ಕೋಟತಟ್ಟು ಗ್ರಾ.ಪಂ.: ಕುಡಿಯುವ ನೀರಿಗಾಗಿ ಹಂದಟ್ಟು ನಿವಾಸಿಗಳ ಪ್ರತಿಭಟನೆ


Team Udayavani, Aug 20, 2019, 5:37 AM IST

1908KOTA1E

ಕೋಟ: ಕೋಟತಟ್ಟು ಗ್ರಾ.ಪಂ. ವ್ಯಾಪ್ತಿಯ ಹಂದಟ್ಟು ನಿವಾಸಿಗಳು ಕುಡಿಯುವ ನೀರಿಗೆ ಆಗ್ರಹಿಸಿ ಆ. 19ರಂದು ಗ್ರಾ.ಪಂ. ಎದುರು ಕೊಡಪಾನ ಹಿಡಿದು ಪ್ರತಿಭಟನೆ ನಡೆಸಿದರು.

ಈ ಪ್ರದೇಶ ಆವೆ (ಕೊಜೆ) ಮಣ್ಣಿನಿಂದ ಕೂಡಿದ್ದು ಎಲ್ಲ ಬಾವಿಗಳಲ್ಲಿ ಕೆಂಪು ನೀರು ಸಿಗುತ್ತದೆ. ಹೀಗಾಗಿ ಇಲ್ಲಿನ 100 ಕುಟುಂಬಗಳು ಪ್ರತಿದಿನವೂ ನಳ್ಳಿ ನೀರನ್ನೆ ಅವಲಂಭಿಸಿವೆ. ಆದರೆ ಹಲವು ದಿನಗಳಿಂದ ಈ ಭಾಗಕ್ಕೆ ನೀರಿನ ಪೂರೈಕೆಯಾಗುತ್ತಿಲ್ಲ.

ನೀರಿಗಾಗಿ ಪರಿತಪಿಸುತ್ತಿದ್ದೇವೆ
ನಾಲ್ಕೈದು ದಿನಕ್ಕೆ ಆಗೊಮ್ಮೆ-ಈಗೊಮ್ಮೆ ನೀರು ಬರುತ್ತದೆ. ಒಂದೆರಡು ವರ್ಷದಿಂದ ಈ ಸಮಸ್ಯೆ ಇದೆ. ಒಂದು ಕೊಡಪಾನ ನೀರಿಗಾಗಿ ಕಿ.ಮೀ. ಸುತ್ತಾಡಬೇಕು. ಕೆಲವು ದಿನದಿಂದ ಮನೆಯ ಮೇಲ್ಛಾವಣಿಯ ಮಳೆಯ ನೀರನ್ನು ನೇರವಾಗಿ ಬಳಕೆ ಮಾಡುತ್ತಿದ್ದೇವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಸಂಪೂರ್ಣ ಮಹಿಳೆಯರೇ ಸೇರಿದ್ದು ವಿಶೇಷವಾಗಿತ್ತು.

ಕೆಲವರು ನಳ್ಳಿಯಿಂದ ಅಕ್ರಮ ಸಂಪರ್ಕ ಪಡೆದು ತೋಟ, ಟ್ಯಾಂಕ್‌ಗಳಲ್ಲಿ ನೀರು ಸಂಗ್ರಹ ಮಾಡುತ್ತಾರೆ ಮತ್ತು ವಾಟರ್‌ ಮ್ಯಾನ್‌ ಸರಿಯಾಗಿ ಕಾರ್ಯನಿರ್ವಹಿಸು ವುದಿಲ್ಲ. ಸಮಸ್ಯೆಯನ್ನು ಸರಿಪಡಿಸುವ ತನಕ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು.

ಪರಿಹಾರದ ಭರವಸೆ
ಗ್ರಾ.ಪಂ. ಅಧ್ಯಕ್ಷ ರಘು ತಿಂಗಳಾಯ ಹಾಗೂ ಪಿಡಿಒ ಶೈಲಜಾ ಪೂಜಾರಿ ಮನವಿ ಸ್ವೀಕರಿಸಿ ಮಾತನಾಡಿ, ಮೂರು ದಿನಗಳಲ್ಲಿ ಅಕ್ರಮ ಸಂಪರ್ಕವನ್ನು ಗುರುತಿಸಿ ಕ್ರಮಕೈಗೊಳ್ಳಲಾಗುವುದು ಮತ್ತು ನೀರಿನ ಪೂರೈಕೆಗೆ ಇರುವ ಸಮಸ್ಯೆಯನ್ನು ದುರಸ್ತಿಪಡಿಸಲಾಗುವುದು. ವಾಟರ್‌ ಮ್ಯಾನ್‌ಗೆಸರಿಯಾಗಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು. ಅನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ವಾರ್ಡ್‌ ಸದಸ್ಯ ಜಯಪ್ರಕಾಶ್‌, ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಲೋಕೇಶ್‌ ಶೆಟ್ಟಿ, ಕಾರ್ಯದರ್ಶಿ ಮೀರಾ ಹಾಗೂ ಸದಸ್ಯರಾದ ವಾಸು ಪೂಜಾರಿ, ಸತೀಶ್‌ ಉಪಸ್ಥಿತರಿದ್ದರು. ಹಂದಟ್ಟು ನಿವಾಸಿಗಳಾದ ಪುಷ್ಪಾ, ಆಶಾ, ಜಲಜಾ, ಗ್ರಾ.ಪಂ. ಸದಸ್ಯೆ ಅಕ್ಕು, ರತ್ನಾ, ಸವಿತಾ, ದೀಪಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಅನುದಾನ ಮೀಸಲಿರಿಸಲಾಗಿದೆ
ಇಲ್ಲಿನ ಕುಡಿಯುವ ನೀರಿನ ಕಾಮಗಾರಿಗಾಗಿ ಜಿ.ಪಂ.ನಿಂದ 10.50ಲಕ್ಷ ಮತ್ತು 14ನೇ ಹಣಕಾಸು ನಿಧಿಯಿಂದ 3.63ಸಾವಿರ ಮೀಸಲಿರಿಸಿದ್ದೇವೆ. ಆದರೆ ಮಳೆಗಾಲ ಕಳೆಯುವ ತನಕ ಕಾಮಗಾರಿ ನಡೆಸಲು ಅಸಾಧ್ಯ. ಮಳೆಗಾಲ ಮುಗಿಯುತ್ತಿದ್ದಂತೆ ಶಾಶ್ವತ ಕಾಮಗಾರಿ ನಡೆಸುತ್ತೇವೆ. ಸಮಸ್ಯೆಗೆ ಕಾರಣ ಪತ್ತೆಹಚ್ಚಿ ಬಗೆಹರಿಸುತ್ತೇವೆ ಎಂದು ಗ್ರಾ.ಪಂ. ಅಧ್ಯಕ್ಷ ರಘು ತಿಂಗಳಾಯ ಹಾಗೂ ಸದಸ್ಯ ಜಯಪ್ರಕಾಶ್‌ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.