ಪೊಲೀಸ್‌ ಠಾಣೆ ಕಾಮಗಾರಿ ನಡೆದರೂ ಉದ್ಘಾಟನೆ ಭಾಗ್ಯವಿಲ್ಲ

ಕಟ್ಟಡದ ವಿನ್ಯಾಸ, ಮೂಲಸೌಕರ್ಯ ಕುರಿತು ಅಪಸ್ವರ

Team Udayavani, Mar 2, 2020, 5:14 AM IST

kota-police-station

ಕೋಟ: ಕೋಟ ಪೊಲೀಸ್‌ ಠಾಣೆಗೆ 75 ಲ.ರೂ. ವೆಚ್ಚದಲ್ಲಿ ಸುವ್ಯವಸ್ಥಿತ ನೂತನ ಕಟ್ಟಡ ನಿರ್ಮಾಣಗೊಂಡಿದ್ದು ಕಾಮಗಾರಿ ಮುಗಿದು ಎರಡು ತಿಂಗಳು ಕಳೆದರೂ ಉದ್ಘಾಟನೆ ಭಾಗ್ಯ ಬಂದಿಲ್ಲ. ಕಟ್ಟಡದ ವಿನ್ಯಾಸದಲ್ಲಿನ ದೋಷ ಹಾಗೂ ಮೂಲಸೌಕರ್ಯದ ಕೊರತೆಯ ಕಾರಣಕ್ಕೆ ಪೊಲೀಸ್‌ ಇಲಾಖೆ ಕಟ್ಟಡವನ್ನು ಪಡೆದಿಲ್ಲ, ಹಾಗೂ ಇದೇ ಕಾರಣಕ್ಕೆ ಉದ್ಘಾಟನೆ ವಿಳಂಬವಾಗುತ್ತಿದೆ ಎನ್ನಲಾಗಿದೆ.

ಅಪಸ್ವರ
ಸಾಮಾನ್ಯವಾಗಿ ಎಲ್ಲಾ ಕಡೆಗಳಲ್ಲಿ ಠಾಣೆಯ ಮುಖ್ಯದ್ವಾರವನ್ನು ದೊಡ್ಡದಾಗಿ ನಿರ್ಮಿಸಲಾಗುತ್ತದೆ. ಆದರೆ ಇಲ್ಲಿ ಮುಖ್ಯದ್ವಾರ ಕಿರಿದಾಗಿದೆ ಹಾಗೂ ಹಿಂಬದಿ ಬಾಗಿಲುಗಳು ಸರಿಯಾದ ದಿಕ್ಕಿನಲ್ಲಿ ಇಲ್ಲ. ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎನ್ನುವ ಅಪಸ್ವರಗಳು ಆರಂಭದಿಂದ ಕೇಳಿ ಬಂದಿತ್ತು. ಇದನ್ನೆಲ್ಲ ಪರಿಗಣಿಸದೆ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಹೀಗಾಗಿ ಇದೀಗ ಕಟ್ಟಡ ಹಸ್ತಾಂತರಕ್ಕೆ ಹಿಂದೇಟು ಹಾಕಲಾಗುತ್ತಿದೆ ಎನ್ನಲಾಗಿದೆ.

ಟೆಂಡರ್‌ನಲ್ಲಿರುವಂತೆ
ಕಾಮಗಾರಿ
ಕಾಮಗಾರಿಯ ಬಗ್ಗೆ ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಕರ್ನಾಟಕ ಪೊಲೀಸ್‌ ವಸತಿ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ಮಂಗಳೂರು ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಪ್ರಶ್ನಿಸಿದಾಗ, ಕೋಟ ಪೊಲೀಸ್‌ ಠಾಣೆಗೆ ಗ್ರೇಡ್‌ 3 ಕಟ್ಟಡ ಮಂಜೂರಾಗಿತ್ತು. ಹೀಗಾಗಿ ಗ್ರೇಡ್‌ 3ರ ನಿಯಮಾನುಸಾರ ಕಟ್ಟಡವನ್ನು ನಿರ್ಮಿಸಲಾಗಿದೆ. ಹೋಲೋಬ್ಲಾಕ್‌, ಎಂಸ್ಯಾಂಡ್‌ ಬಳಸಲಾಗಿದೆ, ಮುಖ್ಯದ್ವಾರ ಕಿರಿದಾಗಿದೆ ಎನ್ನುವ ದೂರಿದೆ. ಆದರೆ ಇಲ್ಲಿ ಬಳಸಿರುವುದು ಸಾಲಿಡ್‌ ಬ್ಲಾಕ್‌ ಮತ್ತು ಎಂಸ್ಯಾಂಡ್‌ ಬಳಕೆಗೆ ಸರಕಾರವೇ ಅನುಮತಿ ನೀಡಿದೆ.

ಯಾವುದೇ ದೋಷವಿಲ್ಲ

ಮುಖ್ಯದ್ವಾರವನ್ನು ಟೆಂಡರ್‌ನಲ್ಲಿರುವಂತೆ ನಿರ್ಮಿಸಲಾಗಿದೆ. ಕಟ್ಟಡದ ಗುಣಮಟ್ಟದಲ್ಲಿ ಯಾವುದೇ ದೋಷವಿಲ್ಲ. ಕುಡಿಯುವ ನೀರಿಗಾಗಿ ನಿರ್ಮಿಸಿದ ಕೊಳವೆ ಬಾವಿಯಲ್ಲಿ ನೀರು ಬಂದಿಲ್ಲ ಹೀಗಾಗಿ ಬೇರೆ ವ್ಯವಸ್ಥೆ ಮಾಡಲಾಗುತ್ತಿದೆ. ಯೋಜನೆಗೆ ಒಮ್ಮೆ ನೀಲನಕ್ಷೆ ಸಿದ್ಧವಾದ ಮೇಲೆ ನಿಗಮದ ಅನುಮತಿ ಇಲ್ಲದೆ ಕೆಳಹಂತದಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ. ಸಣ್ಣ-ಪುಟ್ಟ ಸಮಸ್ಯೆಗಳನ್ನು ಸರಿಪಡಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಹೊಸ ಕಟ್ಟಡಕ್ಕೆ ಸಾಕಷ್ಟು ಹೋರಾಟ
ಕೋಟದ ಈಗಿರುವ ಠಾಣೆಯ ಹಳೆಯ ಕಟ್ಟಡ 1996ರಲ್ಲಿ ನಿರ್ಮಾಣಗೊಂಡಿದ್ದು, ಪ್ರಸ್ತುತ ಸಂಪೂರ್ಣ ಶಿಥಿಲವಾಗಿ ಮಳೆಗಾಲದಲ್ಲಿ ಎಲ್ಲಾ ಕಡೆ ನೀರು ಸೋರುತ್ತಿತ್ತು. ಹಾಗೂ ಕೊಠಡಿಗಳು ಅತ್ಯಂತ ಕಿರಿದಾಗಿದ್ದು ಕಾರ್ಯನಿರ್ವಹಣೆಗೆ ಕಷ್ಟವಾಗುತ್ತಿದೆ. ಮಹಿಳಾ ಸಿಬಂದಿಗಳಿಗೆ ಪ್ರತ್ಯೇಕ ಶೌಚಾಲಯ ಮುಂತಾದ ವ್ಯವಸ್ಥೆ ಇಲ್ಲ. ಹೀಗಾಗಿ ಹೊಸ ಕಟ್ಟಡ ನಿರ್ಮಿಸುವಂತೆ ಸ್ಥಳೀಯರು 2015ರಲ್ಲಿ ಮನವಿ ಸಲ್ಲಿಸಿದ್ದರು. 2017ರಲ್ಲಿ ರಾಜ್ಯದ ವಿವಿಧ ಠಾಣೆಯ ಕಟ್ಟಡಗಳು ಮಂಜೂರಾಗುವ ಸಂದರ್ಭ ಈ ಕಾಮಗಾರಿಗೆ ಅನುಮೋದನೆ ದೊರೆತರೂ ಕಾಮಗಾರಿ ನಡೆದಿರಲಿಲ್ಲ. ಹೀಗಾಗಿ ಮತ್ತೆ ಹೋರಾಟ ನಡೆಸಿದ್ದರ ಫಲವಾಗಿ 2019 ಮಾಚ್‌ನಲ್ಲಿ ಹೊಸ ಕಟ್ಟಡದ ಕಾಮಗಾರಿ ಆರಂಭವಾಗಿತ್ತು.ಕಟ್ಟಡ ಉದ್ಘಾಟನೆಗೊಳ್ಳುವುದು ಎರಡು-ಮೂರು ತಿಂಗಳು ವಿಳಂಬವಾದಲ್ಲಿ ಈ ಬಾರಿ ಮಳೆಗಾಲದಲ್ಲೂ ಸಮಸ್ಯೆ ಮತ್ತೆ ಮುಂದುವರಿಯಲಿದೆ.

ಸಣ್ಣ ಮಾರ್ಪಾಡು ಇದೆ
ಕಟ್ಟಡದ ವಿನ್ಯಾಸದಲ್ಲಿ ದೋಷವಿದೆ ಎನ್ನುವ ಕುರಿತು ಆರಂಭದಲ್ಲಿ ಯಾವುದೇ ಲಿಖೀತ ದೂರು ಬಂದಿರಲಿಲ್ಲ. ಸಣ್ಣ-ಪುಟ್ಟ ಸಮಸ್ಯೆ ಇರುವ ಕುರಿತು ಮನವಿ ಬಂದಿದ್ದು ಸರಿಪಡಿಸುವ ಭರವಸೆ ನೀಡಿದ್ದೇವೆ. ಕೊಳವೆಬಾವಿ ವಿಫಲವಾದ್ದರಿಂದ ಇದೀಗ ತಾತ್ಕಾಲಿಕ ವ್ಯವಸ್ಥೆ ಮಾಡುತ್ತಿದ್ದು ಶಾಶ್ವತ ಬಾವಿ ನಿರ್ಮಾಣಕ್ಕೆ ಮನವಿ ಮಾಡಲಾಗಿದೆ.
-ಸಂತೋಷ್‌ ಕುಮಾರ್‌,
ಕೆ.ಪಿ.ಎಚ್‌.ಎಫ್‌.ಡಿ. ಎ.ಇ.ಇ.

ಶೀಘ್ರ ಉದ್ಘಾಟನೆ ನಡೆಯಲಿದೆ
ನಾನು ಅಧಿಕಾರ ವಹಿಸಿಕೊಂಡ ಮೇಲೆ ಈ ಕುರಿತು ಯಾವುದೇ ಅಧಿಕೃತ ದೂರು ಬಂದಿಲ್ಲ. ಸಣ್ಣಪುಟ್ಟ ಸಮಸ್ಯೆಗಳ ಬಗ್ಗೆ ತಿಳಿಸಿದ್ದು ಅದನ್ನು ಸರಿಪಡಿಸುವಂತೆ ತಿಳಿಸಿದ್ದೇನೆ. ಕಟ್ಟಡ ಶೀಘ್ರ ಉದ್ಘಾಟನೆ ನಡೆಯಲಿದೆ.
-ಎನ್‌.ವಿಷ್ಣುವರ್ಧನ್‌,
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಉಡುಪಿ

ಟಾಪ್ ನ್ಯೂಸ್

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.