ಕೊಕ್ಕರ್ಣೆ: ಬೆಂಕಿ ಆಕಸ್ಮಿಕಕ್ಕೆ ಮನೆ ನಾಶ
Team Udayavani, Dec 17, 2017, 11:16 AM IST
ಬ್ರಹ್ಮಾವರ: ಕೊಕ್ಕರ್ಣೆ ಕೆಳಪೇಟೆಯ ಶೋಭಾ ಉಮೇಶ್ ನಾಯಕ್ ಅವರ ಮನೆಗೆ ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ ನಾಶವಾಗಿದೆ. ಪ್ರಾರಂಭದಲ್ಲಿ ದೇವರ ಕೋಣೆಯಲ್ಲಿ ಬೆಂಕಿ ಹತ್ತಿಕೊಂಡು ನಂತರ ಬೇರೆಡೆಗೆ ವ್ಯಾಪಿಸಿತು. ಗೈಂಡರ್, ಗ್ಯಾಸ್ ಗೀಜರ್, ಫ್ರಿಜ್, ಗೋದ್ರೆಜ್, ಮಂಚ, ಬೆಳ್ಳಿ ವಸ್ತುಗಳು, ಬೆಲೆ ಬಾಳುವ ಸೀರೆಗಳು ಬೆಂಕಿಗೆ ಆಹುತಿಯಾಗಿವೆ.
ಘಟನೆ ಸಂದರ್ಭ ಶೋಭಾ ನಾಯಕ್ ಒಬ್ಬರೇ ಮನೆಯಲ್ಲಿದ್ದು, ಅಡುಗೆ ಕೋಣೆಯಲ್ಲಿ ಊಟ ಮಾಡುತ್ತಿದ್ದರು. ಅವರು ಅಪಾಯದಿಂದ ಪಾರಾಗಿದ್ದಾರೆ.ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೆಂಕಿ ಯನ್ನು ನಂದಿಸಿದರು. ಘಟನೆಯಿಂದ 4 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ಸಚಿವ ಪ್ರಮೋದ್ ಮಧ್ವರಾಜ್ ಭೇಟಿ ನೀಡಿ ಪರಿಹಾರದ ಭರವಸೆ ನೀಡಿದರು. ಜಿ.ಪಂ. ಸದಸ್ಯರಾದ ಪ್ರತಾಪ್ ಹೆಗ್ಡೆ, ಸುಧಾಕರ ಶೆಟ್ಟಿ, ತಾ.ಪಂ. ಸದಸ್ಯರಾದ ಡಾ| ಸುನೀತಾ ಡಿ. ಶೆಟ್ಟಿ, ಭುಜಂಗ ಶೆಟ್ಟಿ, ಪಂಚಾಯತ್ ಜನಪ್ರತಿನಿಧಿಗಳು ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.