Legislative Council ಮತದಾರರ ಪಟ್ಟಿ: 10,840 ಪದವೀಧರರು, 2,188 ಶಿಕ್ಷಕರು ನೋಂದಣಿ


Team Udayavani, Nov 6, 2023, 11:21 PM IST

Legislative Council ಮತದಾರರ ಪಟ್ಟಿ: 10,840 ಪದವೀಧರರು, 2,188 ಶಿಕ್ಷಕರು ನೋಂದಣಿ

ಉಡುಪಿ: ಮುಂಬರುವ ವಿಧಾನಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡುವ ಪ್ರಕ್ರಿಯೆ ನ.6ಕ್ಕೆ ಪೂರ್ಣಗೊಂಡಿದ್ದು ಜಿಲ್ಲೆಯಲ್ಲಿ 10,840 ಪದವೀಧರರು ಹಾಗೂ 2,188 ಶಿಕ್ಷಕರು ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

ನೈಋತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಪಡಿಸಲು ಜಿಲ್ಲೆಯ ಪದವೀಧರರು ಹಾಗೂ ಶಿಕ್ಷಕರಿಗೆ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಪದವೀಧರರು, ಶಿಕ್ಷಕರು ನಿರೀಕ್ಷಿತ ಮಟ್ಟದಲ್ಲಿ ನೋಂದಾಯಿಸಿಕೊಂಡಿಲ್ಲ.

ಉಡುಪಿ ಹೋಬಳಿಯಲ್ಲೇ ಹೆಚ್ಚು
ಜಿಲ್ಲೆಯ 10 ಹೋಬಳಿಗಳಲ್ಲಿ ಉಡುಪಿ ಹೋಬಳಿಯಲ್ಲೇ ಶೇ.50ರಷ್ಟು ಪದವೀಧರರು ನೋಂದಣಿ ಮಾಡಿಸಿಕೊಂಡಿದ್ದಾರೆ. ಬೈಂದೂರಿನಿಂದ 532, ವಂಡ್ಸೆಯಿಂದ 340, ಕುಂದಾಪುರದಿಂದ 694, ಕೋಟದಿಂದ 350, ಬ್ರಹ್ಮಾವರದಿಂದ 524, ಉಡುಪಿಯಿಂದ 5,853, ಕಾಪುವಿನಲ್ಲಿ 1,006, ಹೆಬ್ರಿಯಲ್ಲಿ 209, ಅಜೆಕಾರ್‌ನಲ್ಲಿ 211 ಹಾಗೂ ಕಾರ್ಕಳದಲ್ಲಿ 1,121 ಪದವೀಧರರು ಸೂಕ್ತ ದಾಖಲೆ ಒದಗಿಸಿಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಂಡಿದ್ದಾರೆ.

ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೈಂದೂರಿನ 210, ವಂಡ್ಸೆಯ 119, ಕುಂದಾಪುರದ 249, ಕೋಟದ 91, ಬ್ರಹ್ಮಾವರದ 129, ಉಡುಪಿಯ 708, ಕಾಪುವಿನ 203, ಹೆಬ್ರಿಯ 57, ಅಜೆಕಾರ್‌ನ 35 ಹಾಗೂ ಕಾರ್ಕಳದ 387 ಶಿಕ್ಷಕರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೂಕ್ತ ದಾಖಲೆ ಒದಗಿಸಿದ್ದಾರೆ.

ಪದವೀಧರರ ನಿರಾಸಕ್ತಿ
ಪದವೀಧರರು ನಿರೀಕ್ಷಿತ ಪ್ರಮಾಣದಲ್ಲಿ ಮತದಾರರ ಪಟ್ಟಿಗೆ ನೋಂದಣಿ ಮಾಡಿಸಿಕೊಂಡಿಲ್ಲ. ಪದವಿ ಪ್ರಮಾಣ ಪತ್ರವನ್ನು ತಾಲೂಕು ಕಚೇರಿಗೆ ತೆಗೆದುಕೊಂಡು ಹೋಗಬೇಕು. ಗೆಜೆಟೆಡ್‌ ಅಧಿಕಾರಿಯಿಂದ ದೃಢೀಕರಿಸಬೇಕು. ಇದರ ಜತೆಗೆ ವಿವಿಧ ದಾಖಲೆಗಳನ್ನು ಸಲ್ಲಿಸಬೇಕು. ಹೀಗೆ ನಿಯಮವೂ ಸ್ವಲ್ಪ ಕಠಿನವಿದ್ದರಿಂದ ಯುವ ಪದವೀಧರರು ನೋಂದಾಯಿಸಿಕೊಳ್ಳಲು ಮುಂದೆ ಬಂದಿಲ್ಲ. ಜಿಲ್ಲಾಡಳಿತದಿಂದ ಈ ಬಗ್ಗೆ ಪ್ರಚಾರ ಪ್ರಕ್ರಿಯೆ ನಡೆಸಿದ್ದರೂ ಗ್ರಾಮೀಣ ಭಾಗದಲ್ಲಿ ಅಧಿಕಾರಿಗಳು ಯುವ ಪದವೀಧರರಲ್ಲಿ ಅರಿವು, ಜಾಗೃತಿ ಮೂಡಿಸುವಲ್ಲಿ ಪೂರ್ಣ ಪ್ರಮಾಣದಲ್ಲಿ ಯಶಸ್ಸು ಕಂಡಿಲ್ಲ. ಕನಿಷ್ಠ 25 ಸಾವಿರ ಪದವೀಧರರು ನೋಂದಾಯಿಸಿಕೊಳ್ಳಬಹುದು ಎಂಬ ನಿರೀಕ್ಷೆಯಿತ್ತು. ಅಂತಿಮವಾಗಿ ನೋಂದಾಯಿಸಿಕೊಂಡಿದ್ದು 10,840 ಪದವೀಧರರು ಮಾತ್ರ.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.