ಉಡುಪಿಯ ಸಮಗ್ರ ಅಭಿವೃದ್ಧಿಯ ಪ್ರಣಾಳಿಕೆ: ಯಶ್‌ಪಾಲ್‌ ಸುವರ್ಣ


Team Udayavani, May 4, 2023, 5:38 PM IST

1-sdsdd

ಉಡುಪಿ: ಬಿಜೆಪಿ ಅಭ್ಯರ್ಥಿ ಯಶ್‌ಪಾಲ್‌ ಸುವರ್ಣ ಮತ್ತು ಶಾಸಕ ಕೆ. ರಘುಪತಿ ಭಟ್‌ ಅವರು ಉಡುಪಿ
ವಿಧಾನ ಸಭಾ ಕ್ಷೇತ್ರದ ಪ್ರಣಾಳಿಕೆಯ ಜತೆಗೆ ಮಲ್ಪೆ ಬಂದರು ಮತ್ತು ಮೀನುಗಾರಿಕೆ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಗೆ
ಆದ್ಯತೆ ನೀಡುವ ಪ್ರತ್ಯೇಕ ಪ್ರಣಾಳಿಕೆಯನ್ನು ಬುಧವಾರ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಬಿಡುಗಡೆ ಮಾಡಿದರು.
ಉಡುಪಿ ಕ್ಷೇತ್ರದಿಂದ ಮೀನುಗಾರಿಕೆಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಹೆಗ್ಗಳಿಕೆಯು ಇವರದ್ದಾಗಿದೆ.

ಅಭ್ಯರ್ಥಿ ಯಶ್‌ಪಾಲ್‌ ಎ.ಸುವರ್ಣ ಮಾತನಾಡಿ, ಜಿಲ್ಲೆಗೊಂದು ಸುಸಜ್ಜಿತ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ, ನಗರದಲ್ಲಿ ಬಹುಮಹಡಿ ಪಾರ್ಕಿಂಗ್‌ ಸಂಕೀರ್ಣ, ಕಲ್ಸಂಕ ಜಂಕ್ಷನ್‌ನಲ್ಲಿ ಸಿಗ್ನಲ್‌ ರಹಿತ ಮಧ್ವಾಚಾರ್ಯ ವೃತ್ತ ನಿರ್ಮಾಣ, 13 ಕಡೆ ಸ್ಮಾರ್ಟ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ, ನಗರದ 35 ವಾರ್ಡ್‌ಗಳಲ್ಲಿ ವೈಜ್ಞಾನಿಕ ಒಳಚರಂಡಿ ವ್ಯವಸ್ಥೆ ನಿರ್ಮಾಣ, ಬ್ರಹ್ಮಾವರದಲ್ಲಿ ಸುಸಜ್ಜಿತ ಒಳಚರಂಡಿ ವ್ಯವಸ್ಥೆ ನಿರ್ಮಾಣ, ವಾರಂಬಳ್ಳಿಯಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣ, ಬ್ರಹ್ಮಾವರ ಪುರಸಭೆ ರಚನೆ, ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಸ್ಥಾಪನೆ, ಮಲ್ಪೆ ಬಂದರು ಮತ್ತು ಮೀನುಗಾರಿಕೆ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

ಶಾಸಕ ಕೆ.ರಘುಪತಿ ಭಟ್‌ ಮಾತನಾಡಿ, ನಾವು ಈ ಹಿಂದೆ ನೀಡಿದ್ದ ಭರವಸೆಗಳಲ್ಲಿ ಶೇ.80ಕ್ಕೂ ಅಧಿಕ ಈಡೇರಿಸಿದ್ದೇವೆ. ಡಾ| ವಿ.ಎಸ್‌. ಆಚಾರ್ಯರ ದೂರದೃಷ್ಟಿ ಯೋಜನೆಯನ್ನು ಸಾಕಾರ ಮಾಡುವ ಕೆಲಸ ಮಾಡಿದ್ದೇವೆ. ಅದನ್ನು ಯಶ್‌ಪಾಲ್‌ ಸುವರ್ಣ ಅವರು ಮುಂದುವರಿಸಿಕೊಂಡು ಹೋಗಲಿದ್ದಾರೆ ಎಂದರು.
ನಗರ ಬಿಜೆಪಿ ಅಧ್ಯಕ್ಷ ಮಹೇಶ್‌ ಠಾಕೂರ್‌, ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ, ಜಿಲ್ಲಾ ಬಿಜೆಪಿ ವಕ್ತಾರ
ರಾಘವೇಂದ್ರ ಕಿಣಿ, ಜಿಲ್ಲಾ ಪ್ರಣಾಳಿಕೆ ಸಮಿತಿ ಸಂಚಾಲಕ ಅಂಡಾರು ದೇವಿಪ್ರಸಾದ್‌ ಶೆಟ್ಟಿ, ರಾಜ್ಯ ಬಿಜೆಪಿ ಎಸ್‌. ಸಿ
ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ನಗರ ಬಿಜೆಪಿಯ ಮಂಜುನಾಥ್‌ ಮಣಿಪಾಲ್‌, ದಿನೇಶ್‌ ಅಮೀನ್‌ ಉಪಸ್ಥಿತರಿದ್ದರು.

ಪ್ರಣಾಳಿಕೆಯ ಪ್ರಮುಖಾಂಶಗಳು
* ಬ್ರಹ್ಮಾವರದಿಂದ ಕರ್ಜೆಯವರೆಗೂ ಆಗಿರುವ ಚತುಷ್ಪಥ ರಸ್ತೆಯನ್ನು ಹೆಬ್ರಿ ವರೆಗೂ ವಿಸ್ತರಣೆ
* ಮಲ್ಪೆಯಲ್ಲಿ ಮಧ್ವಾಚಾರ್ಯ ಥೀಮ್‌ಪಾರ್ಕ್‌
* ಮಣಿಪಾಲದಲ್ಲಿ ವಿಶೇಷ ಆಹಾರ ವಲಯ
* ಸರ್ಣನದಿ ತೀರದ ದ್ವೀಪದಲ್ಲಿ ಅಮ್ಯೂಸೆ¾ಂಟ್‌ ಪಾರ್ಕ್‌
* ಉಡುಪಿಯಲ್ಲಿ ಡಿಜಿಟಲ್‌ ಇನ್‌ಫ್ರಾಸ್ಟಕ್ಚರ್‌ ಡೇವಲಪೆ¾ಂಟ್‌
* ಪರಿಸರ ಸ್ನೇಹಿ ಕೈಗಾರಿಕೆ ವಲಯ
*ಯುವಕರಿಗೆ ಉದ್ಯೋಗ ಖಾತ್ರಿ
* ಪ್ರಾಸೋದ್ಯಮಕ್ಕೆ ಉತ್ತೇಜನ
* ಉಡುಪಿ, ಬ್ರಹ್ಮಾವರದಲ್ಲಿ ಸುಸಜ್ಜಿತ ಕ್ರಿಕೆಟ್‌ ಕ್ರೀಡಾಂಗಣ
* ನೇಕಾರಿಕೆಗೆ ಉತ್ತೇಜನ
* ಫ‌ರ್ನಿಚರ್‌ ಹಬ್‌
* ಸಹಕಾರಿ ಸೌಧ ನಿರ್ಮಾಣ
* ಶಬರಿಮಲೆಯಲ್ಲಿ ಕನ್ನಡ ಭವನ, ವಿಶೇಷ ರೈಲು ವ್ಯವಸ್ಥೆ
* 400 ಮನೆ ನಿರ್ಮಾಣ
* ತಾಜಾ ಮೀನಿನ ಊಟದ ಮತ್ಸé ಕ್ಯಾಂಟೀನ್‌
* ಪೌಷ್ಠಿಕ ಆರೋಗ್ಯ ಕೇಂದ್ರ
* ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌
* ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ
* ಧಾರ್ಮಿಕ ಕೇಂದ್ರ- ಬೀಚ್‌ ಸಂಪರ್ಕ ಕಾರಿಡಾರ್‌
ಮೀನುಗಾರಿಕೆ ಅಭಿವೃದ್ಧಿಗೆ ಆದ್ಯತೆ
* ಮೀನುಗಾರರ ಸಂಘಕ್ಕೆ ಬಹು ಮಹಡಿ ಪಾರ್ಕಿಂಗ್‌ ವ್ಯವಸ್ಥೆ
*ಯಾಂತ್ರಿಕ ಬೋಟುಗಳಿಗೆ ದಿನಕ್ಕೆ 400 ಲೀ.ಡೀಸೆಲ್‌ ಸಬ್ಸಿಡಿ
*ನಾಡದೋಣಿ ಮೀನುಗಾರರಿಗೆ ನಿರಂತರವಾಗಿ ತಿಂಗಳಿಗೆ 500 ಲೀ.ಸೀಮೆ ಎಣ್ಣೆ
*ನಾಡದೋಣಿ ತಂಗುದಾಣಕ್ಕೆ 3ನೇ ಹಂತದ ಬಳಿ ಜಟ್ಟಿ ನಿರ್ಮಾಣ
*ಅಂತಾರಾಷ್ಟ್ರೀಯ ಮಟ್ಟದ ಫಿಶ್‌ ಅಕ್ವೇರಿಯಂ ನಿರ್ಮಾಣ
*ಮಹಿಳಾ ಮೀನುಗಾರರಿಗೆ ಮೀನು ಒಣಗಿಸುವ ಜಾಗವನ್ನು 30 ವರ್ಷ ಗುತ್ತಿಗೆ ವಿಸ್ತರಣೆ
*ಮೀನುಗಾರಿಕೆ ಬಂದರು ಸ್ವತ್ಛತೆ ನಿರ್ವಹಣೆ ಸಂಘಕ್ಕೆ ಬಿಡುವುದು
* ಕೊಚ್ಚಿನ್‌ ಶಿಪ್‌ಯಾರ್ಡ್‌ನ ವಿಚಾರದಲ್ಲಿ ಮೀನುಗಾರರ ಸಂಘಗಳ ನಿರ್ಣಯಕ್ಕೆ ಬದ್ಧರಾಗಿರುವುದು.
*ಮೀನುಗಾರ ಮಹಿಳೆಯರಿಗೆ ಶೂನ್ಯ ಬಡ್ಡಿಯಲ್ಲಿ 5 ಲ.ರೂ.ನಿಂದ 20 ಲ.ರೂ.ವರೆಗೆ ಗುಂಪು ಸಾಲ ಸೌಲಭ್ಯ
*ಮೀನುಗಾರರಿಗೆ ಮತ್ಸಾéಶ್ರಯ ಮನೆ ನಿರ್ಮಾಣಕ್ಕೆ ಸಹಾಯಧನ 1.2 ಲ.ರೂ.ನಿಂದ 5 ಲ.ರೂ.ಗೆ ಏರಿಕೆ
*ಮಹಿಳಾ ಮೀನುಗಾರರಿಗೆ ವಾಹನ ಸೌಲಭ್ಯ
*ಮೀನುಗಾರ ಸಹಕಾರ ಸಂಘಗಳಿಗೆ ವಿಶೇಷ ಪ್ರೋತ್ಸಾಹಧನ
* ಸೀ ಆ್ಯಂಬುಲೆನ್ಸ್‌ ಸೇವೆ
*ಬಂದರಿನಲ್ಲಿ ಮಹಿಳಾ ಮೀನುಗಾರರಿಗೆ ವಿಶ್ರಾಂತಿ ಕೊಠಡಿ
*ಮೀನುಗಾರಿಕಾ ವಿಶೇಷ ಕೈಗಾರಿಕಾ ವಲಯ
*ಹಳೇ ಬೋಟ್‌ಗಳ ಮರುನಿರ್ಮಾಣಕ್ಕೆ ಸಹಾಯಧನ
* ಡ್ರೆಜ್ಜಿಂಗ್‌ ಯಂತ್ರಗಳ ಖರೀದಿಗೆ ಸಹಾಯಧನ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.