Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

ನೂರಾರು ಎಕ್ರೆ ಕೃಷಿ ಭೂಮಿಗೆ ನೀರುಣಿಸುತ್ತಿದ್ದ ಕೆರೆ ಈಗ ನಿರ್ವಹಣೆ ಇಲ್ಲದೆ ಹೂಳು ತುಂಬಿ ಬರಡು.

Team Udayavani, Sep 20, 2024, 3:04 PM IST

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

ಮಲ್ಪೆ: ಒತ್ತುವರಿಯ ಕಾನೂನು ಬಾಹಿರ ಚಟುವಟಿಕೆ, ಹೂಳು ತೆಗೆಯದೇ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದಾಗಿ ತಾಲೂಕಿನ ಹಲವು ಉತ್ತಮ ಕೆರೆಗಳು ಜೀವ ಸಂಕಷ್ಟದ ಅಪಾಯದಲ್ಲಿವೆ ಎಂಬುದಕ್ಕೆ ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾ.ಪಂ.ಕೆಳಾರ್ಕಳಬೆಟ್ಟು ಸಮೀಪದ ಪೊಟ್ಟುಕೆರೆ ಸಾಕ್ಷಿಯಾಗಿದೆ.

ಒಂದು ಕಾಲದಲ್ಲಿ ಗ್ರಾಮದ ನೂರಾರು ಎಕ್ರೆ ಕೃಷಿ ಭೂಮಿಗೆ ನೀರುಣಿಸುತ್ತಿದ್ದ ಪೊಟ್ಟುಕೆರೆ ಇಂದು ನಿರ್ವಹಣೆ ಇಲ್ಲದೆ ಹೂಳು ತುಂಬಿಕೊಂಡು ಬರಡಾಗಿದೆ. ಇದರ ಒಂದು ಭಾಗ ಪಂಚಾಯತ್‌ಗೆ ಸೇರಿದರೆ ಇನ್ನೊಂದು ಭಾಗ ನಗರಸಭೆಗೆ ಸೇರಿದೆ.

ಅಕ್ಷರಶಃ ಪೊಟ್ಟುಕೆರೆ
ಗ್ರಾಮದ ಸುತ್ತಮುತ್ತ ಹಲವಾರು ಕೆರೆಗಳಿದ್ದರೂ ಪೊಟ್ಟುಕೆರೆ ಐತಿಹಾಸಿಕ ಹಿನ್ನೆಲೆಯೊಂದಿಗೆ ತನ್ನದೇ ಆದ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಕೆರೆಯಲ್ಲಿ ತುಂಬಿರುವ ಭಾರಿ ಪ್ರಮಾಣದ ಹೂಳಿನಿಂದಾಗಿ ನೀರಿನ ಒರತೆಯೇ ಇಲ್ಲವಾಗಿದ್ದು ಸುಮಾರು 35 ವರ್ಷಗಳಿಂದ ಇದು ಹೆಸರಿಗೆ ತಕ್ಕಂತೆ ಅಕ್ಷರಶಃ ಪೊಟ್ಟುಕೆರೆಯಾಗಿಯೇ ಉಳಿದಿದೆ. ಕೃಷಿಕರ ಸಂಖ್ಯೆಯೂ ಕಡಿಮೆಯಾಗಿದ್ದರಿಂದ ಈ ಕೆರೆಯನ್ನು ಉಳಿಸಿಕೊಳ್ಳುವ ಗೋಜಿಗೂ ಯಾರೂ ಮುಂದಾಗಿಲ್ಲ ಎನ್ನಲಾಗುತ್ತಿದೆ.

ನಗರಸಭಾ ವ್ಯಾಪ್ತಿಯ ಗೋಪಾಲಪುರ ವಾರ್ಡ್‌ ಮತ್ತು ತೆಂಕನಿಡಿಯೂರು, ಕೆಳಾರ್ಕಳಬೆಟ್ಟು ಗ್ರಾಮವನ್ನು ಸಂಧಿಸುವಲ್ಲಿ ಇರುವ ಈ ಕೆರೆ ಹಿಂದೆ 5 ಎಕ್ರೆಯಷ್ಟು ವಿಸ್ತೀರ್ಣವನ್ನು ಹೊಂದಿತ್ತು. ಇದೀಗ ಒತ್ತುವರಿಯಾಗಿ 3 ಎಕ್ರೆ (ತೆಂಕನಿಡಿಯೂರು ಗ್ರಾಮದ ಭಾಗದಲ್ಲಿ ಒಂದು ಎಕ್ರೆ, ಗೋಪಾಲಪುರ ವಾರ್ಡ್‌ 2 ಎಕ್ರೆ)ಯಷ್ಟು ಮಾತ್ರ ಉಳಿದಿದೆ. ಪೂರ್ತಿ ಕೈಜಾರಿ ಹೋಗುವ ಮೊದಲು ಸಂಬಂಧಪಟ್ಟ ಆಡಳಿತ ಮತ್ತು ಇಲಾಖೆಗಳು ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕಾಗಿದೆ. ಹಿಂದೆ ಮೇ ಕೊನೆಯವರೆಗೂ ಈ ಕೆರೆಯಲ್ಲಿ ನೀರು ತುಂಬಿಕೊಂಡಿದ್ದು 200 ಎಕ್ರೆ ಕೃಷಿ ಭೂಮಿಗೆ ಸುತ್ತಮುತ್ತಲಿನ ರೈತರು ಇದೇ ಕೆರೆಯ ನೀರನ್ನು ಉಪಯೋಗಿಸಿ ಹಿಂಗಾರು ಬೆಳೆ ಬೆಳೆಯುತ್ತಿದ್ದರು. ಇಂದು ಕೃಷಿ ಭೂಮಿಗೆ ನೀರಿನ ಕೊರತೆಯಿಂದಾಗಿ ಹಲವಾರು ಎಕ್ರೆ ಕೃಷಿ ಭೂಮಿ ಪಾಳುಬಿದ್ದಿದೆ. ಕೆಲವು ವರ್ಷದ ಹಿಂದೆ ಪಂಚಾಯತ್‌ ವತಿಯಿಂದ ಬಾವಿಯನ್ನು ನಿರ್ಮಿಸಲಾಗಿದ್ದು ಈ ಬಾವಿಯ ನೀರು ಗ್ರಾಮಕ್ಕೆ ಪೂರೈಕೆಯಾಗುತ್ತಿದೆ.

ವಾಕಿಂಗ್‌ ಟ್ರಾಫಿಕ್‌, ಉದ್ಯಾನವನ
ಇಲ್ಲಿನ ಗ್ರಾಮದ ಜನರಿಗೆ ಬಿಟ್ಟರೆ ಹೊರಗಿನವರಿಗೆ ಇಲ್ಲೊಂದು ಪೊಟ್ಟುಕರೆ ಇದೆ ಎಂಬುದೇ ಗೊತ್ತಿಲ್ಲ. ಹೂಳು ತುಂಬಿದ್ದರಿಂದ ಮೈದಾನದಂತಾಗಿದೆ. ಜನರಿಗೆ ತೊಂದರೆಯಾಗದ ರೀತಿಯಲ್ಲಿ ಆಳವಾಗಿ ಹೂಳು ತೆಗೆದು ಅಭಿವೃದ್ಧಿಪಡಿಸಿದರೆ ಪುತ್ತೂರು ಮತ್ತು ಕೆಳಾರ್ಕಳಬೆಟ್ಟು ಗ್ರಾಮದ ನೂರಾರು ಬಾವಿಯ ಅಂತರ್ಜಲ ವೃದ್ಧಿಗೆ ಸಹಕಾರಿಯಾಗುತ್ತದೆ. ಕೆರೆಯ ಸುತ್ತ ದಂಡೆಯನ್ನು ನಿರ್ಮಿಸಿ ವಾಕಿಂಗ್‌ ಟ್ರಾಫಿಕ್‌ ಮತ್ತು ಕುಳಿತುಕೊಳ್ಳಲು ಬೆಂಚುಗಳನ್ನು ಅಳವಡಿಸಿ ಅಭಿವೃದ್ಧಿ ಪಡಿಸಿದರೆ ಸಂಜೆ ಕಳೆಯಲು ಈ ಭಾಗದ ಜನರಿಗೆ ಉತ್ತಮ ಜಾಗ. ಈ ಕೆರೆಯಲ್ಲಿ ನೀರು ನಿಲ್ಲಿಸುವ ಕೆಲಸ ಮಾಡಿದರೆ ಸಮೀಪದ ನೂರಾರು ಬಾವಿಗಳಲ್ಲಿ ಸದಾ ನೀರು ತುಂಬಿರುತ್ತದೆ. ಇದನ್ನು ಕೆರೆಯಾಗಿಯೇ ಶಾಶ್ವತ ವಾಗಿ ಉಳಿಯಬೇಕು ಎನ್ನುವುದು ಗ್ರಾಮಸ್ಥರ ಬೇಡಿಕೆ.

ಬಾವಿಯಲ್ಲಿ ನೀರಿಲ್ಲ
ಇಲ್ಲಿರುವ ಪೊಟ್ಟುಕೆರೆಯನ್ನು ಅಭಿವೃದ್ಧಿ ಪಡಿಸುವಲ್ಲಿ ಯಾರೂ ಮುಂದಾಗಿಲ್ಲ. ರಾತ್ರಿ ವೇಳೆಯಲ್ಲಿ ಹೊರಗಿನಿಂದ ಬಂದು ಕಟ್ಟಡದ ತ್ಯಾಜ್ಯವನ್ನು ಇಲ್ಲಿ ಸುರಿಯುತ್ತಾರೆ. ಕೆರೆ ಅಭಿವೃದ್ಧಿ, ಉಳಿವಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಈ ಹಿನ್ನೆಲೆಯಲ್ಲಿ ಪುರಾತನ ಕೆರೆಯನ್ನು ಉಳಿಸಬೇಕು ಎನ್ನುತ್ತಾರೆ ಸ್ಥಳೀಯರಾದ ರಿಚಾರ್ಡ್‌ ಕ್ರಾಸ್ತೋ ಅವರು.

ಟಾಪ್ ನ್ಯೂಸ್

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.