ಯೋಜನೆಗಳನ್ನು ಪಡೆದುಕೊಳ್ಳುವಲ್ಲಿ ಕೊರಗ  ಸಮುದಾಯ ಹಿಂದೇಟು:ಡಿಸಿ


Team Udayavani, Jul 5, 2018, 10:34 AM IST

0407klre1.png

ಕೋಟೇಶ್ವರ: ಕೊರಗ ಸಮುದಾಯದ ಅಭಿವೃದ್ಧಿಗೆ ಸರಕಾರ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಆದರೆ ಅದನ್ನು ಪಡೆದು ಕೊಳ್ಳುವಲ್ಲಿ ಸಮುದಾಯ ಹಿಂದೇಟು ಹಾಕುತ್ತಿದೆ. ಶಿಕ್ಷಣದ ಕೊರತೆ, ಕೀಳರಿಮೆ, ಅಂಜಿಕೆಯಿಂದ ಯುವ ಜನತೆ ಕೂಡ ಮುಂದೆ ಬರುತ್ತಿಲ್ಲ.ಇದನ್ನುಗಮನಿಸಿದ ಜಿಲ್ಲಾಡಳಿತ ಕೊರಗ ಸಮುದಾಯಕ್ಕೆ ಮನೋಸ್ಥೈರ್ಯ ನೀಡುವ ನಿಟ್ಟಿನಲ್ಲಿಆಯ್ದ ಗ್ರಾ.ಪಂ.ಮಟ್ಟದಲ್ಲಿ ಪ್ರತೀ ವಾರ ಸಭೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಮುಂದಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹೇಳಿದರು.

ಗೋಪಾಡಿ ಗ್ರಾ.ಪಂ. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊರಗ ಸಂಘಟನೆ ಉಡುಪಿ ಇವರ ಆಶ್ರಯದಲ್ಲಿ ರೋಶನಿ ಧಾಮದಲ್ಲಿ ಜು. 4ರಂದು ನಡೆದ ಕೊರಗ ಸಮುದಾಯದ ಯುವ ಜನತೆಗೆ ಶೈಕ್ಷಣಿಕ ಹಾಗೂ ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೊರಗ ಸಮುದಾಯದ ವಿದ್ಯಾರ್ಥಿಗಳು 10ನೇ ತರಗತಿಗೆ ಮುಂಚೆ ಶಾಲೆ ಬಿಡುವುದು ಸರಿಯಲ್ಲ. ಕನಿಷ್ಠ 10ನೇ ತರಗತಿಯ ತನಕವಾದರೂ ಓದಬೇಕು. ಇವತ್ತು ನಿಮ್ಮಲ್ಲಿಯ ಕೌಶಲ್ಯ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಅವುಗಳನ್ನು ಸದುಪಯೋಗ ಮಾಡಿಕೊಳ್ಳಿ ಎಂದರು.ನಿಮ್ಮ ಸಮುದಾಯದ ಕಲೆ, ಕರಕುಶಲ ಕೌಶಲಗಳು ಗೌರವಾರ್ಹವಾದುದು. ಅದನ್ನು ಸದ್ಬಳಕೆ ಮಾಡಿಕೊಳ್ಳಲು ಅವಕಾಶ ಗಳಿವೆ. ಕೊರಗ ಸಮುದಾಯದ  ವಿಚಾರದಲ್ಲಿ ಗೋಪಾಡಿ ಗ್ರಾ.ಪಂ. ವಿಶೇಷ ಆಸಕ್ತಿ ವಹಿಸಿದೆ ಎಂದರು.

ಕೊರಗರು ಮುಗ್ಧ ಜನರು
ಕಾರ್ಯಕ್ರಮ ಉದ್ಘಾಟಿಸಿದ  ಜಿ.ಪಂ.ಸದಸ್ಯೆ ಶ್ರೀಲತಾ ಸುರೇಶ ಶೆಟ್ಟಿ ಮಾತನಾಡಿ, ಕೊರಗ ಸಮುದಾಯದ ಜನ ಬಹಳ ಮುಗ್ಧರು. ಇದನ್ನು ದುರುಪಯೋಗ ಮಾಡಿಕೊಳ್ಳುವ ಅಪಾಯವೂ ಇದೆ. ಅಂಜಿಕೆ, ಶಿಕ್ಷಣಕ್ಕೆ ಪ್ರಾಮುಖ್ಯತೆ ಕೊಡದೆ ಇರುವುದು, ಜಾಗೃತಿ ಕೊರತೆಯೂ ಅವರ ಪ್ರಗತಿಯ ಹಿನ್ನೆಡೆಗೆ ಕಾರಣ ಎಂದರು. ಗ್ರಾ.ಪಂ.ಅಧ್ಯಕ್ಷೆ ಸರಸ್ವತಿ ಪುತ್ರನ್‌ ಅಧ್ಯಕ್ಷತೆ ವಹಿಸಿ ಮತನಾಡಿ, ಗೋಪಾಡಿ ಗ್ರಾ.ಪಂ. ಕೊರಗ ಸಮುದಾಯದ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡಿದೆ. ಕೊರಗ ಕಾಲೊನಿಗಳಿಗೆ ಭೇಟಿ ನೀಡಿ ಅವರ ಸಮಸ್ಯೆ ಆಲಿಸಿದ್ದೇವೆ. ಸಾಧ್ಯವಾದಷ್ಟು ಪರಿಹಾರ ಮಾಡುವ ಕೆಲಸವೂ ಆಗಿದೆ. ಗೋಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ 8,9 ನೇ ತರಗತಿಗೆ ಶಾಲೆ ಬಿಟ್ಟ ಕೊರಗ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಟ್ಯೂಷನ್‌ ನೀಡಿ ಎಸೆಸೆಲ್ಸಿ ಪರೀಕ್ಷೆಯನ್ನು ಬರೆಸುವ ಕಾರ್ಯ ಮಾಡುತ್ತಿದ್ದೇವೆ. ಇದಕ್ಕೆ ಒಬ್ಬರು ನುರಿತ ಶಿಕ್ಷಕರ ಆವಶ್ಯಕತೆ ಇದೆ ಎಂದರು.

ಜಿ.ಪಂ. ಕಾರ್ಯನಿರ್ವಹಣಾ ಧಿಕಾರಿ ಶಿವಾನಂದ ಕಾಪಸಿ, ತಾ.ಪಂ. ಸದಸ್ಯೆ ವೈಲೆಟ್‌ ಬರೆಟ್ಟೋ, ಗ್ರಾ.ಪಂ. ಉಪಾಧ್ಯಕ್ಷೆ ಕಲ್ಪನಾ ಭಾಸ್ಕರ, ಕೊರಗ ಸಂಘಟನೆ ಅಧ್ಯಕ್ಷ ಗಣೇಶ, ಗ್ರಾ.ಪಂ.ಸದಸ್ಯೆ ಬಬಿತಾ,  ಸಂಪನ್ಮೂಲ ವ್ಯಕ್ತಿ ನರೇಂದ್ರ ಕುಮಾರ್‌ ಕೋಟ, ಸಮಗ್ರ ಗಿರಿಜನ ಯೋಜನೆಯ ಇಲಾಖಾ ಅ ಕಾರಿ ಉಪಸ್ಥಿತರಿದ್ದರು. ಸರಸ್ವತಿ ಪುತ್ರನ್‌ ಸ್ವಾಗತಿಸಿ, ಕೊರಗ ಸಂಘಟನೆಯ ಗಣೇಶ ಬಾರಕೂರು ಪ್ರಾಸ್ತಾವಿಕ  ಮಾತುಗಳನ್ನಾಡಿದರು.  ಗ್ರಾ.ಪಂ.   ಅಭಿವೃದ್ಧಿ ಅಧಿಕಾರಿ ಗಣೇಶ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.