ದುರ್ಗಮ ಹಾದಿಯಲ್ಲಿ ಸಂಚಾರ ದುಸ್ತರ

ಮಾರ್ಡಿ ಶಾಲೆ- ಗುಡ್ಡೆಗಣಪತಿ ದೇವಸ್ಥಾನ ಸಂಪರ್ಕ ರಸ್ತೆ ; 1.5 ಮಣ್ಣಿನ ರಸ್ತೆಯಲ್ಲಿ ಸಂಚರಿಸುವುದೇ ಕಷ್ಟಕರ

Team Udayavani, Aug 28, 2021, 6:09 AM IST

ದುರ್ಗಮ ಹಾದಿಯಲ್ಲಿ ಸಂಚಾರ ದುಸ್ತರ

ಮಳೆಗಾಲದಲ್ಲಿ ಪಡಿತರ ತರಲು, ಪೇಟೆಯಿಂದ ಅಗತ್ಯದ ವಸ್ತುಗಳನ್ನು, ಕೃಷಿ ಸಲಕರಣೆಗಳನ್ನೆಲ್ಲ ತರಲು ಇಲ್ಲಿನ ಜನರಿಗೆ ಬಹಳಷ್ಟು ಸಮಸ್ಯೆ ಯಾಗುತ್ತಿದೆ. ಇನ್ನು ಗ್ಯಾಸ್‌ ಸಿಲಿಂಡರ್‌ಗಳನ್ನೆಲ್ಲ ಬೈಕ್‌ನಲ್ಲಿ ಅಥವಾ ದೂರದಿಂದ ತಲೆ ಮೇಲೆ ಹೊತ್ತು ತರಬೇಕಾದ ಸ್ಥಿತಿ ಇಲ್ಲಿನವರದು.

ನೇರಳಕಟ್ಟೆ: ಈ ಮಾರ್ಗದಲ್ಲಿ ಬೇಸಗೆಯಲ್ಲಿಯೇ ಸಂಚರಿಸುವುದು ಕಷ್ಟ. ಇನ್ನೂ ಮಳೆಗಾಲ ಆರಂಭವಾದ ಮೇಲಂತೂ ಈ ರಸ್ತೆಯಲ್ಲಿ ಹೋಗುವುದು ಸಾಹಸವೇ ಸರಿ. ಇದು ಆಜ್ರಿ ಗ್ರಾ.ಪಂ. ವ್ಯಾಪ್ತಿಯ ಕೊಡ್ಲಾಡಿ ಗ್ರಾಮದ ಮಾರ್ಡಿ ಶಾಲೆ ಬಳಿಯಿಂದ ಗುಡ್ಡೆ ಗಣಪತಿ ದೇವಸ್ಥಾನದ ಕಡೆಗೆ ಸಂಪರ್ಕ ಕಲ್ಪಿಸುವ ದುರ್ಗಮ ಹಾದಿಯ ಬಗೆಗಿನ ಚಿತ್ರಣ.

ಕೊಡ್ಲಾಡಿ ಗ್ರಾಮದ ಮಾರ್ಡಿಯಿಂದ ಮೂಡುಬಗೆ ಕಡೆಗೆ ಸಂಚರಿಸುವ ಮುಖ್ಯ ರಸ್ತೆಯಿಂದ ಮಾರ್ಡಿ ಶಾಲೆ ಬಳಿಯ ಕ್ರಾಸ್‌ನಿಂದ ಗುಡ್ಡೆಗಣಪತಿ ದೇವಸ್ಥಾನದ ಕಡೆಗೆ ಸಂಪರ್ಕಿಸುವ ಮಣ್ಣಿನ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದೆ.

1.5 ಕಿ.ಮೀ. ದುರ್ಗಮ ರಸ್ತೆ
ಮಾರ್ಡಿ ಶಾಲೆಯ ಬಳಿಯಿಂದ ಗುಡ್ಡೆ ಗಣಪತಿಯವರೆಗೆ ಸುಮಾರು 1.5 ಕಿ.ಮೀ. ಉದ್ದದ ರಸ್ತೆ ಇದಾಗಿದ್ದು, ಆರಂಭದಿಂದ ಕೊನೆಯವರೆಗೂ ದುರ್ಗಮವಾಗಿಯೇ ಇದೆ. ಮಳೆಗಾಲದಲ್ಲಿ ನೀರೆಲ್ಲ ರಸ್ತೆಯಲ್ಲಿಯೇ ಹರಿದು ಮಧ್ಯೆ ಅಲ್ಲಲ್ಲಿ ಹೊಂಡ ಸೃಷ್ಟಿಯಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಈ ಪ್ರದೇಶದಲ್ಲಿ 15ಕ್ಕೂ ಹೆಚ್ಚು ಮನೆಗಳಿದ್ದು, ಸುಮಾರು 70ರಿಂದ 80 ಮಂದಿ ನೆಲೆಸಿದ್ದಾರೆ. ಇವರೆಲ್ಲ ಇದೇ ಮಾರ್ಗವನ್ನು ಆಶ್ರಯಿಸಿದ್ದಾರೆ.

ಮಳೆಗಾಲದ ಸಂಕಷ್ಟ
ಈ ಊರಿನವರಿಗೆ ಮಳೆಗಾಲ ಬಂತೆಂದರೆ ಸಾಕು ಸಮಸ್ಯೆಗಳ ಸರಮಾಲೆಯೇ ಶುರುವಾಗುತ್ತದೆ. ಬೇಸಗೆಯಲ್ಲಿ ಹೇಗೋ ಕಷ್ಟಪಟ್ಟು ತಮ್ಮ – ತಮ್ಮ ವಾಹನಗಳಲ್ಲಿ ಸಂಚರಿಸುತ್ತಿದ್ದರೂ, ಮಳೆಗಾಲದಲ್ಲಂತೂ ಈ ರಸ್ತೆ ಯಲ್ಲಿ ನಾಲ್ಕು ಚಕ್ರದ ವಾಹನ ಬಿಡಿ, ಬೈಕ್‌ ಸಹ ಕಷ್ಟಪಟ್ಟು ಸಂಚರಿಸುವ ದುಸ್ಥಿತಿ ಇದೆ.

ಇತರ ಸಮಸ್ಯೆಗಳೇನು?
– ಮಳೆಗಾಲದಲ್ಲಿ ರಸ್ತೆಯ ಸಮಸ್ಯೆಯಾದರೆ, ಈ ಊರಿನವರಿಗೆ ಬೇಸಗೆಯಲ್ಲಿ ಕುಡಿಯುವ ನೀರಿಗೆ ಬರ ಎದುರಾಗುತ್ತದೆ.
– ಹದಗೆಟ್ಟ ರಸ್ತೆಯಿಂದಾಗಿ ಯಾರಿಗಾದರೂ ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯಲು, ಪಡಿತರ, ಇನ್ನಿತರ ಸಾಮಗ್ರಿ ತರಲು ಬಹಳಷ್ಟು ಸಮಸ್ಯೆ ಅನುಭವಿಸುವಂತಾಗಿದೆ.

ಅನೇಕ ಸಲ ಮನವಿ
ಮಾರ್ಡಿ ಶಾಲೆ – ಗುಡ್ಡೆಗಣಪತಿ ದೇವಸ್ಥಾನವನ್ನು ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಬಗ್ಗೆ ಸಾಕಷ್ಟು ಬಾರಿ ಸಂಬಂಧಪಟ್ಟ ಶಾಸಕರು, ಇನ್ನಿತರ ಹಲವಾರು ಜನಪ್ರತಿನಿಧಿಗಳು, ಸ್ಥಳೀಯ ಪಂಚಾಯತ್‌, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರುತ್ತಾರೆ ಸ್ಥಳೀಯರು.

ಭರವಸೆ ಈಡೇರಿಲ್ಲ
ನಮ್ಮ ಈ ರಸ್ತೆಯ ಅಭಿವೃದ್ಧಿ ಬಗ್ಗೆ ಸಂಬಂಧಪಟ್ಟ ಎಲ್ಲರಿಗೂ ಅನೇಕ ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೆ ಯಾವ ಪ್ರಯೋಜನವೂ ಆಗಿಲ್ಲ. ಮಾಡಿ ಕೊಡುತ್ತೇವೆ ಅನ್ನುತ್ತಾರೆ. ಕಳೆದ 2 ವರ್ಷಗಳಿಂದ ಅನೇಕ ಮನವಿ ಸಲ್ಲಿಸಿದ್ದೇವೆ. ಮಳೆಗಾಲದಲ್ಲಂತೂ ಈ ನಮ್ಮ ಊರಿನವರ ಪಾಡು ಯಾರಿಗೂ ಹೇಳತೀರದಾಗಿದೆ. ಈ ಬಾರಿಯಾದರೂ ಈ ರಸ್ತೆಯ ಅಭಿವೃದ್ಧಿಯಾಗಲಿ.
– ಸಚ್ಚೀಂದ್ರ ಶೆಟ್ಟಿ, ಸ್ಥಳೀಯರು

ಶಾಸಕರಿಂದ ಭರವಸೆ
ಈ ಮಾರ್ಡಿ ಶಾಲೆಯ ಬಳಿಯಿಂದ ಗುಡ್ಡೆಗಣಪತಿ ದೇವಸ್ಥಾನದವರೆಗಿನ 1.5 ಕಿ.ಮೀ. ದೂರದ ರಸ್ತೆ ಅಭಿವೃದ್ಧಿ ಬಗ್ಗೆ ಈಗಾಗಲೇ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರನ್ನು ಕರೆದುಕೊಂಡು ಬಂದು ಪರಿಶೀಲನೆ ನಡೆಸಲಾಗಿದೆ. ಅವರು ಸಹ ಮುಂದಿನ ಕ್ರಿಯಾ ಯೋಜನೆಯಲ್ಲಿ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ.
– ಅಶೋಕ್‌ ಕುಲಾಲ್‌, ಅಧ್ಯಕ್ಷರು ಆಜ್ರಿ ಗ್ರಾ.ಪಂ.

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.