Manipal Health Card; ಕುಟುಂಬದ ಆರೋಗ್ಯ ಸೇವೆಗೆ ಕಾರ್ಡ್‌ ಪೂರಕ: ಡಾ| ಬಲ್ಲಾಳ್‌

ಮಣಿಪಾಲ ಆರೋಗ್ಯ ಕಾರ್ಡ್‌ ನೋಂದಣಿ ಪ್ರಾರಂಭ

Team Udayavani, Jun 18, 2024, 11:57 PM IST

Manipal Health Card; ಕುಟುಂಬದ ಆರೋಗ್ಯ ಸೇವೆಗೆ ಕಾರ್ಡ್‌ ಪೂರಕ: ಡಾ| ಬಲ್ಲಾಳ್‌

ಮಣಿಪಾಲ: ಮಣಿಪಾಲ ಆರೋಗ್ಯ ಕಾರ್ಡ್‌- 2024ರ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಆನ್‌ಲೈನ್‌ ಅಥವಾ ಏಜೆಂಟರ ಮೂಲಕ ನೋಂದಣಿ ಮಾಡಬಹುದು. ಕಳೆದ ವರ್ಷ 3.60 ಲಕ್ಷ ಮಂದಿ ಸೇವೆ ಪಡೆದಿದ್ದು, 16 ಕೋ.ರೂ. ವರೆಗೂ ರಿಯಾಯಿತಿ ನೀಡಲಾಗಿದೆ. ಈ ಬಾರಿ 4 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಳ್ಳುವ ನಿರೀಕ್ಷೆಯಿದೆ ಎಂದು ಮಾಹೆ ವಿ.ವಿ. ಸಹ ಕುಲಾಧಿಪತಿ ಡಾ| ಎಚ್‌.ಎಸ್‌.ಬಲ್ಲಾಳ್‌ ಹೇಳಿದರು.

ವಿ.ವಿ.ಯ ಆಡಳಿತ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪಾಲ ಆರೋಗ್ಯ ಕಾರ್ಡ್‌ ಇಡೀ ಕುಟುಂಬದ ಸದಸ್ಯರಿಗೆ ಸಮಗ್ರ ಆರೋಗ್ಯ ಪ್ರಯೋ ಜನಗಳನ್ನು ಒದಗಿಸಲಿದೆ. ಭಾರತೀಯ ಆರೋಗ್ಯ ವ್ಯವಸ್ಥೆಯಲ್ಲಿ ದಾರ್ಶನಿಕ ಎಂದು ಗುರುತಿಸಲ್ಪಡುವ ದಿ| ಡಾ| ಟಿಎಂಎ ಪೈ ಅವರ ಸಮಾಜಪರ ನಿಲುವು ಸದಾ ಪ್ರೇರಣೆ. ಡಾ| ರಾಮದಾಸ್‌ ಪೈ ನೇತೃತ್ವ ದಲ್ಲಿ 2000ರಲ್ಲಿ ಪ್ರಾರಂಭವಾದ ಈ ಕಾರ್ಡ್‌ ಪರಿಕಲ್ಪನೆ ಜನರಿಗೆ ಕೈಗೆಟ ಕುವ ದರದಲ್ಲಿ ಆರೋಗ್ಯ ಸೇವೆಯನ್ನು ಕಲ್ಪಿಸುವ ಗುರಿ ಹೊಂದಿದೆ ಎಂದರು.

ಗ್ರಾಹಕಸ್ನೇಹಿ ಗುರಿ: ಡಾ| ಶರತ್‌ ಕುಮಾರ್‌
ಸಹ ಕುಲಪತಿ ಡಾ| ಶರತ್‌ ಕುಮಾರ್‌ ರಾವ್‌ ಮಾತನಾಡಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜತೆಗೆ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಚಿಕ್ಕಮಗಳೂರು, ಬಳ್ಳಾರಿ ಮತ್ತು ನೆರೆಯ ಕೇರಳ, ಗೋವಾಕ್ಕೆ ಈ ಕಾರ್ಡ್‌ ಅನ್ನು ವಿಸ್ತರಿಸಲಾಗಿದೆ. 2019ರಲ್ಲಿ ಡಿಜಿಟಲ್‌ ಮಾಡಿದ್ದು, ಮುಂಬರುವ ವರ್ಷಗಳಲ್ಲಿ ಸಂಪೂರ್ಣ ಕಾರ್ಡ್‌ ರಹಿತ ಮತ್ತು ಗ್ರಾಹಕ ಸ್ನೇಹಿ ಆಗಿಸು ವುದಾಗಿ ತಿಳಿಸಿದರು.

ವಿವಿಧ ಆಸ್ಪತ್ರೆಗಳಲ್ಲಿ ಸೇವೆ ಲಭ್ಯ
ವೈದ್ಯಕೀಯ ಅಧೀಕ್ಷಕ ಡಾ| ಅವಿ ನಾಶ್‌ ಶೆಟ್ಟಿ ಮಾತನಾಡಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಉಡುಪಿಯ ಡಾ| ಟಿಎಂಎ ಪೈ ಆಸ್ಪತ್ರೆ, ಕಾರ್ಕಳದ ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆ, ಮಂಗಳೂರಿನ ಕೆಎಂಸಿ, ಅತ್ತಾವರದ ಕೆಎಂಸಿ, ಕಟೀಲಿನ ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಹಾಗೂ ಗೋವಾದ ಮಣಿಪಾಲ ಆಸ್ಪತ್ರೆಯಲ್ಲಿ ಈ ಕಾರ್ಡ್‌ನ ಲಾಭ ಪಡೆಯಬಹುದು ಎಂದರು.

ಮಾಹೆ ನಿರ್ವಹಣಾಧಿಕಾರಿ ಸಿ.ಜಿ.ಮುತ್ತಣ್ಣ, ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ| ಆನಂದ್‌ ವೇಣುಗೋಪಾಲ್‌, ಉಡುಪಿ ಡಾ| ಟಿಎಂಎ ಪೈ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ| ಶಶಿಕಿರಣ್‌ ಉಮಾಕಾಂತ್‌, ಕಾರ್ಕಳದ ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಕೀರ್ತಿ ನಾಥ್‌ ಬಲ್ಲಾಳ್‌, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಕೆ. ಸಚಿನ್‌ ಕಾರಂತ, ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಮೋಹನ್‌ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಡ್‌ನ ಸೌಲಭ್ಯಗಳೇನು?
ಮಣಿಪಾಲ ಆರೋಗ್ಯ ಕಾರ್ಡ್‌ಗೆ ಸಂಬಂಧಿಸಿದ ಪೂರ್ಣ ಮಾಹಿತಿ http://www.manipalhealthcard.com ನಲ್ಲಿ ಲಭ್ಯವಿದೆ. ಈ ಕಾರ್ಡ್‌ ದಾರರಿಗೆ ತಜ್ಞ ಮತ್ತು ಸೂಪರ್‌ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ ಶೇ.50 ರಷ್ಟು, ರೋಗನಿರ್ಣಯ ಮತ್ತು ಪ್ರಯೋಗಾಲಯ ತನಿಖೆಗಳಲ್ಲಿ ಶೇ.25, ವಿಕಿರಣಶಾಸ್ತ್ರದ ತನಿಖೆಗಳು, ಹೊರರೋಗಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ ಶೇ.20,ಡಯಾಲಿಸಿಸ್‌ನಲ್ಲಿ 100 ರೂ., ಆಸ್ಪತ್ರೆಯ ಔಷಧಾಲಯಗಳ ಔಷಧಗಳ ಮೇಲೆ ಶೇ.10 ಹಾಗೂ ಜನರಲ್‌ ವಾರ್ಡ್‌ನಲ್ಲಿ ಒಳರೋಗಿಗಳ ಬಿಲ್‌ಗ‌ಳಲ್ಲಿ (ಕನ್ಸುಮಬೆಲ್ಸ್ ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) ಶೇ.25 ರಷ್ಟು ರಿಯಾಯಿತಿ ದೊರೆಯಲಿದೆ.

ಟಾಪ್ ನ್ಯೂಸ್

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.