ಮಣಿಪಾಲ ಸಮೂಹ ಆಸ್ಪತ್ರೆ : ಬರಲಿದೆ 60,000 ಕೊವಿಶೀಲ್ಡ್‌ ಲಸಿಕೆ


Team Udayavani, May 21, 2021, 7:15 AM IST

ಮಣಿಪಾಲ ಸಮೂಹ ಆಸ್ಪತ್ರೆ : ಬರಲಿದೆ 60,000 ಕೊವಿಶೀಲ್ಡ್‌  ಲಸಿಕೆ

ಉಡುಪಿ: ಮಣಿಪಾಲ ಸಮೂಹದ ಆಸ್ಪತ್ರೆಗಳಿಗೆ ಸದ್ಯವೇ 12,000 ಕೊವಿಶೀಲ್ಡ್‌ ಲಸಿಕೆ ಬರಲಿದೆ. ಒಟ್ಟು 60,000 ಡೋಸ್‌ ಲಸಿಕೆಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಆದ್ದರಿಂದ ಲಸಿಕೆ ಕೊರತೆ ಕುರಿತು ಎದ್ದ ಆತಂಕ ದೂರವಾಗಲಿದೆ.

ಮೇ ಕೊನೆಯ ವಾರ ಅಥವಾ ಜೂನ್‌ ಮೊದಲ ವಾರದಲ್ಲಿ ಮೊದಲ ಕಂತಿನಲ್ಲಿ 12,000 ಲಸಿಕೆ ಬರಲಿದೆ. ಈ ಕುರಿತು ಪುಣೆಯ ಸೀರಂ ಸಂಸ್ಥೆ ಜತೆ ಪತ್ರ ವ್ಯವಹಾರಗಳಾಗಿದ್ದು ಲಸಿಕೆ ಪೂರೈಕೆಗೆ ಒಪ್ಪಿದ್ದಾರೆ. ಜೂನ್‌ ಮೊದಲ ವಾರದಲ್ಲಿ ಲಸಿಕೆ ಹಾಕಲಾಗುತ್ತದೆ.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಮಂಗಳೂರಿನ ಕೆಎಂಸಿ ಆಸ್ಪತ್ರೆ, ಉಡುಪಿಯ ಡಾ| ಟಿಎಂಎ ಪೈ ಆಸ್ಪತ್ರೆ, ಕಾರ್ಕಳದ ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗಳಿಗೆ ಬರುವವರಿಗೆ ಲಸಿಕೆಗಳನ್ನು ನೀಡಲಾಗುವುದು. ಜನಸಂದಣಿಯನ್ನು ನಿಯಂತ್ರಿಸುವ ಉದ್ದೇಶದಿಂದ ಆನ್‌ಲೈನ್‌ ನೋಂದಣಿ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. 18+ ಎಲ್ಲರಿಗೂ ಅವಕಾಶವಿದೆ. ಸರಕಾರ ಈಗಾಗಲೇ ಬಿಡುಗಡೆ ಮಾಡಿದ ಆನ್‌ಲೈನ್‌ ನೋಂದಣಿ ನಮಗೂ ಅನ್ವಯವಾಗುತ್ತದೆ. ಪೂರೈಕೆ ಆದ ಬಳಿಕ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು. ಸರಕಾರದ ಮಾರ್ಗಸೂಚಿಯಂತೆ ದರವನ್ನು ನಿಗದಿಪಡಿಸಲಾಗುವುದು ಎಂದು ಮಣಿಪಾಲ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ ಶೆಟ್ಟಿ “ಉದಯವಾಣಿ’ಗೆ ತಿಳಿಸಿದ್ದಾರೆ.

2,000 ಕೊವ್ಯಾಕ್ಸಿನ್‌ 2ನೇ ಡೋಸ್‌ :

ಮಣಿಪಾಲ ಆಸ್ಪತ್ರೆಯಲ್ಲಿ ಈಗಾಗಲೇ ಕೊವ್ಯಾಕ್ಸಿನ್‌ ಮೊದಲ ಡೋಸ್‌ ಪಡೆದುಕೊಂಡ ಫ್ರಂಟ್‌ಲೆçನ್‌ ವರ್ಕರ್ ಮತ್ತು ಸಾರ್ವಜನಿಕರಿಗೆ ಎರಡನೆಯ ಡೋಸ್‌ ಅನ್ನು ವಿತರಿಸಲಾಗುವುದು. ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಬಂದ ಕೊವ್ಯಾಕ್ಸಿನ್‌ ಲಸಿಕೆಯಲ್ಲಿ ಮಣಿಪಾಲಕ್ಕೂ 2,000 ಡೋಸ್‌ ತರಿಸಲಾಗುವುದು. ಮಣಿಪಾಲದಲ್ಲಿ ಮೊದಲ ಡೋಸ್‌ ತೆಗೆದುಕೊಂಡವರಿಗೆ ನಾವೇ ಸಂದೇಶ ಕಳುಹಿಸುತ್ತೇವೆ. ಇದು ಒಂದೆರಡು ದಿನಗಳಲ್ಲಿ ಆರಂಭವಾಗಲಿದೆ ಎಂದು ಡಾ| ಶೆಟ್ಟಿ ತಿಳಿಸಿದ್ದಾರೆ.

ಕೊವ್ಯಾಕ್ಸಿನ್‌ ಉತ್ಪಾದನೆ ಮಾಡುವ ಹೈದರಾಬಾದ್‌ನ  ಭಾರತ್‌ ಬಯೋಟೆಕ್‌ ಸಂಸ್ಥೆ ಜತೆ ಮಾತುಕತೆ ನಡೆಸಲಾಗಿದೆ. ಅಂತಿಮ ನಿರ್ಧಾರ ಇನ್ನಷ್ಟೇ ಆಗಬೇಕಾಗಿದೆ. ದರವನ್ನೂ ಸರಕಾರದ ಮಾರ್ಗದರ್ಶಿ ಸೂತ್ರದ ಅನ್ವಯ ನಿಗದಿಪಡಿಸಲಾಗುವುದು. ಪೂರೈಕೆ ನಿರಂತರವಾದಾಗ ಸಾರ್ವಜನಿಕರಿಗೂ ವಿತರಿಸಲಾಗುವುದು ಎಂದರು.

ಮಣಿಪಾಲ ಆಸ್ಪತ್ರೆಯ ಮರೀನಾದಲ್ಲಿ ಈಗಾಗಲೇ 10 ಕೌಂಟರ್‌ಗಳನ್ನು ತೆರೆಯಲಾಗಿದೆ. ಮೊದಲು ಲಸಿಕೆ ಪೂರೈಕೆಯಾದಾಗ ಇಲ್ಲಿ ವಿತರಿಸಲಾಗಿತ್ತು. ಲಸಿಕೆ ಪೂರೈಕೆ ನಿಲುಗಡೆಯಾದ ಬಳಿಕ ನಿಲ್ಲಿಸಲಾಗಿದೆ. ಲಸಿಕೆ ಬಂದ ಬಳಿಕ  ಇದೇ ಕೌಂಟರ್‌ನಲ್ಲಿ ವಿತರಿಸಲಾಗುತ್ತದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.