“ವಿಧಾನ ಪರಿಷತ್ಗೆ ವಿಕಲಚೇತನ ಪ್ರತಿನಿಧಿ ನೇಮಿಸಿ’
Team Udayavani, Mar 16, 2017, 4:19 PM IST
ಉಡುಪಿ: ವಿಧಾನ ಪರಿಷತ್ತಿಗೆ ವಿಕಲಚೇತನ ಪ್ರತಿನಿಧಿಯನ್ನು ನೇಮಿಸಬೇಕು ಹಾಗೂ ಸರ್ಕಾರಿ ವಿಕಲಚೇತನ ನೌಕರರಿಗೆ ಸುಪ್ರೀಂಕೋರ್ಟಿನ ಆದೇಶದಂತೆ ಶೇ. 3ರಷ್ಟು ಬಡ್ತಿ ಮಿಸಲಾತಿ ಆದೇಶವನ್ನು ಶೀಘ್ರ ಜಾರಿಗೊಳಿಸುವಂತೆ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ಒತ್ತಾಯಿಸಿದ್ದಾರೆ.
ಅವರು ಉಡುಪಿಯ ಸರಕಾರಿ ನೌಕರರ ಭವನದಲ್ಲಿ ಕರೆಯಲಾಗಿದ್ದ ಜಿಲ್ಲಾ ಮಟ್ಟದ ವಿಕಲಚೇತನ ನೌಕರರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟಿನ ಆದೇಶದಂತೆ ಸರ್ಕಾರಿ ಅಂಗವಿಕಲ ನೌಕರರಿಗೆ ಬಡ್ತಿಯಲ್ಲಿ ಶೇ. 3ರಷ್ಟು ಮಿಸಲಾತಿಯನ್ನು ಶೀಘ್ರ ಜಾರಿಗೊಳಿಸಬೇಕು. ಇಲ್ಲದಿದ್ದರೆ ಸಂಘದ ಸದಸ್ಯರೆಲ್ಲ ಎ. 1ರಂದು ರಾಜ್ಯದಾದ್ಯಂತ ಕಪ್ಪು$ಬಟ್ಟೆ ಧರಿಸಿ ಕರ್ತವ್ಯ ನಿರ್ವಹಿಸುವುದರ ಜತೆಗೆ ಪ್ರತೀ ತಾಲೂಕಿನಲ್ಲಿ ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಡ ಹಾಕಲಾಗುವುದು. ನಕಲಿ ವಿಕಲಚೇತನರನ್ನು ಪತ್ತೆ ಹಚ್ಚಲು ಒಂದು ಸಮಿತಿ ನೇಮಕ ಮಾಡಬೇಕು. ಅಂತಹ ಪ್ರಮಾಣ ಪತ್ರವನ್ನು ಪಡೆದವರ ಮೇಲೆ ಹಾಗೂ ನಕಲಿ ಪ್ರಮಾಣ ಪತ್ರ ನೀಡಿದ ವೈದ್ಯರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ, ಜಿಲ್ಲಾ ಸಂಘದ ನಿರ್ದೇಶಕ ಪ್ರಶಾಂತ ಶೆಟ್ಟಿ, ನಾಗೇಶ, ಎಚ್. ರಾಮಾಂಜಯ್ನಾ, ಗುಣವತಿ, ಗೋಪಾಲ ಮೊಗೇರ, ಉದಯಕುಮಾರ ಶೆಟ್ಟಿ, ಅನಿತಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ
Udupi: ಎಸ್ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.