ಶಾಲಾ ಮಕ್ಕಳಿಗೆ ಪಾಠ ಮಾಡಿದ ಕುಂದಾಪುರ ಎಸಿ!


Team Udayavani, Jun 4, 2018, 6:00 AM IST

3005kdlm5ph.jpg

ಕುಂದಾಪುರ: ದೇಶದಲ್ಲಿ ಶೇ.26ರಷ್ಟು ಅನಕ್ಷರತೆ ಇದೆ. ಆದರೆ ದ.ಕ., ಉಡುಪಿಯಲ್ಲಿ ಎಲ್ಲರೂ ಸಾಕ್ಷರರಾಗಿದ್ದಾರೆ. ಎಲ್ಲರೂ ಶಿಕ್ಷಣ ಪಡೆಯಬೇಕು. ಈ ಮೂಲಕ ಸಾಮರಸ್ಯದ ಬದುಕು, ಪ್ರಾದೇಶಿಕ ಅಸಮತೋಲನ, ಭ್ರಷ್ಟಾಚಾರ, ಕೋಮು ಸಾಮರಸ್ಯದ ಮೂಲಕ ದೇಶದ ಅಭಿವೃದ್ಧಿ ಸಾಧ್ಯ ಎಂದು ಕುಂದಾಪುರ ವಿಭಾಗ ಸಹಾಯಕ ಆಯುಕ್ತ ಟಿ. ಭೂಬಾಲನ್‌ ಹೇಳಿದರು.

ಅವರು ತಾಲೂಕಿನ ವಕ್ವಾಡಿ ಹಾಗೂ ಹಕ್ಲಾಡಿ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ 10ನೇ ತರಗತಿ ಮಕ್ಕಳಿಗೆ ಪಾಠ ಮಾಡಿ, ಸಂವಾದ ನಡೆಸಿದರು.

ದೇಶದ ಒಗ್ಗಟ್ಟು ಒಡೆದು ಆಳುವ ಡಿವೈಡಿಂಗ್‌ ಪಾಲಿಸಿ ಬ್ರಿಟಿಷರ ಕೊಡುಗೆ. ಅದನ್ನೆ ಇಂದು ರಾಜಕೀಯ ದಾಳವಾಗಿ ಬಳಸಿಕೊಳ್ಳಲಾಗುತ್ತಿದೆ. ಭಾಷೆಗಳ ನಡುವಿನ ಕಿತ್ತಾಟ, ಪ್ರಾದೇಶಿಕ ಅಸಮಾನತೆ, ಭ್ರಷ್ಟಾಚಾರ, ಅನಕ್ಷರತೆಗಳು ದೇಶದ ಅಭಿವೃದ್ಧಿಗೆ ತೊಡಕಾಗಿವೆ ಎಂದರು.

ಎಸಿ ಅವರು ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಸಮಾಜಶಾಸ್ತ್ರ ಪಾಠ ಬೋಧಿಸಿದರು.

ಹಕ್ಲಾಡಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಡಾ| ಕಿಶೋರ್‌ ಕುಮಾರ್‌ ಶೆಟ್ಟಿ , ಶಾಲಾಭಿವೃದ್ಧಿ ಸಮಿತಿಯ ಬಾಳೆಮನೆ ಗಣಪಯ್ಯ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸಮೃದ್ಧಿ, ರಂಜಿತ್‌, ದೀಕ್ಷಿತ್‌, ಸೌರಭ, ನೇಹಾ, ಶ್ರೀಜಿತ್‌ ಸಂವಾದ ನಡೆಸಿದರು.

ವಕ್ವಾಡಿ ಶಾಲೆಯಲ್ಲಿ ಜೀವನ ಪಾಠ
ವಕ್ವಾಡಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಜೀವನ ಪಾಠ ಮಾಡಿದರು. ಶಾಲೆಗೆ ದಿಢೀರ್‌ ಭೇಟಿ ನೀಡಿದ ಎಸಿ ಅವರು 8ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು. ಮನುಷ್ಯನ ಜೀವನ ಉತ್ತಮವಾಗಿ ಹಾಗೂ ಉನ್ನತಿಯೆಡೆಗೆ ಸಾಗಲು ಶಿಕ್ಷಣ ಅಗತ್ಯ. ಶೈಕ್ಷಣಿಕ ಬದುಕಿನ ಜತೆಗೆ ಜೀವನ ಮೌಲ್ಯಗಳನ್ನು ಹಾಗೂ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಗುರು ಹಿರಿಯರಿಗೆ ಗೌರವ ನೀಡುವುದು ಮಾತ್ರವಲ್ಲ, ಅಶಕ್ತರಿಗೆ ಉಪಕಾರ ಮಾಡುವ ಸಹೃದಯಿ ಮನೋಭಾವ ಮೂಡಿಸಿಕೊಳ್ಳಬೇಕು ಎಂದರು.

ಶಾಲಾ ಮೂಲ ಸೌಕರ್ಯದ ಕುರಿತು ಶಿಕ್ಷಕರ ಬಳಿ ಮಾಹಿತಿ ಪಡೆದುಕೊಂಡರು.ನೂತನ ಪಠ್ಯಪುಸ್ತಕಗಳನ್ನು ಪರಿಶೀಲಿಸಿದರು.ಬಳಿಕ ಮಕ್ಕಳಿಗೆ ಸಾಂಕೇತಿಕವಾಗಿ ಪುಸ್ತಕ ವಿತರಿಸಿದರು. 

ಶಾಲಾ ಮುಖ್ಯ ಶಿಕ್ಷಕಿ ಭಾರತಿ, ಶಿಕ್ಷಕರಾದ ಗಣೇಶ್‌ ಕಾಂಚನ್‌, ಕೃಷ್ಣ ದೇವಾಡಿಗ, ಸತ್ಯಾನಂದ ಸಾಲಿನ್ಸ್‌, ಶಶಿಧರ ಶೆಟ್ಟಿ, ಧರ್ಮ ನಾಯ್ಕ, ಮಧುಕರ ಶಿಂಘೆ, ಕುಪ್ಪಯ್ಯ ಪಟಗಾರ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.