![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 6, 2022, 4:01 PM IST
ಉಡುಪಿ : ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಜಮೀನಿನ ಕನ್ವರ್ಷನ್ ಸರಕಾರದ ಮಟ್ಟದಲ್ಲಿ ಆಗಬೇಕಿತ್ತು. ಇದೀಗ ಸರಕಾರ ರಾಜ್ಯಾದ್ಯಂತ ಎಸ್ಸಿ, ಎಸ್ಟಿ ಅವರಿಗೆ 10 ಸೆಂಟ್ಸ್/4 ಗುಂಟೆ ವರೆಗೆ ಸ್ವಂತ ವಾಸದ ಉದ್ದೇಶಕ್ಕೆ ಮನೆ ನಿರ್ಮಿಸಲು ಜಿಲ್ಲಾಧಿಕಾರಿ ಹಂತದಲ್ಲಿಯೇ ಭೂ ಪರಿವರ್ತನೆಗೆ ಅವಕಾಶ ನೀಡಿ ಸರಕಾರ ಆದೇಶ ಹೊರಡಿಸಿದೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದವರು ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಒಳಪಡುವ ಜಮೀನುಗಳಲ್ಲಿ ಸ್ವಂತ ವಾಸ್ತವ್ಯದ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಲು ಅರ್ಜಿ ಸಲ್ಲಿಸಿದ್ದಲ್ಲಿ ಈ ಪ್ರಕ್ರಿಯೆಗಳು ಸರಕಾರದ ಹಂತದಲ್ಲಿ ವಿಳಂಬವಾಗಿ ಸಂಕಷ್ಟಕ್ಕೆ ಒಳಗಾಗುತ್ತಿದ್ದರು. ಸರಕಾರದ ಈ ಆದೇಶದಿಂದಾಗಿ ಎಸ್ಸಿ, ಎಸ್ಟಿ ಸಮುದಾಯದವರಿಗೆ ವಿಳಂಬವಾಗದೆ ಮನೆ ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ. ಆದರೆ ಮಾರಾಟ ಮಾಡುವಂತಿಲ್ಲ. ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಂದಾಯ ಸಚಿವ ಆರ್. ಅಶೋಕ್ ಕೊಕ್ಕರ್ಣೆಗೆ ಆಗಮಿಸಿದ್ದಾಗ ಈ ಬಗ್ಗೆ ಅವರ ಗಮನಕ್ಕೆ ತರಲಾಗಿದ್ದು, ವಿಧಾನಸಭೆಯಲ್ಲಿಯೂ ಇದನ್ನು ಪ್ರಸ್ತಾವ ಮಾಡಲಾಗಿತ್ತು ಎಂದು ಶಾಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.