Manipal: ವಿದ್ಯುತ್ ತಂತಿ ಬಿದ್ದು ಸ್ಕೂಟರ್ ಸವಾರ ಗಂಭೀರ
Team Udayavani, Jul 23, 2024, 12:43 AM IST
ಉಡುಪಿ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸವಾರ ಗಂಭೀರ ಗಾಯಗೊಂಡಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಕೂಟರ್ನಲ್ಲಿದ್ದ ಅವರ ಪತ್ನಿ ಹಾಗೂ ಮಗು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿರುವ ಮಣಿಪಾಲ ಸಂಸ್ಥೆಯ ಯುನಿಟ್ 5ರ ಉದ್ಯೋಗಿ ಶಶಿಧರ ಶೆಟ್ಟಿ ಗಂಭೀರ ಗಾಯಗೊಂಡವರು.
ಕುಂಜಾರುಗಿರಿ ನಿವಾಸಿಯಾದ ಅವರು ಸೋಮವಾರ ಬೆಳಗ್ಗೆ ಪತ್ನಿ, ಮಗುವಿನೊಂದಿಗೆ ಅಲೆವೂರಿನಿಂದ ಮಣಿಪಾಲದತ್ತ ಬರುತ್ತಿದ್ದ ವೇಳೆ ಕೈಗಾರಿಕಾ ಪ್ರದೇಶದ ಬಸ್ ನಿಲ್ದಾಣ ಬಳಿ ಈ ಘಟನೆ ಸಂಭವಿಸಿದೆ. ಮಗುವನ್ನು ಎಲ್ಕೆಜಿಗೆ ಬಿಡಲೆಂದು ಬರುತ್ತಿದ್ದಾಗ ಗಾಳಿ-ಮಳೆ ಬಂದಿದ್ದು, ಈ ವೇಳೆ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಇವರ ಕುತ್ತಿಗೆಗೆ ಸುತ್ತುವರಿಯಿತು. ಪರಿಣಾಮ ಪತ್ನಿ ಮತ್ತು ಮಗುವಿನ ಸಹಿತ ಅವರು ಕೆಳಗೆ ಬಿದ್ದರು. ತಂತಿ ಬೀಳುವಾಗ ವಿದ್ಯುತ್ ಕಡಿತಗೊಂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು.
ಅವರಿಗೆ ಸಿಟಿ ಸ್ಕ್ಯಾನ್ ಮಾಡಲಾಗಿದ್ದು, ಮಂಗಳವಾರ ಎಂಆರ್ಐ ಸ್ಕ್ಯಾನ್ ಮಾಡಲು ಉದ್ದೇಶಿಸಲಾಗಿದೆ. ಕುತ್ತಿಗೆಯಿಂದ ಕೆಳಭಾಗದಲ್ಲಿ ಪ್ರಸ್ತುತ ಸ್ಪರ್ಶ ಜ್ಞಾನ ಇಲ್ಲವಾಗಿದೆ. ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು
Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು
Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ
Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ
Udupi: ಬೆಡ್ ಶೀಟ್ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.