂದ್ರವಾಗಿರುವ ಬ್ರಿಟಿಷ್‌ ಕಾಲದ ಶತಮಾನೋತ್ಸವದ ಸಂಭ್ರಮದಲ್ಲಿದೆ. ಕಾಪು ಬೀಚ್‌ಗೆ ಆಗಮಿಸುವ ಪ್ರತಿಯೊಬ್ಬ ಪ್ರವಾಸಿಗರು ಕೂಡ ಲೈಟ್‌ಹೌಸ್‌ನ ಮೇಲೇರುವ ಕನಸು ಹೊತ್ತುಕೊಂಡೇ ಬರುತ್ತಾರೆ. ಆದರೆ ಕೊರೊನಾ ಸಂದರ್ಭ ಲೈಟ್‌ ಹೌಸ್‌ ಪ್ರವೇಶಕ್ಕೆ ವಿಧಿಸಲಾಗಿರುವ ನಿರ್ಬಂಧವನ್ನು ಸರಕಾರ, ಲೈಟ್‌ ಹೌಸ್‌ ಇಲಾಖೆಯು ಇನ್ನೂ ತೆರವು ಗೊಳಿಸದಿರುವುದರಿಂದ ಪ್ರವಾಸಿಗರು ನಿರಾಸೆ ಪಡುವಂತಾಗಿದೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.