Kundapura: ಬೈಕ್‌-ಬುಲೆಟ್‌ ಢಿಕ್ಕಿ: ಮತ್ತೋರ್ವ ಸಾವು


Team Udayavani, Sep 30, 2024, 7:43 PM IST

man-a

ಕುಂದಾಪುರ: ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್‌ ಎದುರಿನ ಸರ್ವಿಸ್‌ ರಸ್ತೆಯಲ್ಲಿ ಬೈಕ್‌ ಮತ್ತು ಬುಲೆಟ್‌ ಮುಖಾಮುಖೀ ಢಿಕ್ಕಿಯಲ್ಲಿ ಗಾಯಗೊಂಡಿದ್ದ ಬುಲೆಟ್‌ ಸವಾರ ಕೂಡ ಮೃತಪಟ್ಟಿದ್ದಾರೆ.

ಶನಿವಾರ ರಾತ್ರಿ ಸಂಭವಿಸಿದ ಈ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು. ಕುಂದಾಪುರ ನಗರದ ಬರೆಕಟ್ಟುವಿನ ಬಾಳೆಹಿತ್ಲು ನಿವಾಸಿ ಪೈಂಟರ್‌ ವೆಂಕಟೇಶ್‌ ಅವರ ಪುತ್ರ ಶಶಾಂಕ್‌ ಮೊಗವೀರ (22) ಸ್ಥಳದಲ್ಲೇ ಮೃತಪಟ್ಟಿದ್ದು, ರವಿವಾರ ರಾತ್ರಿ ಬುಲೆಟ್‌ ಸವಾರ ಪುನೀತ್‌ ಚಿಕಿತ್ಸೆಗೆ ಸ್ಪಂದಿಸದೆ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಹಾಸನ ಮೂಲದ ಪುನೀತ್‌ ಅವಿವಾಹಿತರಾಗಿದ್ದು, ಕಂಡ್ಲೂರಿನಲ್ಲಿ ಅಯ್ಯಂಗಾರ್ ಬೇಕರಿ ನಡೆಸುತ್ತಿದ್ದರು. ಕಳೆದ 12 ವರ್ಷಗಳಿಂದ ಕಂಡ್ಲೂರಿನಲ್ಲಿ ತನ್ನ ತಾಯಿ ಪದ್ಮಾ ಅವರೊಂದಿಗೆ ವಾಸಿಸುತ್ತಿದ್ದರು. ಅಪಘಾತದಲ್ಲಿ ಪುನೀತ್‌ ಅವರ ತಾಯಿ ಗಂಭೀರವಾಗಿ ಗಾಯಗೊಂಡಿದ್ದು ಮಣಿಪಾಲದ ಕೆಎಂಸಿಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತ ತಾಣ
ಹಂಗಳೂರು ಸಮೀಪದ ಆಸುಪಾಸಿನಲ್ಲಿ ಹಲವು ಅಪಘಾತಗಳು ನಡೆಯತ್ತಿದ್ದು ಇದೊಂದು ಅಪಘಾತ ವಲಯ ಆಗಿ ಪರಿಣಮಿಸಿದೆ. ಇದರ ಬಗ್ಗೆ ಕುಂದಾಪುರ ಸಂಚಾರ ಠಾಣಾ ಪೊಲೀಸರು ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ದೀಪ ಅಳವಡಿಕೆಗೆ ಸೂಚನೆ
ಹೆದ್ದಾರಿಯಿಂದ ಸರ್ವಿಸ್‌ ರಸ್ತೆಗೆ ಬರುವ ವಾಹನಗಳು, ಕೋಟೇಶ್ವರ, ಆಸ್ಪತ್ರೆ ಮೊದಲಾದೆಡೆಯಿಂದ ಸರ್ವಿಸ್‌ ರಸ್ತೆಯಲ್ಲಿ ಬರುವ ವಾಹನಗಳು ಅಪಘಾತಕ್ಕೆ ಒಳಗಾಗುತ್ತಿವೆ. ಕೆಲ ಸಮಯದ ಹಿಂದೆ ಪುರಸಭೆ ಪೌರಕಾರ್ಮಿಕ ಅಪಘಾತದಲ್ಲಿ ಮೃತಪಟ್ಟಿದ್ದರು. ಇಲ್ಲಿ ರಾತ್ರಿ ವೇಳೆ ಬೆಳಕಿನ ಕೊರತೆಯಿದೆ. ಸೂಕ್ತ ಬೀದಿದೀಪಗಳಿಲ್ಲ ಎನ್ನುವುದನ್ನು ಗಮನಿಸಿದ ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಅವರು ಸೋಮವಾರ ಹೆದ್ದಾರಿ ಇಲಾಖೆಯ ಗುತ್ತಿಗೆದಾರ ಸಂಸ್ಥೆಗೆ ಬೀದಿ ದೀಪ ಅಳವಡಿಸುವಂತೆ ಸೂಚಿಸಿದ್ದಾರೆ. ಖಾಸಗಿಯಾಗಿ ಇಲ್ಲಿರುವ ಗ್ಯಾರೇಜ್‌ ಮಾಲಕರಿಗೂ ಮನವಿ ಮಾಡಿದ್ದು, ದೀಪ ಅಳವಡಿಸಲು ಹೇಳಿದ್ದಾರೆ.

ಟಾಪ್ ನ್ಯೂಸ್

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

1-ddd

Heartfelt gesture; ಪಾಕಿಸ್ಥಾನ ಮೂಲದ ಅಭಿಮಾನಿಗೆ ಶೂ ಗಿಫ್ಟ್ ನೀಡಿದ ಭಾರತದ ಖ್ಯಾತ ಗಾಯಕ

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Malpe: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

8

Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ

5(1)

Ajekar: ನೀರೆ ಪಂಚಾಯತ್‌ ವಿನೂತನ ಕ್ರಮದಿಂದ ಜಂಗುಳಿ ಪ್ರದೇಶ ಬದಲಾದ ಕತೆ

4

Kundapura ಪ್ರವಾಸಿ ಬಂಗಲೆ: 4.5 ಕೋಟಿ ರೂಪಾಯಿಗಳ ಅಂದಾಜು ಪಟ್ಟಿ ಸಿದ್ಧ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

arre

Kumble: ಮಾವನ ಕೊಲೆಗೆ ಯತ್ನ: ಆರೋಪಿ ಬಂಧನ

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

5

Malpe: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.