ಮರಾಠ ಸಮಾಜಕ್ಕೆ ಮೀಸಲಾತಿ ಅನಿವಾರ್ಯ


Team Udayavani, Mar 15, 2017, 4:11 PM IST

1303KAR4.jpg

ಕಾರ್ಕಳ: ಮರಾಠ ಸಮಾಜಕ್ಕೆ ಮೀಸಲಾತಿ ಅನಿವಾರ್ಯ. ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಸಮಾಜದಲ್ಲಿ ಪ್ರತಿಭಾವಂತರಿಗೆ ಅವಕಾಶ ಕಲ್ಪಿಸುವಲ್ಲಿ ಇದು ಸಹಕಾರಿ. ಪ್ರಸ್ತುತ ನಮ್ಮನ್ನು 2ಎ ಪ್ರವರ್ಗಕ್ಕೆ ಸೇರಿಕೊಳ್ಳುವಲ್ಲಿ ರಾಜ್ಯವ್ಯಾಪಿ ನಡೆಯುತ್ತಿರುವ ಆಂದೋಲನಕ್ಕೆ ಸಂಘಟಿತ ಬೆಂಬಲ ಬೇಕಾಗಿದೆ ಎಂದು ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟ ಬೆಂಗಳೂರಿನ ಅಧ್ಯಕ್ಷ ಶ್ಯಾಮ್‌ಸುಂದರ್‌ ಗಾಯಕ್‌ವಾಡ್‌ ಹೇಳಿದ್ದಾರೆ.

ಅವರು ಕಾರ್ಕಳ ಹಿರಿಯಂಗಡಿ ದುರ್ಗಾಪರಮೇಶ್ವರೀ ದೇಗುಲದ ಸಭಾಭವನದಲ್ಲಿ  ಮಾ. 12ರಂದು  ನಡೆದ ಕ್ಷತ್ರಿಯ ಮರಾಠ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ, ಅಭಿನಂದನೆ ಹಾಗೂ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮೀಸಲಾತಿ ಬಗ್ಗೆ ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ಬೇಡಿಕೆಗೆ ನ್ಯಾಯ ಒದಗಿಸುವ ಭರವಸೆ ದೊರೆತಿದೆ ಎಂದರು.ಪ್ರಧಾನ ಭಾಷಣ ನೆರವೇರಿಸಿದ ಹಳೆಯಂಗಡಿ ಸ.ಪ.ಪೂ. ಕಾಲೇಜಿನ ಸಹ ಪ್ರಾಧ್ಯಾಪಕ ಡಾ| ಶಶಿಕಲಾ ಸಾಯಿರಾಂ ಪವರ್‌ ಮಾತನಾಡಿ, ಸ್ವಸಮಾಜದ ಅಗತ್ಯವನ್ನು ಮನಗಂಡು ಸವಲತ್ತುಗಳನ್ನು ಪೂರೈಕೆ ಮಾಡಿರುವ ಕೆಲಸ ಅತ್ಯಂತ ಶ್ಲಾಘನೀಯ. ಆರ್ಥಿಕ ವಾಗಿ ಹಿಂದುಳಿದ ಜನತೆಯನ್ನು ಗುರುತಿಸಿ ಸಹಕರಿಸುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಸರಿ ಸಮಾನವಾಗಿ ತೊಡಗಿಸಿಕೊಳ್ಳುವಂತೆ ಮಾಡುವುದರಿಂದ ಸಂಘಟನೆಗೆ ನಿಜ ವಾದ ಅರ್ಥ ಬರುತ್ತದೆ ಎಂದರು.

ಹಿರಿಯಂಗಡಿ ಶ್ರೀ ದುರ್ಗಾ ಪರಮೇಶ್ವರೀ ದೇಗುಲದ ಆಡಳಿತ ಮೊಕ್ತೇಸರ ಉಮೇಶ್‌ ರಾವ್‌ ಅಧ್ಯಕ್ಷತೆ ವಹಿಸಿದ್ದರು. ಮೊಕ್ತೇಸರ ವಾಮನ್‌ ರಾವ್‌, ಉಮಾನಾಥ ಜಿ., ಗಿರೀಶ್‌ ರಾವ್‌, ನಿವೃತ್ತ ಉಪ ತಹಶೀಲ್ದಾರ್‌ ಶರಶ್ಚಂದ್ರ ರಾವ್‌, ಕ್ಷತ್ರಿಯ ಮರಾಠ ಸಮಾಜದ ಗೌರವಾಧ್ಯಕ್ಷ ಶೇಖರ್‌ ರಾವ್‌, ಗೌರವ ಸಲಹೆಗಾರ ಗೋಪಿನಾಥ ಚೌಹಾನ್‌ ಉಪಸ್ಥಿತರಿದ್ದರು.ಇದೇ ಸಂದರ್ಭ ಸ್ವಸಮಾಜದ ಆಯ್ದ ಮೂರು ಕುಟುಂಬಗಳಿಗೆ ಅಡುಗೆ ಅನಿಲ ಮತ್ತು ಮೂವರಿಗೆ ತಲಾ ಐದು ಸಾವಿರ ವಿದ್ಯಾರ್ಥಿವೇತನ ವಿತರಿಸಲಾಯಿತು.

ಸಂಘದ ನೂತನ ಅಧ್ಯಕ್ಷ ಶುಭದ ರಾವ್‌ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು. ಹರೇಂದ್ರ ರಾವ್‌ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಪ್ರಸನ್ನ ರಾವ್‌ ವಂದಿಸಿದರು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.