ಕುಂದಾಪುರ: ಸಂತೆ ಪ್ರಾಂಗಣ ಬಳಿ ಗೊಂದಲಕಾರಿಯಾದ ಸರ್ವಿಸ್‌ ರಸ್ತೆ


Team Udayavani, Feb 10, 2020, 5:24 AM IST

0902KDLM9PH1

ಕುಂದಾಪುರ: ಕುಂದಾಪುರ ಸಂತೆ ಹೆಸರು ಕೇಳಿದಾಗ ಕುಂದಾಪುರದ ಗತ ವೈಭವ ನೆನಪಾಗುತ್ತದೆ ಎನ್ನುತ್ತಾರೆ ಹಿರಿಯರು. ಆದರೆ ಈಗ ಸಂತೆ ಮಾರುಕಟ್ಟೆಗೆ ಪ್ರವೇಶಿಸುವುದು ಕೂಡ ಕಷ್ಟ ಎಂಬ ಸ್ಥಿತಿ ಹೆದ್ದಾರಿ ಕಾಮಗಾರಿಯಿಂದಾಗಿ ಬಂದೊದಗಿದೆ. ಸರ್ವಿಸ್‌ ರಸ್ತೆಯ ಗೊಂದಲ, ಹೆದ್ದಾರಿಯಿಂದ ಪ್ರವೇಶಿಸಲು ಇಲ್ಲದ ಅವಕಾಶ, ಬಸ್‌ ಇಳಿದು ಸಂತೆಗೆ ಬರಲು ಇಲ್ಲದ ದಾರಿಯಿಂದ ಸಮಸ್ಯೆಗಳ ಆಗರವಾಗಿದೆ.

ದಾರಿಯಿಲ್ಲ
ಇಲ್ಲಿನ ಸಂತೆ ಜಿಲ್ಲೆಯಲ್ಲಿ ದೊಡ್ಡ ಸಂತೆಯಾಗಿದ್ದು, ಮಾರುಕಟ್ಟೆಯ ವಿಸ್ತೀರ್ಣ ಕೂಡ ವಿಶಾಲವಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿದ್ದು ಶನಿವಾರ ನಡೆಯುವ ಈ ಸಂತೆಗೆ ಬರುವ ರೈತರಿಗೆ, ಗ್ರಾಹಕರಿಗೆ ಆಗುವ ತೊಂದರೆ ನೋಡಿದಾಗ ಬೇಸರವಾಗುತ್ತದೆ. ಸಣ್ಣಪುಟ್ಟ ರೈತರು ತಾವು ಬೆಳೆದ ತರಕಾರಿ, ಹಣ್ಣು ಹಂಪಲುಗಳನ್ನು ಮಾರಲು ಬಸ್ಸಿನಲ್ಲಿ ಬರಬೇಕಾದರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಳಿದು ಸುಮಾರು ಒಂದು ಕಿ.ಮೀ. ನಷ್ಟು ದೂರ ತಲೆಹೊರೆಯಲ್ಲಿ ಹೊತ್ತು, ನಡೆದುಕೊಂಡೇ ಮಾರುಕಟ್ಟೆಗೆ ಬರಬೇಕಾದ ಪರಿಸ್ಥಿತಿ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ಅಕ್ಕಪಕ್ಕದಲ್ಲಿ ಕಬ್ಬಿಣದ ಸರಳುಗಳಿಂದ ತಡೆಗೋಡೆ ಹಾಕಿರುವುದೇ ಇದಕ್ಕೆ ಕಾರಣ.

ವಾಹನ ಇಲ್ಲ
ಗ್ರಾಹಕರು ತಾವು ಖರೀದಿ ಮಾಡಿದ ಸಾಮಾನುಗಳನ್ನು ಕೊಂಡು ಹೋಗಲು ವಾಹನ ಸೌಲಭ್ಯ
ಇಲ್ಲದಿರುವುದರಿಂದ ಜನರು ಪೇಚಾಡುವ ಪರಿಸ್ಥಿತಿ ಉಂಟಾಗಿದೆ. ಸರ್ವಿಸ್‌ ರಸ್ತೆಗಳಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಿ ಟ್ರಾಫಿಕ್‌ ನಿಲುಗಡೆಗೆ ಕಾರಣವಾಗಿರುವುದರಿಂದ ಸಂತೆಗೆ ಬಂದವರಿಗೆ, ರಿಕ್ಷಾದವರು, ಕಾರಿನವರಿಗೆ ಹೊರಬರಲು ತಾಸುಗಟ್ಟಲೆ ವಾಹನಗಳ ಹಾರ್ನ್ ಶಬ್ದದಿಂದ ರಸ್ತೆಯಲ್ಲೇ ಕಾಲ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿಗಳಿಗೆ ಸಂಚರಿಸಲು ಸರಿಯಾದ ದಾರಿ ವ್ಯವಸ್ಥೆ ಇಲ್ಲ.

ಪೊಲೀಸ್‌ ಇಲ್ಲ
ಈ ಹಿಂದೆ ಸಂತೆ ದಿನ ಪೊಲೀಸ್‌ನವರು ಇದ್ದು ಎಲ್ಲ ಸಮಸ್ಯೆಗಳನ್ನು ನಿರ್ವಹಿಸುತ್ತಿದ್ದರು, ಈಗ ಸಿಬಂದಿ ಕೊರತೆಯಿಂದ ಪೊಲೀಸರೂ ಇರುವುದಿಲ್ಲ. ಈ ಎಲ್ಲ ಕಾರಣದಿಂದ ದೂರದಿಂದ ರೈತರು ಬೆಳೆದ ಬೆಳೆಗಳನ್ನು ದೊಡ್ಡ ಪ್ರಮಾಣದಲ್ಲಿ ಸಂತೆಗೆ ಮಾರಾಟಕ್ಕೆ ತರುವುದಿಲ್ಲ. ಸಂತೆಯಲ್ಲಿದ್ದ ಬೆಳೆಗಳು ಕಡಿಮೆ ಪ್ರಮಾಣದಲ್ಲಿ ಇದ್ದುದರಿಂದ ಬೆಲೆ ದುಬಾರಿಯಾಗಿದೆ. ನಮ್ಮೂರಿನ ಅಂಗಡಿಯಲ್ಲಿ ಸಿಗುವ ತರಕಾರಿ, ಹಣ್ಣುಗಳು ಕಡಿಮೆ ಬೆಲೆಯಾಗಿದ್ದರಿಂದ ಅಂಗಡಿಯಲ್ಲೆ ಖರೀದಿ ಮಾಡುತ್ತಿದ್ದಾರೆ.

ದಾರಿ ಸರಿಪಡಿಸಿ
ಜನರು ಸಂತೆಗೆ ಹೋಗುವುದನ್ನೆ ನಿಲ್ಲಿಸಿದ್ದಾರೆ. ಇಲ್ಲಿನ ಸಮಸ್ಯೆಗೆ ಸಂಬಂಧಪಟ್ಟವರು ಸರಿಪಡಿಸಬೇಕಿದೆ. ನಮ್ಮೂರಿನ ಸಂತೆಗೆ ಈ ಹಿಂದಿನ ಮೆರುಗನ್ನು ತರುವ ಪ್ರಯತ್ನ ಹಾಗೂ ಸಂತೆಗೆ ಬಂದು ಹೋಗುವ ಗ್ರಾಹಕರಿಗೆ ಮತ್ತು ರೈತರಿಗೆ ಅನುಕೂಲಕರ ವಾತಾವರಣ ಮಾಡಿಕೊಡಬೇಕಿದೆ.
-ರಾಜೇಶ್‌ ಕಾವೇರಿ,ಕುಂದಾಪುರ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.