“ಲೋಕಾಯುಕ್ತದಲ್ಲಿ ಎಸಿಬಿ ಇರಲಿ’
Team Udayavani, Nov 24, 2019, 5:06 AM IST
![mm-39](https://www.udayavani.com/wp-content/uploads/2019/11/mm-39-620x319.jpg)
ಮಂಗಳೂರು: ಭ್ರಷ್ಟಾಚಾರ ನಿಯಂತ್ರಣ ಮತ್ತು ದುರಾಡಳಿತಕ್ಕೆ ಕಡಿವಾಣ ಹಾಕುವುದಕ್ಕಾಗಿ ಲೋಕಾಯುಕ್ತಕ್ಕೆ ಎಸಿಬಿ ವ್ಯವಸ್ಥೆ ಅಗತ್ಯ ಎಂದು ಲೋಕಾಯುಕ್ತ ನ್ಯಾ| ಪಿ. ವಿಶ್ವನಾಥ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರಿನಲ್ಲಿ ತನ್ನನ್ನು ಭೇಟಿ ಯಾದ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಎಸಿಬಿ ವಿಚಾರ ನ್ಯಾಯಾಲಯದಲ್ಲಿದೆ. ಹೀಗಾಗಿ ಈ ವಿಚಾರದ ಬಗ್ಗೆ ಹೆಚ್ಚೇನೂ ಹೇಳುವುದಿಲ್ಲ. ಲೋಕಾ ಯುಕ್ತನಾಗಿ ನನ್ನ 2 ವರ್ಷ 8 ತಿಂಗಳ ಅನುಭವದಲ್ಲಿ ಹೇಳುವುದಾದರೆ ಎಸಿಬಿ ಲೋಕಾಯುಕ್ತಕ್ಕೆ ಪೂರಕ. ಇದರರ್ಥ ಎಸಿಬಿ ಇಲ್ಲದಿದ್ದರೆ ಲೋಕಾಯುಕ್ತ ದುರ್ಬಲ ಎಂದಲ್ಲ. ಎಸಿಬಿ ಇದ್ದರೆ ಭ್ರಷ್ಟಾಚಾರದ ವಿರುದ್ಧ ತ್ವರಿತವಾಗಿ ಕ್ರಮಗಳನ್ನು ಜರಗಿಸಲು ಇನ್ನಷ್ಟು ಸಹಾಯವಾಗುತ್ತದೆ ಎಂದರು.
ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ದೊರಕಿಸುವುದು ಲೋಕಾಯುಕ್ತದ ಆದ್ಯತೆ. ಇದರಲ್ಲಿ ಅಧಿಕಾರಿಗಳು ವಿಫಲವಾದರೆ ಅದು ದುರಾಡಳಿತವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಜನರಲ್ಲಿ ಹೆಚ್ಚಿನ ಜಾಗೃತಿಯಾಗಬೇಕು. ಜನರೂ ಆಮಿಷ ಒಡ್ಡಬಾರದು ಎಂದರು.
ಲೋಕಾಯುಕ್ತದಲ್ಲಿ ಖಾಲಿ ಇದ್ದ 9 ಹುದ್ದೆಗಳಲ್ಲಿ 5 ಹುದ್ದೆಗಳನ್ನು ಭರ್ತಿಗೊಳಿಸಲಾಗಿದೆ. ಇನ್ನುಳಿದ 4 ಹುದ್ದೆಗಳ ಭರ್ತಿಗೆ ಕೋರಿಕೆ ಸಲ್ಲಿಸ ಲಾಗಿದೆ. ಲೋಕಾಯುಕ್ತದಲ್ಲಿ ಇನ್ನೂ ಹಳೆಯ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಶೀಘ್ರ ಇತ್ಯರ್ಥಗೊಳ್ಳುವ ನಿಟ್ಟಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಯಾಗು ವುದು ಅವಶ್ಯ ಎಂದರು.
ಟಾಪ್ ನ್ಯೂಸ್
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
![RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು](https://www.udayavani.com/wp-content/uploads/2024/12/upi-150x79.jpg)
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
![arrest-woman](https://www.udayavani.com/wp-content/uploads/2024/12/arrest-woman-150x100.jpg)
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
![THAAD System: ಹೌತಿ ದಾಳಿ ತಡೆಗೆ ಇಸ್ರೇಲ್ನಿಂದ “ಥಾಡ್’ ವ್ಯವಸ್ಥೆ ಬಳಕೆ](https://www.udayavani.com/wp-content/uploads/2024/12/TAAD-150x84.jpg)
THAAD System: ಹೌತಿ ದಾಳಿ ತಡೆಗೆ ಇಸ್ರೇಲ್ನಿಂದ “ಥಾಡ್’ ವ್ಯವಸ್ಥೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.