ಮಲ್ಪೆ ಸೀವಾಕ್‌ವೇ: ಧರೆಗುರುಳಿವೆ ಆಲಂಕಾರಿಕ ದಾರಿದೀಪ ಕಂಬಗಳು


Team Udayavani, Dec 29, 2023, 2:43 PM IST

ಮಲ್ಪೆ ಸೀವಾಕ್‌ವೇ: ಧರೆಗುರುಳಿವೆ ಆಲಂಕಾರಿಕ ದಾರಿದೀಪ ಕಂಬಗಳು

ಮಲ್ಪೆ: ಮಲ್ಪೆ ಮೀನುಗಾರಿಕಾ ಬಂದರಿನ ಪಶ್ಚಿಮ ದಿಕ್ಕಿನ (ಸೈಂಟ್‌ಮೇರಿ ದ್ವೀಪಯಾನದ ಸ್ಟಾರ್ಟಿಂಗ್‌ ಪಾಯಿಂಟ್‌) ಬ್ರೇಕ್‌ವಾಟರ್‌ ಮೇಲೆ ನಿರ್ಮಾಣಗೊಂಡ ಕರ್ನಾಟಕದ ಮೊಟ್ಟ ಮೊದಲ ಎಂಬ ಹೆಗ್ಗಳಿಕೆಗೆ ಪಾತ್ರವಾದ ಸೀ ವಾಕ್‌ವೇ ಸಮರ್ಪಕವಾದ ನಿರ್ವಹಣೆ ಇಲ್ಲದೆ ಸೊರಗುತ್ತಿವೆ.

ರಾತ್ರಿ ವೇಳೆಯಲ್ಲಿ ಇಲ್ಲಿ ನಡೆದಾಡಲು ಹಾದಿ ಉದ್ದಕ್ಕೂ ಸುಮಾರು 29 ಆಲಂಕಾರಿಕಾ ದೀಪಗಳನ್ನು ಅಳವಡಿಸಲಾಗಿತ್ತು.
ಇದೀಗ ಎರಡು ಮೂರು ಕಂಬಗಳಲ್ಲಿ ದೀಪ ಬೆಳಗುವುದು ಬಿಟ್ಟರೆ ಉಳಿದೆಲ್ಲವುಗಳಲ್ಲಿ ದೀಪವೇ ಉರಿಯುತ್ತಿಲ್ಲ. ಸುಮಾರು 7-8 ಕಂಬಗಳು ಈಗಾಗಲೇ ತುಕ್ಕು ಹಿಡಿದು ಧರೆಗುರುಳಿವೆ. ಇದೀಗ ಪ್ರತಿನಿತ್ಯ ಪ್ರವಾಸಿಗರ ದಂಡೇ ಇಲ್ಲಿ ಸೇರುತ್ತದೆ.

ಕತ್ತಲಾದರೆ ಇಲ್ಲಿ ನಡೆದಾಡಲು ಭಯ ಪಡುವ ಪರಿಸ್ಥಿತಿ ಇದೆ. ಮಾತ್ರವಲ್ಲದೆ ಸುರಕ್ಷೆಯ ಪ್ರಶ್ನೆಯೂ ಎದುರಾಗಿದೆ. ಇಲ್ಲಿ ನೆಲಕ್ಕೆ ಅಳವಡಿಸಲಾದ ಇಂಟರ್‌ ಲಾಕ್‌ ಕೆಲವೊಂದು ಕಡೆ ಕಿತ್ತು ಹೋಗಿದ್ದರಿಂದ ಬಹುತೇಕ ಜನರು ಕತ್ತಲಲ್ಲಿ ಎಡವಿ ಬಿದ್ದು ಗಾಯಗೊಂಡಿದ್ದಾರೆ.

ಉದ್ಯಾನವನದಲ್ಲೂ ಕತ್ತಲೆ
ಇತ್ತ ಸೀವಾಕ್‌ ಬಳಿಯ ಉದ್ಯಾನವನದಲ್ಲೂ ಕಳೆದ ಕೆಲವು ತಿಂಗಳಿನಿಂದ ದೀಪಗಳು ಉರಿಯುತ್ತಿಲ್ಲ. ಇದರಿಂದ ಬಂದ ಪ್ರವಾಸಿಗರು ಕತ್ತಲ್ಲಲ್ಲಿಯೇ ತಿರುಗಾಡಬೇಕಾದ ಪ್ರಸಂಗ ಎದುರಾಗಿದೆ.

ಪ್ರವಾಸಿಗರ ನೆಚ್ಚಿನ ತಾಣ
ಜನ ಸಾಮಾನ್ಯರು ನಡೆದಾಡಲು ಭಯಪಡುತ್ತಿದ್ದ ತಾಣವನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಿದ್ದರಿಂದ ಇಲ್ಲಿಗೆ ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದು ವಾಯು ವಿಹಾರದೊಂದಿಗೆ ಪ್ರಾಕೃತಿಕ ಸೌಂದರ್ಯವನ್ನು ಆಸ್ವಾದಿಸುವಂತಾಗಿದೆ. ಸುಮಾರು 480 ಮೀ. ಉದ್ದ, 8.5 ಅಡಿ ಅಗಲದಲ್ಲಿ ಸಮುದ್ರಕ್ಕೆ ವಿಸ್ತರಿಸಿರುವ ಈ ವಾಕ್‌ವೇ ಯನ್ನು ಬ್ರೇಕ್‌ವಾಟರ್‌ ಮೇಲೆ ಪ್ರವಾಸೋದ್ಯಮ ಇಲಾಖೆ ನಿರ್ಮಿತಿ ಕೇಂದ್ರ ನೇತೃತ್ವದಲ್ಲಿ 53.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸೀವಾಕ್‌ ಆರಂಭಗೊಂಡ ದಿನದಿಂದಲೂ ನೋಡಲು ಜನಸಾಗರವೇ ಇಲ್ಲಿಗೆ ಹರಿದು ಬರುತ್ತಿತು ಸೈಂಟ್‌ಮೇರೀಸ್‌ಗೆಂದು ಬಂದವರು ಈಗ
ಸೀವಾಕ್‌ ನೋಡಿ ಹೋಗುತ್ತಾರೆ.

ಹೊಸ ಕಂಬಗಳ ಅಳವಡಿಕೆ
ಸೀವಾಕ್‌ನಲ್ಲಿ ಆಲಂಕಾರಿಕ ದೀಪದ ಕಂಬಗಳು ತುಕ್ಕು ಹಿಡಿದು ಬಿದ್ದಿರುವ ಬಗ್ಗೆ ದೂರು ಬಂದಿದೆ. ಸಂಬಂಧಪಟ್ಟ ಎಂಜಿನಿಯರ್‌ ಈಗಾಗಲೇ ಸ್ಥಳಕ್ಕೆ ಭೇಟಿ ಇತ್ತು ಪರಿಶೀಲನೆ ನಡೆಸಿದ್ದಾರೆ. ಸೀವಾಕ್‌ನಲ್ಲಿ ಹಾಳಾಗಿರುವ ಎಲ್ಲ ಕಂಬವನ್ನು ಬದಲಾಯಿಸಿ ಹೊಸ ಕಂಬವನ್ನು ಅಳವಡಿಸಲಾಗುವುದು. ಪ್ರವಾಸಿಗರ ಹಿತ ದೃಷ್ಟಿಯಿಂದ ಆತೀ ಶೀಘ್ರದಲ್ಲಿ ಈ
ಎಲ್ಲ ವ್ಯವಸ್ಥೆಯನ್ನು ಮಾಡಲಾಗುವುದು.
ರಾಯಪ್ಪ, ಕಾರ್ಯದರ್ಶಿ, ಮಲ್ಪೆ ಅಭಿವೃದ್ಧಿ
ಸಮಿತಿ, ಪೌರಾಯುಕ್ತರು ಉಡುಪಿ ನಗರಸಭೆ

*ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.