ಟಿಕೆಟ್‌ ಸಿಗದೆ ನಿರಾಸೆ: ಗುರ್ಮೆ ಸುರೇಶ್‌ ಶೆಟ್ಟಿ


Team Udayavani, Apr 23, 2018, 6:00 AM IST

21.jpg

ಕಾಪು: ನಾನು ಅಧಿಕಾರಕ್ಕಾಗಿ ಬಿಜೆಪಿಗೆ ಸೇರಿದವನಲ್ಲ. ಹಣ ಮಾಡುವ ಉದ್ದೇಶದಿಂದಲೂ ರಾಜಕೀಯಕ್ಕೆ ಬಂದಿಲ್ಲ. ಅದು ನನಗೆ ಗಂಜಿ ಕೇಂದ್ರವೂ ಅಲ್ಲ. ಕಷ್ಟಪಟ್ಟು ಸಂಪಾದಿಸಿರುವ ಹಣದಲ್ಲಿ ಶೇ. 80ರಷ್ಟನ್ನು ಸಮಾಜ ಮತ್ತು ಸಮಾಜದ ಜನರಿಗಾಗಿ ನೀಡಿದ್ದೇನೆ. ನನ್ನ ವೈಯಕ್ತಿಕ ಹಣದ ಜತೆಗೆ ಸರಕಾರದ ಅನುದಾನವನ್ನೂ ಸೇರಿಸಿಕೊಂಡು ಕ್ಷೇತ್ರದ ಜನತೆಯ ಸೇವೆ ಮಾಡಬೇಕೆಂಬ ಹಂಬಲದೊಂದಿಗೆ ವರಿಷ್ಠರಲ್ಲಿ ಟಿಕೆಟ್‌ಗಾಗಿ ಬೇಡಿಕೆ ಸಲ್ಲಿಸಿದ್ದೆ, ಸಿಗದೆ ಇರುವುದು ನಿರಾಸೆ ಮೂಡಿಸಿದೆ ಎಂದು ಬಿಜೆಪಿ ಕಾಪು ಕ್ಷೇತ್ರದ ಆಕಾಂಕ್ಷಿ ಗುರ್ಮೆ ಸುರೇಶ್‌ ಶೆಟ್ಟಿ ಹೇಳಿದ್ದಾರೆ.

ಕಳತ್ತೂರು-ಗುರ್ಮೆಯಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯದಲ್ಲಿ ಯೋಗ ಮತ್ತು ಯೋಗ್ಯತೆ ಎರಡೂ ಇದ್ದವನಿಗೆ ಮಾತ್ರ ಮೆಟ್ಟಿಲನ್ನೇರಲು ಸಾಧ್ಯವಿದೆ. ಪಕ್ಷ ಅವಕಾಶ ನೀಡಿಲ್ಲವೆಂಬ ಕಾರಣಕ್ಕೆ ಬೆನ್ನು ಹಾಕಿ ಓಡಿ ಹೋಗುವ ವ್ಯಕ್ತಿ ನಾನಲ್ಲ. ಟಿಕೆಟ್‌ ನಿರಾಕರಿಸಿದ್ದರೂ ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಅಧಿಕಾರವಿಲ್ಲದೆಯೂ ಜನರೊಂದಿಗೆ ಹೇಗೆ ಇರಲು ಸಾಧ್ಯ ಎನ್ನುವುದನ್ನು ನನ್ನ 35 ವರ್ಷದ ಸಾರ್ವಜನಿಕ ಜೀವನದಲ್ಲಿ ಅರಿತುಕೊಂಡಿದ್ದೇನೆ. ಅಭಿಮಾನಿಗಳು ಈ ಬಗ್ಗೆ ನಿರಾಶರಾಗಬಾರದು. ಎಂದಿನಂತೆಯೇ ನಿಮ್ಮೊಂದಿಗಿರುತ್ತೇನೆ ಎಂದರು.

ಕಾರ್ಯಕರ್ತರಿಂದ ಹಲವು ಅಭಿಪ್ರಾಯ: ಪಕ್ಷೇತರರಾಗಿ ಕಣಕ್ಕಿಳಿಯಬೇಕು, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷ ಮತ್ತು ಹುದ್ದೆಗಳಿಗೆ ರಾಜೀನಾಮೆ ನೀಡಿ ನಿಮ್ಮೊಂದಿಗೆ ಬರುತ್ತೇವೆ ಎಂಬಿತ್ಯಾದಿ ಬೇಡಿಕೆಗಳು ಕಾರ್ಯ ಕರ್ತರು ಮತ್ತು ಅಭಿ ಮಾನಿ ಗಳಿಂದ ಕೇಳಿಬಂತು. ಆದರೆ ಎಲ್ಲವನ್ನೂ   ಶಾಂತಿಯಿಂದ ಆಲಿಸಿದ ಅವರು ಕಾರ್ಯಕರ್ತ ರ್ಯಾರೂ ಆ ಬಗ್ಗೆ ಯೋಚಿಸಬಾರದು ಎಂಬ ಸಲಹೆ ನೀಡಿದರು.

ಉಡುಪಿ ಜಿ.ಪಂ. ಸದಸ್ಯರಾದ ಶಶಿಕಾಂತ್‌ ಪಡುಬಿದ್ರಿ, ಶಿಲ್ಪಾ ಸುವರ್ಣ, ಪ್ರಮುಖರಾದ ಕುರ್ಕಾಲು ದಿನಕರ ಶೆಟ್ಟಿ, ಪಯ್ನಾರು ಶಿವರಾಮ ಶೆಟ್ಟಿ, ಉಮೇಶ್‌ ಶೆಟ್ಟಿ ಕಳತ್ತೂರು, ಮಿಥುನ್‌ ಹೆಗ್ಡೆ, ರಂಜನ್‌ ಹೆಗ್ಡೆ, ಸಹನಾ ತಂತ್ರಿ, ಪ್ರವೀಣ್‌ ಪೂಜಾರಿ, ಸುರೇಶ್‌ ಶೇರ್ವೆಗಾರ್‌, ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು, ವಿಜಯ ಕರ್ಕೇರ, ಅರುಣ್‌ ಶೆಟ್ಟಿ ಪಾದೂರು, ಜಿಯಾನಂದ ಹೆಗಡೆ, ಸುಧಾಕರ ಶೆಟ್ಟಿ, ಅನಿಲ್‌ ಕುಮಾರ್‌, ಜಗದೀಶ್‌ ಅರಸ, ಬಬಿತಾ ಅರಸ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.