Bull Trawl ಬೋಟುಗಳನ್ನು ಅಡ್ಡಗಟ್ಟಿದ ಆಕ್ರೋಶಿತ ನಾಡದೋಣಿ ಮೀನುಗಾರರು


Team Udayavani, Sep 25, 2024, 7:15 AM IST

Bull Trawl ಬೋಟುಗಳನ್ನು ಅಡ್ಡಗಟ್ಟಿದ ಆಕ್ರೋಶಿತ ನಾಡದೋಣಿ ಮೀನುಗಾರರು

ಗಂಗೊಳ್ಳಿ/ಉಪ್ಪುಂದ: ಬೈಂದೂರು ವಲಯ ನಾಡ ದೋಣಿ ಮತ್ತು ಗಂಗೊಳ್ಳಿ ನಾಡ ದೋಣಿ ಮೀನುಗಾರರು ಒಂದು ಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್‌ಟ್ರಾಲ್‌ ಮೀನುಗಾರಿಕೆ ಮಾಡುತ್ತಿರುವ ಬೋಟ್‌ಗಳನ್ನು ಸಮುದ್ರದಲ್ಲೇ ತಡೆದು ನಿಲ್ಲಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮುದ್ರ ತೀರ ಪ್ರದೇಶದಲ್ಲಿ ಬುಲ್‌ಟ್ರಾಲ್‌ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲ. ಬುಲ್‌ಟ್ರಾಲ್‌ ಲೈಟ್‌ ಫಿಶಿಂಗ್‌ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ. ಜೀವದ ಹಂಗು ತೊರೆದು ಮೀನುಗಾರಿಕೆಗೆ ತೆರಳಿದರೆ ಬರಿಗೈಯಲ್ಲಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕೆಂದು ಮೀನುಗಾರರ ಆಗ್ರಹವಾಗಿದೆ.

ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು
ಮಂಗಳೂರಿನಿಂದ ಕಾರವಾರದ ತನಕ ನಾಡ ದೋಣಿ ಮೀನುಗಾರರು ಸಭೆ ನಡೆಸಿ ಬುಲ್‌ಟ್ರಾಲ್‌ ಮೀನುಗಾರಿಕೆ ನಿಷೇಧಿಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಟ್ರಾಲ್‌ ಬೋಟ್‌ನವರು ಸುಮಾರು 45 ಪೊಸಿಷನ್‌ 29 ಲಾಂಗ್‌ನಲ್ಲಿ ಬುಲ್‌ಟ್ರಾಲ್‌ ಮಾಡುತ್ತಿದ್ದ ದೃಶ್ಯಗಳು ಕಂಡುಬಂದಿದ್ದು, ಈ ಹಿಂದೆಯೇ ನಾಡದೋಣಿಯವರು ಇದನ್ನು ಪ್ರತಿಭಟಿಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೇ ಇರುವುದು ನಾಡ ದೋಣಿ ಮೀನುಗಾರರಿಗೆ ಸಂಕಷ್ಟಕ್ಕೆ ಎಡೆ ಮಾಡಿಕೊಟ್ಟಿದೆ.

ನಿಷೇಧವಿದ್ದರೂ,
ಕದ್ದು ಮುಚ್ಚಿ ಮೀನುಗಾರಿಕೆ
ಬುಲ್‌ಟ್ರಾಲ್‌ ಮೀನುಗಾರಿಕೆ ಹೀಗೆಯೇ ಮುಂದುವರಿದರೆ ನಾಡ ದೋಣಿ ಮೀನುಗಾರರ ಕುಟುಂಬ ಉದ್ಯೋಗ ಕಳೆದುಕೊಂಡು ಬೀದಿ ಪಾಲಾಗುವುದರಲ್ಲಿ ಸಂಶಯವಿಲ್ಲ. ಇದೊಂದು ಅವೈಜ್ಞಾನಿಕ ಮೀನುಗಾರಿಕೆ. ಲೈಟ್‌ ಫಿಶಿಂಗ್‌, ಬುಲ್‌ಟ್ರಾಲ್‌ಗೆ ಭಾರತದಲ್ಲಿ ನಿಷೇಧವಿದೆ. ಸುಪ್ರೀಂ ಕೋರ್ಟ್‌ ಹಾಗೂ ಕೇಂದ್ರ ಸರಕಾರದ ಆದೇಶದ ಪ್ರಕಾರ ಈ ರೀತಿಫಿಶಿಂಗ್‌ ಮಾಡುವಂತಿಲ್ಲ. ಅದರ ಹೊರತಾಗಿಯೂ ಅಲ್ಲಲ್ಲಿ ಕದ್ದು ಮುಚ್ಚಿ ಮೀನುಗಾರಿಕೆ ಮಾಡುತ್ತಿದ್ದಾರೆ. ಕಾನೂನು ಬಾಹಿರವಾಗಿ ಮೀನುಗಾರಿಕೆ ಮಾಡುವವರ ವಿರುದ್ಧ ಲೈಸೆನ್ಸ್‌ ರದ್ದತಿ, ದಂಡ ವಿಧಿಸುವುದರ ಮುಖಾಂತರ ಕಠಿನ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ಕರಾವಳಿ ಜಿಲ್ಲೆಗಳ ಮೀನುಗಾರರ ಹೋರಾಟ; ಎಚ್ಚರಿಕೆ
ಕಾನೂನುಬಾಹಿರ ಮೀನುಗಾರಿಕೆ ಚಟುವಟಿಕೆ ಮಾಡಿದರೆ ಮುಂದಿನ ದಿನಗಳಲ್ಲಿ ನಾಡ ದೋಣಿ ಮೀನುಗಾರಿಗೂ ಮತ್ತು ಬುಲ್‌ಟ್ರಾಲ್‌ ಬೋಟ್‌ ನವರಿಗೂ ಸಂಘರ್ಷ ಉಂಟಾಗುವ ಸಂಭವವಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಸಚಿವರು ಮತ್ತು ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಡದೋಣಿ ಮೀನುಗಾರರು ಆಗ್ರಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಮೀನುಗಾರರು ಸೇರಿ ಹೋರಾಟ ಮಾಡುತ್ತೇವೆ ಎಂದು ಕರಾವಳಿಯ ಮೂರೂ ಜಿಲ್ಲೆಯ ನಾಡ ದೋಣಿ ಮೀನುಗಾರರ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಮುಖಂಡರಾದ ನಾಗೇಶ್‌ ಖಾರ್ವಿ, ಸುರೇಶ್‌ ಖಾರ್ವಿ, ವೆಂಕಟರಮಣ ಖಾರ್ವಿ, ಡಿ. ಚಂದ್ರ ಖಾರ್ವಿ, ಮದನ್‌ ಕುಮಾರ್‌, ಯಶ್ವಂತ್‌ ಖಾರ್ವಿ,ರಾಮ ಖಾರ್ವಿ, ವೆಂಕಟರಮಣ ಖಾರ್ವಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

BR-patil

Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

weWestern Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Udupiಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಶಾಶ್ವತ ರಸ್ತೆ ಆಮೇಲೆ,ಸಂಚಾರ ಯೋಗ್ಯ ರಸ್ತೆಯೇ ಮೊದಲಾಗಲಿ

Udupiಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಶಾಶ್ವತ ರಸ್ತೆ ಆಮೇಲೆ,ಸಂಚಾರ ಯೋಗ್ಯ ರಸ್ತೆಯೇ ಮೊದಲಾಗಲಿ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

1-PK-PK

Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ

1-sadsadsa

US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್

kanagana-parlime

3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

High-Court–CM

MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.