Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಎ. 25 ರಿಂದ ಮೇ 9ರವರೆಗೆ ಬ್ರಹ್ಮಕಲಶೋತ್ಸವ, ನಾಗಬ್ರಹ್ಮಮಂಡಲ, ಮನ್ಮಹಾರಥೋತ್ಸವ, ಮಹಾಅನ್ನಸಂತರ್ಪಣೆ

Team Udayavani, Apr 25, 2024, 4:23 PM IST

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಕಾಪು : ಕುತ್ಯಾರು – ಪಾದೂರು – ಕಳತ್ತೂರು ಗ್ರಾಮಾಧಿಪತಿ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಮಾರ್ಗದರ್ಶನದೊಂದಿಗೆ ಎ. 25ರಿಂದ ಮೊದಲ್ಗೊಂಡು ಮೇ 9ರವರೆಗೆ ಮಹಾಗಣಪತಿ ದೇವರ ನೂತನ ಶಿಲಾಮಯ ಗರ್ಭಗೃಹ ಸಮರ್ಪಣೆ – ಬಿಂಬ ಪುನಃಪ್ರತಿಷ್ಠೆ, 500 ಕಲಶ ಸಹಿತ ಬ್ರಹ್ಮಕಲಶಾಭಿಷೇಕ – ಸಹಸ್ತ್ರ ನಾಲಿಕೇರ ಮಹಾಗಣಪತಿ ಯಾಗ, ಸಹಸ್ತ್ರಕಲಶ ಸಹಿತ ಬ್ರಹ್ಮಕಲಶಾಭಿಷೇಕ – ಏಕಪವಿತ್ರ ಶ್ರೀ ನಾಗಬ್ರಹ್ಮಮಂಡಲೋತ್ಸವ, ಮನ್ಮಹಾರಥೋತ್ಸವ – ಮಹಾಅನ್ನಸಂತರ್ಪಣೆಯು ನಡೆಯಲಿದೆ.

ಎ. 25ರಂದು ಋತ್ವಿಜರ ಸ್ವಾಗತ ಸಹಿತವಾಗಿ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿದ್ದು ಮೇ 9 ರವರೆಗೆ ಪ್ರತೀ ದಿನ ವಿವಿಧ ಧಾರ್ಮಿಕ ಕಾರ್ಯಕ್ರಮ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿವೆ.

ಎ. 27ರಂದು ಕುತ್ಯಾರು, ಪಾದೂರು, ಕಳತ್ತೂರು ಗ್ರಾಮಸ್ಥರಿಂದ ಕಳತ್ತೂರು ಕೊಟ್ಟಾರಿಕಟ್ಟೆ ಅಶ್ವಥಕಟ್ಟೆಯಿಂದ ಹಸಿರು ಹೊರೆಕಾಣಿಕೆ ಶೋಭಾಯಾತ್ರೆ, ಎ.28ರಂದು ಬೆಳಿಗ್ಗೆ 10.30ಕ್ಕೆ ಮಹಾಗಣಪತಿ ದೇವರ ನೂತನ ಶಿಲಾಮಯ ಗರ್ಭಗೃಹದಲ್ಲಿ ಗಣಪತಿ ದೇವರ ಬಿಂಬ ಪುನಃಪ್ರತಿಷ್ಠೆ, ಎ.29ರಂದು ಬೆಳಿಗ್ಗೆ ಮಹಾಲಿಂಗೇಶ್ವರ ದೇವರ ಬಿಂಬಶುದ್ಧಿ ಪ್ರಕ್ರಿಯೆ, ಸಹಸ್ರ ನಾಲಿಕೇರ ಮಹಾಗಣಪತಿ ಯಾಗ ನಡೆಯಲಿದೆ.

ಮೇ 1 – 2 : ಬ್ರಹ್ಮಕಲಶಾಭಿಷೇಕ, ನಾಗಮಂಡಲೋತ್ಸವ : ಮೇ 1ರಂದು ಬೆಳಿಗ್ಗೆ ಮಹಾಗಣಪತಿ ದೇವರಿಗೆ 501 ದ್ರವ್ಯಮಿಳಿತ ಬ್ರಹ್ಮಕಲಶ ಪ್ರತಿಷ್ಠೆ, 10-18ಕ್ಕೆ ಬ್ರಹ್ಮಕಲಶಾಭಿಷೇಕ, ಅನ್ನಸಂತರ್ಪಣೆ ಸೇವೆ, ಮೇ 2ರಂದು ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವರಿಗೆ 1001 ದ್ರವ್ಯಸಹಿತ ಬ್ರಹ್ಮಕಲಶ ಪ್ರತಿಷ್ಠೆ, ಬೆಳಿಗ್ಗೆ 10-14ಕ್ಕೆ ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಅವಸ್ರುತ ಬಲಿ, ಪಲ್ಲಪೂಜೆ, ಮಹಾಅನ್ನಸಂತರ್ಪಣೆ, ಸಂಜೆ ದೇವರಿಗೆ ರಾತ್ರಿ ಪೂಜೆ, ಮಹಾರಂಗಪೂಜೆ, ವೈಭವದ ಉತ್ಸವ ಬಲಿ ಹಾಗೂ ರಾತ್ರಿ 8-30ರಿಂದ ನಾಗದೇವರ ಸನ್ನಿಧಿಯಲ್ಲಿ ಹಾಲಿಟ್ಟು ಸೇವೆ, ಪ್ರಸನ್ನ ಪೂಜೆ, ನಾಗಸಂದರ್ಶನ, ಅನ್ನಸಂತರ್ಪಣೆ ಸೇವೆ, ರಾತ್ರಿ 9-00ರಿಂದ ಬ್ರಹ್ಮಶ್ರೀ ಸಗ್ರಿ ಗೋಪಾಲಕೃಷ್ಣ ಸಾಮಗ ಹಾಗೂ ಮುದ್ದೂರು ವೈದ್ಯ ಬಳಗದವರ ಸಹಕಾರದಲ್ಲಿ ಏಕಪವಿತ್ರ ನಾಗಮಂಡಲೋತ್ಸವ ನಡೆಯಲಿದೆ.

ಧಾರ್ಮಿಕ ಸಭೆ : ಮೇ 2ರಂದು ಸಂಜೆ 4.30ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದು ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ, ಮಾಜಿ ಆಡಳಿತ ಮೊಕ್ತೇಸರ ಕುತ್ಯಾರು ಕೃಷ್ಣಮೂರ್ತಿ ಭಟ್‌ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮೇ 1-9ರವರೆಗೆ ವಾರ್ಷಿಕ ಮಹೋತ್ಸವ : ಮೇ 1ರಿಂದ ಬೈಗಿನ ಬಲಿ ಆರಂಭಗೊಳ್ಳಲಿದ್ದು ಮೇ 6ರಂದು ಬೆಳಿಗ್ಗೆ 11 ಗಂಟೆಗೆ ಧ್ವಜಾರೋಹಣ, ಶತ ರುದ್ರಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಹೂವಿನ ಪೂಜೆ, ನೃತ್ಯ ಬಲಿ, ಆಯನ ಬಲಿ ನಡೆಯಲಿದೆ. ಮೇ 8ರಂದು ಬೆಳಿಗ್ಗೆ ಶತರುದ್ರಾಭಿಷೇಕ, ಮಹಾಪೂಜೆ, ಪಲ್ಲಪೂಜೆ, ರಥಾರೋಹಣ, ಮಹಾಅನ್ನಸಂತರ್ಪಣೆ, ರಾತ್ರಿ 7-30ಕ್ಕೆ ಶ್ರೀ ಮನ್ಮಹಾರಥೋತ್ಸವ, ಕಳತ್ತೂರು ಬೆಡಿ, ನೃತ್ಯ ಬಲಿ, ರಂಗಪೂಜೆ, ಭೂತಬಲಿ, ಕವಾಟ ಬಂಧನ ನಡೆಯಲಿದೆ. ಮೇ 9ರಂದು ಕವಾಟೋದ್ಘಾಟನೆ, ತುಲಾಭಾರ, ಅವಭೃತ ಸ್ನಾನ, ನೃತ್ಯಬಲಿ, ಧ್ವಜಾವರೋಹಣ ನಡೆದು, ಸಂಜೆ 5 ಗಂಟೆಗೆ ಕಲ್ಕುಡ ದೈವದ ಸನ್ನಿಧಿಯಲ್ಲಿ ಪ್ರಸನ್ನ ಪೂಜೆ, ಭಂಡಾರ ಇಳಿಯುವುದು, 7-30ಕ್ಕೆ ಅನ್ನಸಂತರ್ಪಣೆ. ರಾತ್ರಿ ಶ್ರೀ ಕಲ್ಕುಡ ದೈವದ ವೈಭವದ ಗಗ್ಗರ ಸೇವೆ, ಹಾಲಾವಳಿ, ಪ್ರಸಾದ ವಿತರಣೆ ನಡೆಯಲಿದೆ.

ಬ್ರಹ್ಮಕಲಶೋತ್ಸವದ ಪ್ರಯುಕ್ತ ಮೇ 1ರವರೆಗೆ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವೇ| ಮೂ| ಕುತ್ಯಾರು ಕೇಂಜ ಶ್ರೀಧರ ತಂತ್ರಿ, ಗೌರವಾಧ್ಯಕ್ಷ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪೈಯ್ನಾರು ಶಿವರಾಮ ಶೆಟ್ಟಿ, ಕೋಶಾಧಿಕಾರಿ ಅರುಣಾಕರ ಶೆಟ್ಟಿ ಕಳತ್ತೂರು ಮತ್ತು ಸಮಿತಿ ಸದಸ್ಯರು ಹಾಗೂ ಕುತ್ಯಾರು – ಪಾದೂರು – ಕಳತ್ತೂರು ಗ್ರಾಮಸ್ಥರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.