ಪೇಜಾವರ ಶ್ರೀಗಳ ಬಳಿ ಹೋಗೆವು; ಬೇಕಿದ್ದರೆ ಸಾಣೆಹಳ್ಳಿಗೇ ಬರಲಿ: ಶಿವಾಚಾರ್ಯ ಸ್ವಾಮೀಜಿ


Team Udayavani, Aug 3, 2019, 10:43 AM IST

pejavar-saneha

ಉಡುಪಿ: ಲಿಂಗಾಯತ ಪ್ರತ್ಯೇಕ ಧರ್ಮ. ಅದರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ. ಪೇಜಾವರ ಶ್ರೀಪಾದರು ಚರ್ಚೆಗೆ ಕರೆ ನೀಡಿದ್ದರು. ನಾವು ಅವರಿದ್ದಲ್ಲಿಗೆ ಹೋಗುವುದಿಲ್ಲ, ಅವರು ಬೇಕಿದ್ದರೆ ಸಾಣೆಹಳ್ಳಿಗೆ ಬರಲಿ, ಬಹಿರಂಗ ಚರ್ಚೆಗೆ ನಾವು ಸಿದ್ಧ ಎಂದು ಸಾಣೆಹಳ್ಳಿ ಶ್ರೀ ತರಳಬಾಳು ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಒಂದು ತಿಂಗಳು ರಾಜ್ಯಾದ್ಯಂತ “ಮತ್ತೆ ಕಲ್ಯಾಣ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇವೆ. ಮುಂದಿನ ತಿಂಗಳು ಪೇಜಾವರ ಶ್ರೀಗಳಿಗೆ ಸಾಣೆಹಳ್ಳಿಗೆ ಬರುವಂತೆ ತಿಳಿಸುವುದಾಗಿ ಹೇಳಿದರು.

ಸ್ಥಾವರ ಶಿವ-ಜಂಗಮ ಶಿವ
ಲಿಂಗಾಯತ ಧರ್ಮ ಮತ್ತು ವೀರಶೈವ ಧರ್ಮ ಒಂದೇ ಅಲ್ಲ. ಒಂದು ಕಾಲಕ್ಕೆ ಅವು ಒಂದೇ ಎಂಬ ಭಾವನೆ ಇತ್ತು. ಶಿವನನ್ನು ಪೂಜಿಸು ವವರೆಲ್ಲ ಲಿಂಗಾಯತರು ಎಂಬ ಪೇಜಾವರ ಶ್ರೀಗಳ ಮಾತು ಒಪ್ಪಲು ಸಾಧ್ಯವಿಲ್ಲ. ಕೆಲವರು ಸ್ಥಾವರ ಶಿವನನ್ನು ಪೂಜಿಸುತ್ತಾರೆ. ಆದರೆ ಲಿಂಗಾಯತರು ಜಂಗಮ ಶಿವನನ್ನು ಇಷ್ಟಲಿಂಗದ ರೂಪದಲ್ಲಿ ತಾವೇ ಮುಟ್ಟಿ ಪೂಜಿಸುತ್ತಾರೆ ಎಂದರು.

ನೀಲಾ ವಂಚನೆ
ಉಡುಪಿಯ “ಮತ್ತೆ ಕಲ್ಯಾಣ’ ಕಾರ್ಯಕ್ರಮದಲ್ಲಿ ಚಿಂತಕಿ ಕೆ. ನೀಲಾ ಭಾಗವಹಿಸದೆ ಇರುವುದಕ್ಕೆ ಡಾ| ಮೋಹನ್‌ ಆಳ್ವ ಮತ್ತು ಶಾಸಕ ರಘುಪತಿ ಭಟ್‌ ಭಾಗವಹಿಸುತ್ತಿರುವುದು ಕಾರಣ ಅಲ್ಲ. ಬೇರೆ ಕಾರ್ಯಕ್ರಮ ಇದ್ದು, ಬರುವುದಕ್ಕಾಗುವುದಿಲ್ಲ ಎಂದು ಮೊದಲೇ ಹೇಳಿದ್ದರು. ಈಗ ಮೋಹನ್‌ ಆಳ್ವ, ರಘುಪತಿ ಭಟ್‌ ಅವರನ್ನು ಆಹ್ವಾನಿಸಿರುವ ಕಾರಣ ಹೇಳುತ್ತಿದ್ದಾರೆ . ಈ ರೀತಿ ವಂಚನೆ ಸರಿಯಲ್ಲ. ಬಸವ ತಣ್ತೀವನ್ನು ಒಪ್ಪುವ, ಜನಪ್ರಿಯರಾದವರನ್ನು ಆಹ್ವಾನಿಸುವಂತೆ ನಾವು ತಿಳಿಸಿದ್ದೆವು; ಭಟ್‌, ಡಾ| ಆಳ್ವ ಅವರನ್ನು ನಾವು ಆಹ್ವಾನಿಸಿದ್ದಲ್ಲ ಎಂದು ಸ್ವಾಮೀಜಿ ಹೇಳಿದರು.

ಯಾರು ಹೇಳಿದ್ದು ಸಿಎಂ ಲಿಂಗಾಯತರೆಂದು?’
ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ, “ಯಡಿಯೂರಪ್ಪ ಲಿಂಗಾಯತ ಅಂತ ಯಾರು ಹೇಳಿದ್ದು?’ ಎಂದು ಮರುಪ್ರಶ್ನಿಸಿದ ಸ್ವಾಮೀಜಿ, ಯಾರು ಲಿಂಗಾಯತ ಧರ್ಮವನ್ನು ಪಾಲಿಸುತ್ತಾನೋ ಅವನೇ ನಿಜವಾದ ಲಿಂಗಾಯತ. ಲಿಂಗಾಯತ ಎಂಬುದು ಒಂದು ತತ್ವ ಸಿದ್ಧಾಂತವೇ ವಿನಾ ಒಂದುಜಾತಿಗೆ ಸೀಮಿತ ಅಲ್ಲ. ಹಾಗಾಗಿ ಯಡಿಯೂರಪ್ಪ ಲಿಂಗಾಯತರಲ್ಲ ಎಂದರು.

“ಬಿಎಸ್‌ವೈ ದಾರಿಯಲ್ಲಿ ಸಿದ್ದು, ಎಚ್‌ಡಿಕೆ’
ರಾಜ್ಯ ಸರಕಾರ ಮಠಗಳಿಗೆ ನೀಡುವ ಹಣವನ್ನು ನಾವು ಸ್ವೀಕಾರ ಮಾಡುವುದಿಲ್ಲ. ಯಾವುದಾದರೂ ಯೋಜನೆ ಹಾಕಿಕೊಂಡು ಅದಕ್ಕೆ ಪೂರಕವಾಗಿ ಅನುದಾನ ನೀಡಬೇಕು. ಅದು ಬಿಟ್ಟು ನೇರವಾಗಿ ಮಠಕ್ಕೆ ಹಣ ನೀಡಿದರೆ ನಾವು ತೆಗೆದುಕೊಳ್ಳುವುದಿಲ್ಲ. ಮೊದಲು ಮಠಗಳಿಗೆ ಹಣ ನೀಡಿದ ಯಡಿಯೂರಪ್ಪರನ್ನು ಟೀಕೆ ಮಾಡಿದ ಸಿದ್ದರಾಮಯ್ಯ, ಕುಮಾರಸ್ವಾಮಿ ಕೂಡ ಮುಂದೆ ಅದೇ ಕೆಲಸ ಮುಂದುವರಿಸಿದರು ಎಂದು ಸ್ವಾಮೀಜಿ ಟೀಕಿಸಿದರು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.