Kundapura ಲೈಂಗಿಕ ದೌರ್ಜನ್ಯವೆಸಗಿದ ವೈದ್ಯಾಧಿಕಾರಿ ವಜಾ
Team Udayavani, Jun 1, 2024, 12:44 AM IST
ಕುಂದಾಪುರ: ಇಲ್ಲಿನ ಸರಕಾರಿ ಆಸ್ಪತ್ರೆಯ ಆಡಳಿತ ಶಸ್ತ್ರಚಿಕಿತ್ಸಕ ವೈದ್ಯಾಧಿಕಾರಿ ಡಾ| ರಾಬರ್ಟ್ ರೆಬೆಲ್ಲೋ ವಿರುದ್ಧ ವೈದ್ಯೆಗೆ ಮಾನಸಿಕ, ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಕುರಿತು ಪ್ರಕರಣ ದಾಖಲಾಗಿದೆ.
ಕರ್ತವ್ಯಕ್ಕೆ ಹೊಸದಾಗಿ ಸೇರಿದ ವೈದ್ಯೆಗೆ ಕಳೆದ 8 ತಿಂಗಳಿನಿಂದ ವಾಟ್ಸಾಪ್ನಲ್ಲಿ ತಡರಾತ್ರಿ ನಿರಂತರ ಅಶ್ಲೀಲ ಚಾಟ್ಗಳನ್ನು ಮಾಡುತ್ತಾ, ಸ್ಟೇಟಸ್ನ ಫೋಟೊಗಳನ್ನು ಸೇವ್ ಮಾಡಿ ಅದಕ್ಕೆ ಅಶ್ಲೀಲ ಕಮೆಂಟ್ಗಳನ್ನು ಕಳುಹಿಸಿ, ದುಬಾರಿ ಹೊಟೇಲ್ಗೆ ಕರೆದೊಯ್ಯುತ್ತೇನೆ ಎಂದು ಕರೆಯುತ್ತಿದ್ದರು. ಪ್ರಭಾವಿಗಳ ಜತೆ, ರಾಜಕಾರಣಿಗಳ ಜತೆ ಇರುವ ಫೋಟೊಗಳನ್ನು, ವಿದೇಶದಲ್ಲಿ ಹೊಟೇಲ್ನಲ್ಲಿ ಬೇರೆ ಹೆಣ್ಣು ಮಕ್ಕಳೊಂದಿಗೆ ವಾಸ್ತವ್ಯ ಹೂಡಿದ ಫೋಟೊಗಳನ್ನು ಕಳುಹಿಸಿ ನೀನು ಬಾ ಎನ್ನುತ್ತಿದ್ದರು.
ಉದ್ಯೋಗ ಉಳಿಸಿಕೊಳ್ಳುವ ಸಲುವಾಗಿ ವೈದ್ಯೆ ಮಾನಕ್ಕೆ ಹೆದರಿ ಸುಮ್ಮನಿದ್ದರೂ, ಅವರ ಮೇಲೆ ಬೇರೆ ವೈದ್ಯರು, ಸಿಬಂದಿ ಜತೆ ಸಂಭಾಷಣೆ ನಡೆಸಿದ್ದಕ್ಕೆ ಕೆಟ್ಟಪದ ಪ್ರಯೋಗ ಮಾಡಿ ಸುಳ್ಳು ಅಪವಾದ ಹೇರಿ ತಲೆಗೆ ಕಟ್ಟಿದ್ದಾರೆ ಎಂದು ದೂರಲಾಗಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.
ಕರ್ತವ್ಯ ದಿಂದ ಬಿಡುಗಡೆ
ಡಾ| ರಾಬರ್ಟ್ ರೆಬೆಲ್ಲೋ ಮೇಲೆ ಸಾರ್ವಜನಿಕರಿಂದ ಹಾಗೂ ಸಹ ಸಿಬಂದಿ, ವೈದ್ಯರಿಂದ ದೂರು ಬಂದ ಹಿನ್ನೆಲೆಯಲ್ಲಿ ನಡೆದ ತನಿಖೆ ಆಧಾರದಲ್ಲಿ ಹಾಗೂ ಲೈಂಗಿಕ ದೌರ್ಜನ್ಯ ಕೇಸು ದಾಖಲಾದ ಹಿನ್ನೆಲೆಯಲ್ಲಿ ಕರ್ತವ್ಯದಿಂದ ಬಿಡುಗಡೆಗೊಳಿಸಿ ಡಿಸಿ ಡಾ| ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಕುಂದಾಪುರ ಆಸ್ಪತ್ರೆಗೆ ಡಾ| ಲತಾ ಅವರನ್ನು ವೈದ್ಯಾಧಿಕಾರಿಯಾಗಿ ನೇಮಿಸಿ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ
Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫಲ ಬಿಡಬಹುದು
Fishing: ಬುಲ್ಟ್ರಾಲ್ ನಿಷೇಧ ಕಟ್ಟುನಿಟ್ಟು ಮಾಡಿ: ಸಚಿವರಿಗೆ ಮನವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.