ಕೋಟ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳ ಸಾವು


Team Udayavani, May 31, 2017, 12:54 PM IST

kota.jpg

ಕೋಟ: ಕೃಷಿಗಾಗಿ ನೆನೆ ಹಾಕಿದ ಬೀಜವನ್ನು ಮೇಲೆ ತೆಗೆಯಲು ಕೃಷಿ ಹೊಂಡಕ್ಕೆ ಇಳಿದ ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ದೇಲೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರದ ಬಯಲುಮನೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. 

ಇಲ್ಲಿನ ನರಸಿಂಹ ಶೆಟ್ಟಿ ಅವರ ಪುತ್ರಿ ಭಾರತಿ ಶೆಟ್ಟಿ (42) ಹಾಗೂ ಅವರ ಪುತ್ರಿಯರಾದ ಪೃಥ್ವಿ (21), ಪ್ರಜ್ಞಾ (18) ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟವರು. 

ಬೀಜದ ಭತ್ತವನ್ನು ಗೋಣಿ ಚೀಲದಲ್ಲಿ ಕಟ್ಟಿ ಹೊಲದಲ್ಲಿದ್ದ ಕೃಷಿ ಹೊಂಡದಲ್ಲಿ ನೆನೆಯಲು ಹಾಕಿದ್ದು, ಅದನ್ನು ನೀರಿನಿಂದ ತೆಗೆಯುವ ಸಂದರ್ಭ ಈ ದುರಂತ ಸಂಭವಿಸಿದೆ. ಮನೆಯಲ್ಲಿ ಮೂವರೂ ಇಲ್ಲದೇ ಇರುವುದನ್ನು ಗಮನಿಸಿ ನರಸಿಂಹ ಶೆಟ್ಟಿ ಅವರು ಕೃಷಿ ಹೊಂಡದ ಬಳಿ ಬಂದು ನೋಡಿದಾಗ ಕೆಲವು ಬೀಜದ ಚೀಲಗಳು ಮೇಲ್ಭಾಗದಲ್ಲಿ ಇರುವುದು ಕಂಡು ಬಂತು. ಅನುಮಾನಗೊಂಡ ಅವರು ಅಕ್ಕಪಕ್ಕದವರನ್ನು ಕೂಗಿ ಕರೆದಾಗ ಮೂವರು ಕೃಷಿ ಹೊಂಡದಲ್ಲಿ ಮುಳುಗಿರುವುದು ಬೆಳಕಿಗೆ ಬಂತು. ಬಳಿಕ ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಮೇಲೆತ್ತಲಾಯಿತು. 

ಭಾರತಿ ಶೆಟ್ಟಿ ಅವರ ಪತಿ ಸುರೇಂದ್ರ ಶೆಟ್ಟಿ ಅವರು ಅಂಪಾರಿನಲ್ಲಿರುವ ತನ್ನ ಮನೆ ಯಲ್ಲಿದ್ದುಕೊಂಡು ಕೃಷಿ ಮಾಡುತ್ತಿದ್ದರು. ಭಾರತಿ ಶೆಟ್ಟಿ ತನ್ನ ಇಬ್ಬರು ಪುತ್ರಿಯರೊಂದಿಗೆ ತಂದೆ ಮನೆಯಲ್ಲಿ ವಾಸಿಸುತ್ತಿದ್ದರು. ಸಂಜೆ 7.30ರ ಹೊತ್ತಿಗೆ ಘಟನೆ ಸಂಭವಿಸಿದ್ದು, ಈ ಬಗ್ಗೆ ತಿಳಿದ ಬಳಿಕ ಸುರೇಂದ್ರ ಶೆಟ್ಟಿ ದೇಲೆಟ್ಟುವಿಗೆ ಆಗಮಿಸಿದರು.

ಇಬ್ಬರೇ ಮಕ್ಕಳು
ನರಸಿಂಹ ಶೆಟ್ಟಿ ಅವರದ್ದು ಕೃಷಿ ಕುಟಂಬವಾಗಿದೆ. ಭಾರತಿ ಶೆಟ್ಟಿ-ಸುರೇಂದ್ರ ಶೆಟ್ಟಿ ದಂಪತಿಗೆ ಇಬ್ಬರೇ ಮಕ್ಕಳಿದ್ದು, ಅವರಿಬ್ಬರೂ ತಾಯಿಯೊಂದಿಗೆ ಕೃಷಿ ಸಂಬಂಧಿ ಕಾರ್ಯದಲ್ಲಿರುವಾಗಲೇ ಸಾವಿಗೀಡಾಗಿದ್ದಾರೆ. ಇಬ್ಬರು ಪುತ್ರಿಯರೂ ತಾಯಿಯೊಂದಿಗೆ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತಿದ್ದರು. ನೀರಿನಲ್ಲಿ ನೆನೆ ಹಾಕಿದ ಭತ್ತದ ಬೀಜವನ್ನು ತೆಗೆಯುವುದಕ್ಕಾಗಿ ಸಂಜೆಯ ವೇಳೆ ತಾಯಿಯೊಂದಿಗೆ ಇಬ್ಬರೂ ಪುತ್ರಿಯರೂ ಹೋಗಿದ್ದರು. ನೀರಿನಲ್ಲಿ ನೆನೆದು ಭಾರವಾಗಿದ್ದ ಗೋಣಿಯಲ್ಲಿದ್ದ ಭತ್ತವನ್ನು ಮೇಲೆತ್ತುವ ಸಂದರ್ಭ ಓರ್ವರು ಜಾರಿ ನಿಯಂತ್ರಣ ತಪ್ಪಿ ಬಿದ್ದಾಗ ಇತರ ಇಬ್ಬರು ಅವರನ್ನು ರಕ್ಷಿಸುವ ಯತ್ನದಲ್ಲಿ ನೀರಿಗೆ ಬಿದ್ದು ಸಾವಿಗೀಡಾಗಿರಬೇಕೆಂದು ಶಂಕಿಸಲಾಗಿದೆ. ಮೃತಪಟ್ಟ ಪೃಥ್ವಿ ಬ್ರಹ್ಮಾವರದ ಎಸ್‌ಎಂಎಸ್‌ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ಪ್ರಜ್ಞಾ ಅವರು ಆರ್‌.ಎನ್‌. ಶೆಟ್ಟಿ ಕಾಲೇಜಿನಲ್ಲಿ ಪಿಯುಸಿ ಪೂರ್ಣಗೊಳಿಸಿದ್ದರು. ಈ ಇಬ್ಬರು ಮಕ್ಕಳು ಪ್ರತಿಭಾವಂತರಾಗಿದ್ದರು. ಪೃಥ್ವಿ ಕೃಷಿ ಚಟುವಟಿಕೆ ಸಂದರ್ಭ ಟಿಲ್ಲರ್‌ ಬಳಸಿ ಗದ್ದೆ ಉಳುತ್ತಿದ್ದಳು.

ಮುಗಿಲು ಮುಟ್ಟಿದ ರೋದನ: ದೇಲೆಟ್ಟು ಬಯಲುಮನೆಯಲ್ಲಿ ನರಸಿಂಹ ಶೆಟ್ಟಿ ಅವರ ಪುತ್ರ, ಭಾರತಿ ಅವರ ತಮ್ಮ ಉಮೇಶ್‌ ಕೂಡ ವಾಸಿಸುತ್ತಿದ್ದರು. ಈಗ ಒಂದೇ ಮನೆಯ ಮೂವರನ್ನು ಕಳೆದುಕೊಂಡ ಕುಟುಂಬದ ರೋದನ ಮುಗಿಲುಮುಟ್ಟಿದೆ. 

ಘಟನ ಸ್ಥಳಕ್ಕೆ ಕೋಟ ಠಾಣಾಧಿಕಾರಿ ರಾಜ್‌ಗೊàಪಾಲ್‌, ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್‌ ಭೇಟಿ ನೀಡಿದ್ದಾರೆ.
 

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.