Krishna Matha: ಉಡುಪಿಯಲ್ಲಿಂದು ವೈಭವದ ಕೃಷ್ಣಾಷ್ಟಮಿ


Team Udayavani, Aug 26, 2024, 1:10 AM IST

Krishna Matha: Glorious Krishna Ashtami in Udupi

ಉಡುಪಿ: ಪೊಡವಿಗೊಡೆಯನ ನಾಡಿನಲ್ಲಿ ಅಷ್ಟಮಿಯ ಸಂಭ್ರಮ ಕಳೆಗಟ್ಟಿದ್ದು, ಶ್ರೀ ಕೃಷ್ಣಮಠದ ಆವರಣ ಸಹಿತವಾಗಿ ಇಡೀ ನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಸೋಮವಾರ ಬೆಳಗ್ಗೆಯಿಂದಲೇ ಅಷ್ಟಮಿಯ ವೈಭವ ಕಾಣಸಿಗಲಿದೆ.
ಶ್ರೀ ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಮಠದೊಳಗೆ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮ, ಒಳಗಿನ ಅಲಂಕಾರ, ನೈವೇದ್ಯ ಹಾಗೂ ಪ್ರಸಾದದ ರೂಪದಲ್ಲಿ ನೀಡುವ ಲಡ್ಡು, ಚಕ್ಕುಲಿ ಇತ್ಯಾದಿಗಳ ಸಿದ್ಧತೆ ಭರದಿಂದ ಸಾಗಿದೆ. ಆ. 26ರ ಬೆಳಗ್ಗೆಯಿಂದಲೇ ಶ್ರೀ ಕೃಷ್ಣಮಠದಲ್ಲಿ ಅಷ್ಟಮಿ ಸಂಭ್ರಮ ಡೋಲೋತ್ಸವದೊಂದಿಗೆ ಆರಂಭಗೊಂಡು ಆ.27ರ ವಿಟ್ಲಪಿಂಡಿ ಉತ್ಸವ ಮುಗಿಯುವರೆಗೂ ಇರಲಿದೆ.

ರಥಬೀದಿಯಲ್ಲಿ ನಾನಾ ಬಗೆಯ ಅಂಗಡಿ, ಮಾರಾಟ ಮಳಿಗಳನ್ನು ತೆರೆಯಲಾಗಿದೆ. ರಥಬೀದಿ ಸಹಿತವಾಗಿ ಉಡುಪಿ ನಗರದ ಮುಖ್ಯರಸ್ತೆಗಳು, ಮಣಿಪಾಲ, ಬ್ರಹ್ಮಾವರ, ಕಾಪು, ಕೋಟ, ಸಾಲಿಗ್ರಾಮ ಮೊದಲಾದ ಭಾಗದಲ್ಲಿ ಅಷ್ಟಮಿ ನಿಮಿತ್ತವಾಗಿ ವಿವಿಧ ಬಗೆಯ ಹೂವಿನ ಮಾರಾಟವೂ ಜೋರಾಗಿ ನಡೆಯುತ್ತಿದೆ. ಹೊರ ಜಿಲ್ಲೆಗಳ ಮಾರಾಟಗಾರರು ಅಲ್ಲಲ್ಲಿ ಹೂವಿನ ರಾಶಿ ಹಾಕಿಕೊಂಡು ಮಾರಾಟ ಮಾಡುತ್ತಿದ್ದಾರೆ. ಪುರದ ಜನರಿಂದ ಖರೀದಿ ಪ್ರಕ್ರಿಯೆಯೂ ಜೋರಾಗಿ ನಡೆಯುತ್ತಿದೆ. ಕೃಷ್ಣಮಠಕ್ಕೆ ಆಗಮಿಸುವ ಭಕ್ತರು, ಪ್ರವಾಸಿಗರ ಸಂಖ್ಯೆಯೂ ಹೆಚ್ಚುತ್ತಿದೆ.

ಲಕ್ಷ ಲಾಡು, ಚಕ್ಕುಲಿ
40ಕ್ಕೂ ಅಧಿಕ ಬಾಣಸಿಗರು ಸೇರಿ ಗುಂಡಿಟ್ಟು ಲಡ್ಡು, ಎಳ್ಳುಲಡ್ಡು, ಕಡಲೆಹಿಟ್ಟಿನ ಲಡ್ಡು ಹೀಗೆ ಮೂರ್‍ನಾಲ್ಕು ಬಗೆಯ ತಲಾ 1 ಲಕ್ಷ ಲಡ್ಡು ಜತೆಗೆ 1 ಲಕ್ಷ ಚಕ್ಕುಲಿ ಸಿದ್ಧಪಡಿಸಿದ್ದಾರೆ. ಲಡ್ಡು ಮತ್ತು ಚಕ್ಕುಲಿಯನ್ನು ಪ್ರಸಾದದ ರೂಪದಲ್ಲಿ ಭಕ್ತರಿಗೆ ನೀಡಿಲು ಬೇಕಾದ ಪ್ಯಾಕಿಂಗ್‌ ವ್ಯವಸ್ಥೆಯನ್ನು ರವಿವಾರ ಬೆಳಗ್ಗೆಯಿಂದಲೇ ಮಾಡಲಾಗಿದೆ.

ಇಂದು ವಿವಿಧ ಸ್ಪರ್ಧೆ
ಅಷ್ಟಮಿಯ ಹಿನ್ನೆಲೆಯಲ್ಲಿ ರವಿವಾರ ಬೆಳಗ್ಗೆ ಶ್ರೀ ಕೃಷ್ಣಮಠದ ಆವರಣದಲ್ಲಿ ಕಬಡ್ಡಿ ಸ್ಪರ್ಧೆ ನಡೆದಿದೆ. ಪೇಪರ್‌ ವೇಷ ಸಹಿತ ವಿವಿಧ ವೇಷಧಾರಿಗಳು ಈಗಾಗಲೇ ಮಠದ ಆವರಣ ಸಹಿತ ನಗರದಾದ್ಯಂತ ಸುತ್ತಾಟ ಆರಂಭಿಸಿದ್ದಾರೆ. ರಾಜಾಂಗಣದಲ್ಲಿ ರಂಗೋಲಿ ಸ್ಪರ್ಧೆಯೂ ನಡೆದಿದೆ. ಸೋಮವಾರ ಬೆಳಗ್ಗೆಯಿಂದಲೇ ಮುದ್ದುಕೃಷ್ಣ ಸ್ಪರ್ಧೆ ನಡೆಯಲಿದೆ.

ಹುಲಿವೇಷಗಳ ಅಬ್ಬರ
ಕೃಷ್ಣಾಷ್ಟಮಿಯೆಂದರೆ ಎಲ್ಲೆಡೆ ಹುಲಿವೇಷ, ವಿವಿಧ ವೇಷಗಳ ರಂಗು ಕಣ್ತುಂಬಿಕೊಳ್ಳಬಹುದು. ಈ ನಡುವೆ ಮಹಿಳಾ ಹುಲಿವೇಷಧಾರಿಗಳ ತಂಡ ವಿಶೇಷ ಗಮನ ಸೆಳೆಯಲಿದೆ. ದರ್ಪಣ ನೃತ್ಯ ಸಂಸ್ಥೆಯ ಬಾಲಕಿ, ಯುವತಿಯರು, ಮಹಿಳೆಯರು 2ನೇ ವರ್ಷವೂ ಹುಲಿವೇಷ ಹಾಕಿ ಗಮನ ಸೆಳೆಯಲಿದ್ದಾರೆ. ಮಾರ್ಪಳ್ಳಿ, ಅಲೆವೂರು, ನಿಟ್ಟೂರು, ಕೊರಂಗ್ರಪಾಡಿ, ಕಡಿಯಾಳಿ, ಕಾಡುಬೆಟ್ಟು, ಮಲ್ಪೆ, ಮಣಿಪಾಲ ಹುಡ್ಕೋ ಕಾಲನಿ ಸಹಿತ ಮೊದಲಾದ ಕಡೆಯ ಪ್ರಸಿದ್ಧ ಹುಲಿವೇಷ ತಂಡಗಳು ಅಬ್ಬರಿಸಲಿವೆ. ಇದಕ್ಕಾಗಿ ರಥಬೀದಿ ಸಹಿತ ನಗರದ ವಿವಿಧ ಭಾಗದಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಹುಲಿ ಕುಣಿತಕ್ಕೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ.

ಡೋಲೋತ್ಸವ
ಈ ವರ್ಷ ವಿಶೇಷ ಎಂಬಂತೆ ವಸಂತ ಮಂಟಪದಲ್ಲಿ ಡೋಲೋತ್ಸವ ಹೆಸರಿನಲ್ಲಿ ಕೃಷ್ಣನ ಮೂರ್ತಿ ಇರುವ ತೊಟ್ಟಿಲು ತೂಗಲು ಸೇವಾಕರ್ತರಿಗೆ ಅವಕಾಶ ಮಾಡಿಕೊಡಲಾಗಿದೆ. ಅಷ್ಟಮಿಯಂದು ಉಪವಾಸ ವ್ರತ ಇರಲಿದೆ. ಮಧ್ಯರಾತ್ರಿ ಅರ್ಘ್ಯ ಪ್ರದಾನಕ್ಕೆ ದೇವಸ್ಥಾನದ ಒಳಗೆ ಮತ್ತು ಹೊರಗೂ ವ್ಯವಸ್ಥೆ ಕಲ್ಪಿಸಲಾಗುವುದು. ಮಂಗಳವಾರ ವಿಟ್ಲಪಿಂಡಿ ಉತ್ಸವ, ಭೋಜನಪ್ರಸಾದ ಇರಲಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.