ಜೂ.11-12:ಕಾಪು ಮಾರಿಯಮ್ಮ, ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ


Team Udayavani, Jun 9, 2023, 5:15 PM IST

ಜೂ.11-12:ಕಾಪು ಮಾರಿಯಮ್ಮ, ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ

ಕಾಪು: ಸುಮಾರು ಮೂವತ್ತೈದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಶ್ರೀ ಮಾರಿಯಮ್ಮ ಮತ್ತು ಶ್ರೀ ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ ಧಾರ್ಮಿಕ ಕಾರ್ಯಕ್ರಮವು ಜೂ. 11 ಮತ್ತು 12 ರಂದು ನಡೆಯಲಿದೆ ಎಂದು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ತಿಳಿಸಿದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶುಕ್ರವಾರ ಜರಗಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊದಲ ಹಂತದ ಕಾಮಗಾರಿಗೆ ಅನುಗುಣವಾಗಿ ಅಗ್ರಸಭೆ, ಮುಖ ಮಂಟಪ ನಿರ್ಮಾಣವಾಗಬೇಕಿದ್ದು ಅದಕ್ಕೆ ಪೂರ್ವಭಾವಿಯಾಗಿ ಪ್ರಸ್ತುತ ಇರುವ ಮಾರಿಯಮ್ಮ ಗುಡಿ ಮತ್ತು ಉಚ್ಚಂಗಿ ಗುಡಿಗಳನ್ನು ವಿಸರ್ಜಿಸಬೇಕಾಗಿದೆ. ಈ ಉದ್ದೇಶದಿಂದ ಅಮ್ಮನ ಅಭಯ ನುಡಿ ಮತ್ತು ಪ್ರಾಜ್ಞರ ಪ್ರಶ್ನಾ ಚಿಂತನೆಯಂತೆ ತಾತ್ಕಾಲಿಕ ಗುಡಿಗಳನ್ನು ನಿರ್ಮಿಸಲಾಗಿದ್ದು ಜೂ. 11ರಂದು ಬೆಳಿಗ್ಗೆ ಗಂಟೆ 8 ರಿಂದ ಚಂಡಿಕಾಯಾಗ ಪ್ರಾರಂಭಗೊಂಡು, 11 ಕ್ಕೆ ಪೂರ್ಣಾಹುತಿ, ಪ್ರಸಾದ ವಿತರಣೆ ನಡೆಯಲಿದೆ.

ಜೂ. 12ರಂದು ಅಮ್ಮನ ಗದ್ದುಗೆ ಸಾನ್ನಿಧ್ಯ ಚಲನೆ ನಡೆಯಲಿದ್ದು ಬೆಳಿಗ್ಗೆ ಗಂಟೆ 7 ರಿಂದ ಧಾರ್ಮಿಕ ಕಾರ್ಯಕ್ರಮಗಳು ನಡೆದು 8.30 ಕ್ಕೆ ನೂತನ ತಾತ್ಕಾಲಿಕ ಗುಡಿಯಲ್ಲಿ ಸಾನಿಧ್ಯ ಪ್ರತಿಷ್ಠೆ ನಡೆಯಲಿದೆ. ಕ್ಷೇತ್ರದ ತಂತ್ರಿಗಳಾದ ಜ್ಯೋತಿರ್ವಿದ್ವಾನ್ ಕೆ.ಜಿ. ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ, ಜ್ಯೋತಿರ್ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಅವರ ಸಹಕಾರದೊಂದಿಗೆ ಚಂಡಿಕಾಯಾಗ, ಸಾನಿಧ್ಯ ಚಲನೆ, ಮತ್ತು ಸಾನಿಧ್ಯ ಪ್ರತಿಷ್ಠಾಪೂರ್ವಕ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಬೆಳಿಗ್ಗೆ 10 ಗಂಟೆಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟ್ಟಿ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಉಡುಪಿ ಜಿಲ್ಲಾಧಿಕಾರಿ ಡಾ| ಕೂರ್ಮಾ ರಾವ್ ಎಂ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಸಮಿತಿ ಮುಖಂಡರಾದ ಸರ್ವೋತ್ತಮ ಶೆಟ್ಟಿ ಅಬುದಾಭಿ, ಮಲ್ಲಾರು ಶಶಿಧರ್ ಶೆಟ್ಟಿ ಮಸ್ಕತ್, ಮೂಳೂರು ಸುಧಾಕರ ಹೆಗ್ಡೆ ಮುಂಬಯಿ, ರವಿ ಸುಂದರ್ ಶೆಟ್ಟಿ ಮುಂಬಯಿ, ಸಂತೋಷ್ ಶೆಟ್ಟಿ ಇನ್ನಾ ಬಾಳಿಕೆ ಕುರ್ಕಿಲಬೆಟ್ಟು, ಉಪೇಂದ್ರ ಶೆಟ್ಟಿ ಬೆಂಗಳೂರು, ವಿವಿಧ ಸಮಾಜದ ಗಣ್ಯರಾದ ಎಂ.ಬಿ. ಪುರಾಣಿಕ್, ಆನಂದ್ ಎಂ. ಶೆಟ್ಟಿ, ಡಾ| ಜಿ. ಶಂಕರ್, ಬಿ.ಎನ್. ಶಂಕರ ಪೂಜಾರಿ, ಧರ್ಮಪಾಲ್ ಯು. ದೇವಾಡಿಗ, ಗಂಗಾಧರ ಆಚಾರ್ಯ, ರಾಮದಾಸ್ ಶೆಟ್ಟಿಗಾರ್, ಗೋಕುಲ್‌ದಾಸ್ ಬಾರ್ಕೂರು, ಜಯ ರಾಣ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲೆಯ ಪ್ರಸಿದ್ಧ ಕ್ಷೇತ್ರವಾದ ಮಾರಿಯಮ್ಮನ ಕ್ಷೇತ್ರವು ಊರ ಪರವೂರ ಭಕ್ತಾದಿಗಳು ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳ ಪಾಲ್ಗೊಳ್ಳುವಿಕೆಯೊಂದಿಗೆ ಶಿಲಾಸೇವೆಯೆಂಬ ವಿನೂತನ ಕಲ್ಪನೆಯ ಸಾಕಾರದೊಂದಿಗೆ ತ್ವರಿತಗತಿಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದೆ. ದೇಶ-ವಿದೇಶಗಳಲ್ಲಿರುವ ಅಮ್ಮನ ಭಕ್ತಾದಿಗಳು ಮತ್ತು ಸ್ವಯಂ ಸೇವಕರು ಕಂಕಣಬದ್ಧರಾಗಿ ಅಹರ್ನಿಶಿ ದುಡಿದು ಶಿಲಾ ಸೇವೆಯ ಮುಖೇನ ಸೇವೆಗೈಯ್ಯುತ್ತಿರುವುದು ಅಭಿನಂದನಾರ್ಹವಾಗಿದೆ. ಮುಂದಿನ ಕೆಲಸ ಕಾರ್ಯಗಳಲ್ಲೂ ಎಲ್ಲರ ಸಹಕಾರವನ್ನು ನಿರೀಕ್ಷಿಸಲಾಗುತ್ತಿದೆ ಎಂದರು.

ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಯನ್ನು ತಾತ್ಕಾಲಿಕ ಗುಡಿಯಲ್ಲಿ ಸಾನಿಧ್ಯ ಪ್ರತಿಷ್ಠೆಯಾದ ಬಳಿಕ ತಾತ್ಕಾಲಿಕ ಗುಡಿಯಲ್ಲಿ ಹರಕೆ ಮಾರಿಪೂಜೆ, ಹರಕೆ ಚಂಡಿಕಾಯಾಗ ಹೊರತು ಪಡಿಸಿ ಮಂಗಳವಾರದಂದು ನಡೆಯುವ ಪೂಜೆ, ಸೇವೆ ಮತ್ತು ದರ್ಶನ ಸೇವೆ ಹಾಗೂ ಕಾಲಾವಧಿ ಮಾರಿಪೂಜೆ, ನವರಾತ್ರಿ ಉತ್ಸವ ನಡೆಯಲಿದೆ. ಮುಂದಿನ ನವರಾತ್ರಿ ಉತ್ಸವದ ಕಾಲದಲ್ಲಿ ನವ ನಿರ್ಮಾಣಗೊಳ್ಳುತ್ತಿರುವ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ ನಡೆಸಿ, 2024ರ ಸುಗ್ಗಿ ಮಾರಿಪೂಜಾ ಮಹೋತ್ಸವಕ್ಕೆ ಮುನ್ನ ನೂತನ ಗರ್ಭಗುಡಿಯ ಸ್ವರ್ಣ ಗದ್ದುಗೆಯಲ್ಲಿ ಮಾರಿಯಮ್ಮ ದೇವಿ, ಉಚ್ಚಂಗಿ ದೇವಿಯ ಪ್ರತಿಷ್ಠೆ ನಡೆಯಲಿದೆ.

ಸುದ್ಧಿಗೋಷ್ಠಿಯಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಗಂಗಾಧರ ಸುವರ್ಣ, ದೇವಿಪ್ರಸಾದ್ ಶೆಟ್ಟಿ, ಮನೋಹರ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಯೋಗೀಶ್ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.