
ಕುಂದಾಪುರ-ಬೈಂದೂರು: ಮಳೆಯಬ್ಬರ ಇಳಿಮುಖ
Team Udayavani, Aug 11, 2019, 6:09 AM IST

ಕುಂದಾಪುರ: ಬೈಂದೂರು ಹಾಗೂ ಕುಂದಾಪುರ ತಾಲೂಕಿನೆಲ್ಲೆಡೆ ಶನಿವಾರ ಮಳೆ ಪ್ರಮಾಣ ಸ್ವಲ್ಪ ಮಟ್ಟಿಗೆ ಇಳಿಮುಖಗೊಂಡಿದ್ದು, ಕೆಲವೆಡೆಗಳಲ್ಲಿ ಗಾಳಿಯಿಂದಾಗಿ ಮನೆಗಳಿಗೆ ಹಾನಿಯಾಗಿದೆ.
ಶುಕ್ರವಾರ ರಾತ್ರಿ ಮಳೆ ತುಸು ಹೆಚ್ಚಿದ್ದರೆ, ಶನಿವಾರ ಸಂಜೆಯವರೆಗೆ ಬಿಟ್ಟು – ಬಿಟ್ಟು ಮಳೆಯಾಗುತ್ತಿತ್ತು. ಕೋಣಿ ಗ್ರಾಮದ ನಾಗಪ್ಪ ಪೂಜಾರಿ ಅವರ ವಾಸ್ತವ್ಯದ ಮನೆಗೆ ಗಾಳಿ – ಮಳೆಯಿಂದಾಗಿ ಹಾನಿಯಾಗಿದ್ದು, ಸುಮಾರು 40 ಸಾವಿರ ರೂ. ನಷ್ಟ ಸಂಭವಿಸಿದೆ. ಹಂಗಳೂರು ಗ್ರಾಮದ ಕೃಷ್ಣ ದೇವಾಡಿಗ ಅವರ ಮನೆಯ ಶೌಚಾಲಯದ ಗೋಡೆ ಕುಸಿದು ಬಿದ್ದು, ಸುಮಾರು 20 ಸಾವಿರ ರೂ. ನಷ್ಟ ಉಂಟಾಗಿದೆ. ಹೊಂಬಾಡಿ – ಮಂಡಾಡಿ ಗ್ರಾಮದ ಸುಮನಾ ನಾಯ್ಕ ಅವರ ಅಡಿಕೆ ತೋಟಕ್ಕೆ ನೀರು ನುಗ್ಗಿ, ಸುಮಾರು 25 ಸಾವಿರ ರೂ. ನಷ್ಟ ಸಂಭವಿಸಿದೆ.
ಕೋಡಿಗೆ ತಹಶೀಲ್ದಾರ್ ಭೇಟಿ
ಕುಂದಾಪುರ ತಹಶೀಲ್ದಾರ್ ತಿಪ್ಪೇಸ್ವಾಮಿ ಹಾಗೂ ಇತರೆ ಅಧಿಕಾರಿಗಳು ಶನಿವಾರ ಕೋಡಿ, ಗಂಗೊಳ್ಳಿಯ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಾರಾಹಿ: ಮಾಹಿತಿ ನೀಡಲಾಗುವುದು
ಕುಂದಾಪುರ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಿದ್ದರೂ, ಮಲೆನಾಡು ಭಾಗಗಳಲ್ಲಿ ಮಳೆಯಬ್ಬರ ಹೆಚ್ಚಾಗಿರುವುದರಿಂದ ವಾರಾಹಿ ಯೋಜನೆಯ ಎತ್ತಣಕಟ್ಟೆ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಆದರೆ ಜಲಾಶಯ ಭರ್ತಿಯಾಗಲು ಇನ್ನೂ ಸುಮಾರು 11 ಮೀ. ನೀರಿನ ಅಗತ್ಯವಿದ್ದು, ನೀರು ಹೊರಬಿಡುವುದಾದರೆ ಅದಕ್ಕೂ ಮೊದಲು ಇದರ ಆಸುಪಾಸಿನ ಜನರಿಗೆ ಮಾಹಿತಿ ನೀಡಲಾಗುವುದು. ಈ ಬಗ್ಗೆ ಯಾವುದೇ ರೀತಿಯ ಭಯ ಪಟ್ಟುಕೊಳ್ಳುವ ಅಗತ್ಯವಿಲ್ಲ ಎಂದು ಕುಂದಾಪುರದ ತಹಶೀಲ್ದಾರ್ ತಿಪ್ಪೇಸ್ವಾಮಿ ‘ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ
MUST WATCH

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.