ಕುಂದಾಪುರ: ಕ್ರೇನ್ ಢಿಕ್ಕಿ ಹೊಡೆದು ಬೈಕ್ನ ಸಹ ಸವಾರ ಸಾವು
Team Udayavani, Dec 28, 2022, 1:27 AM IST
ಕುಂದಾಪುರ : ಬಳ್ಕೂರು ಗ್ರಾಮದ ಪಾನಕದಕಟ್ಟೆಯ ಶ್ರೀನಿವಾಸ ಕಾಂಪ್ಲೆಕ್ಸ್ ಬಳಿ ಹೆದ್ದಾರಿಯಲ್ಲಿ ಕ್ರೇನ್ ಢಿಕ್ಕಿಯಾಗಿ ಬೈಕ್ ಸಹಸವಾರ ಹೊಂಬಾಡಿ ಮಂಡಾಡಿ ಗ್ರಾಮದ ಹುಣಸೆಮಕ್ಕಿಯ ಸೋಮ ಮೊಗವೀರ ಅವರ ಪುತ್ರ ಪ್ರಶಾಂತ ಮೊಗವೀರ (31) ಅವರುಮೃತಪಟ್ಟಿದ್ದಾರೆ.
ಅಪರಿಚಿತ ಚಾಲಕ, ನೊಂದಣಿ ನಂಬ್ರ ಇಲ್ಲದ ಹೊಸ ಕ್ರೇನ್ ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದಾಗ ಗುತ್ತಿಕೆರೆಯ ದಿನೇಶ್ ಪೂಜಾರಿ ಅವರು ಬೈಕಿನಲ್ಲಿ ಪ್ರಶಾಂತ ಮೋಗವೀರ ಅವರನ್ನು ಸಹ ಸವಾರರಾಗಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದ ವೇಳೆ ಢಿಕ್ಕಿ ಸಂಭವಿಸಿದೆ. ಪರಿಣಾಮ ದಿನೇಶ್ ಪೂಜಾರಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಪ್ರಶಾಂತ ಮೋಗವೀರ ಅವರಿಗೆ ಗಂಭೀರ ಗಾಯವಾಗಿ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಕ್ರೇನ್ ಚಾಲಕ ಕ್ರೇನ್ ಅನ್ನು ರಸ್ತೆ ಬದಿ ನಿಲ್ಲಿಸಿ ಪರಾರಿಯಾಗಿದ್ದಾನೆ. ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಉಪ್ಪಿನಂಗಡಿ: ನೀರುಪಾಲಾದ ವ್ಯಕ್ತಿಯ ಮೃತದೇಹ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.