ಕಟಪಾಡಿ: ಹಸೆಮಣೆಯೇರಿದ ಹನ್ನೆರಡು ಜೋಡಿಗಳು

ವಿಶ್ವ ಬ್ರಾಹ್ಮಣ ಯುವ ಸಂಘಟನೆ ವತಿಯಿಂದ ಸಾಮೂಹಿಕ ವಿವಾಹ

Team Udayavani, May 20, 2019, 11:20 AM IST

katpadi

ಕಟಪಾಡಿ,: ಇಲ್ಲಿನ ವಿಶ್ವ ಬ್ರಾಹ್ಮಣ ಯುವ ಸಂಘಟನೆಯ ವಾರ್ಷಿಕೋತ್ಸವದ ಅಂಗವಾಗಿ ಕಟಪಾಡಿ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನದಲ್ಲಿ ರವಿವಾರ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 12 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ತಂತ್ರಿಗಳಾದ ಬ್ರಹ್ಮಶ್ರೀ ವಿಶ್ವನಾಥ ಆಚಾರ್ಯ ಉದ್ಯಾವರ, ಪುರೋಹಿತ ಪಿ.ಕೆ. ಶ್ರೀಧರಾಚಾರ್ಯ ಪಾದೂರು ಮತ್ತು ವೈದಿಕ ವೃಂದದ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನೆರವೇರಿತು.

ಯುವ ಸಂಘಟನೆಯ ಅಧ್ಯಕ್ಷ ವೈ. ಗಣೇಶ ಆಚಾರ್ಯ ಉಚ್ಚಿಲ ಅವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭೆಯನ್ನು ಮುಂಬಯಿ ದಹಿಸರ್‌ ಹೊಟೇಲ್‌ ಗೋಕುಲಾನಂದ ಪ್ರೈ.ಲಿ.ನ ರಾಜೀವಿ-ಕೃಷ್ಣ ವಿ. ಆಚಾರ್ಯ ದಂಪತಿ ಉದ್ಘಾಟಿಸಿದರು.

ಬೆಂಗಳೂರು ಗಾಂಧಿನಗರ ಹೊಟೇಲ್‌ ಅಕ್ಷಯ ಔರಾದ ವೀಣಾ ವಿಶ್ವನಾಥ ರಾವ್‌ ಮಾತನಾಡಿ, ಸಾಮೂಹಿಕ ವಿವಾಹದ ಮೂಲಕ ಸಮಾಜದ ನೊಂದವರ ಕಣ್ಣೀರೊರೆಸುವ ಕೆಲಸ ಸ್ತುತ್ಯರ್ಹ ಎಂದರು.

ಮುಖ್ಯ ನ್ಯಾಯಾಧೀಶೆ ಬೆಂಗಳೂರಿನ ಹೇಮಾವತಿ, ಅ. ಭಾ.ಬ್ಯಾಂಕ್‌ ನೌಕರರ ಒಕ್ಕೂಟದ ಅಧ್ಯಕ್ಷ ವೈ. ಸುದರ್ಶನ್‌ ಎಲ್ಲೂರು ಮಾತನಾಡಿದರು. ಮಂಗಳೂರು ಕೆನರಾ ಜುವೆಲರ್ನ ವಂದನಾ ಧನಂಜಯ ಪಾಲ್ಕೆ, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಸಂಘಟನೆಯ ಗೌರವಾಧ್ಯಕ್ಷ ಸದಾಶಿವ ಆಚಾರ್ಯ ಪಡುಕುತ್ಯಾರು, ಮೊಕ್ತೇಸರರಾದ ನವೀನ್‌ ಆಚಾರ್ಯ ಪಡುಬಿದ್ರಿ, ವಿ. ಶ್ರೀಧರ್‌ ಆಚಾರ್ಯ ವಡೇರ ಹೋಬಳಿ, ಪ್ರವೀಣ ಆಚಾರ್ಯ ಬಾಕೂìರು, ಸತೀಶ್‌ ಆಚಾರ್ಯ ಮುಂಬಯಿ, ಶೇಖರ್‌ ಆಚಾರ್ಯ ಕಾಪು, ಕಟಪಾಡಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನದ ಸಲಹಾ ಸಮಿತಿ ಅಧ್ಯಕ್ಷ ವಿಶ್ವನಾಥ ಆಚಾರ್ಯ ಕರಂಬಳ್ಳಿ, ಕರ್ನಾಟಕ ರಾಮಸೇನಾ ಸಂಸ್ಥಾಪಕ ಪ್ರಸಾದ್‌ ಅತ್ತಾವರ, ಸಂಘಟನೆಯ ಸಂಚಾಲಕ ಮುರಳೀಧರ ಆಚಾರ್ಯ ಇನ್ನಂಜೆ, ಶ್ರೀ ಎಸ್‌ಕೆಜಿ ಕೋ- ಆಫ್ ಬ್ಯಾಂಕ್‌ ಅಧ್ಯಕ್ಷ ಜನಾರ್ದನ ಆಚಾರ್ಯ ಬೈಕಾಡಿ, ವಿಶ್ವಕರ್ಮ ಸಮಾಜ ಸೇವಾ ಸಂಘ ಚಕ್ರತೀರ್ಥದ ಅಧ್ಯಕ್ಷ ಕೇಶವ ಆಚಾರ್ಯ ಸಗ್ರಿ, ಉಡುಪಿ ಜಿಲ್ಲಾ ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಕಿಶೋರ್‌ ಆಚಾರ್ಯ, ಕೊಯಮತ್ತೂರು ವಿಶ್ವಕರ್ಮ ಸಂಘದ ಅಧ್ಯಕ್ಷ ಕೆ. ರಮೇಶ್‌ ಆಚಾರ್ಯ, ಬೊರಿವಿಲಿ ಬಿ. ರಮೇಶ್‌ ಆಚಾರ್ಯ ಮಂಚಕಲ್ಲು, ಸಂಘಟನೆಯ ಸಲಹೆಗಾರ ರವಿ ಪುರೋಹಿತ್‌ ಬಂಟಕಲ್ಲು ವೇದಿಕೆಯಲ್ಲಿದ್ದರು. ಪ್ರಧಾನ ಕಾರ್ಯದರ್ಶಿ ಹರೀಶ್‌ ಆಚಾರ್ಯ ಕಳತ್ತೂರು, ಕೋಶಾಧಿಕಾರಿ ರತ್ನಾಕರ ಆಚಾರ್ಯ ಕುರ್ಕಾಲು, ಜತೆ ಕಾರ್ಯದರ್ಶಿ ದಿನೇಶ್‌ ಎರ್ಮಾಳ್‌, ಉಪಾಧ್ಯಕ್ಷರು, ಗೌರವ ಸಲಹೆಗಾರರು, ವಲಯಾಧ್ಯಕ್ಷರು ಉಪಸ್ಥಿತರಿದ್ದರು.

ಅಧ್ಯಕ್ಷ ವೈ. ಗಣೇಶ ಆಚಾರ್ಯ ಉಚ್ಚಿಲ ಸ್ವಾಗತಿಸಿದರು. ಅವಿಭಜಿತ ದ.ಕ. ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಗೌರವಾಧ್ಯಕ್ಷ ಅಲೆವೂರು ಯೋಗೀಶ್‌ ಆಚಾರ್ಯ ಅವರು ಪ್ರಸ್ತಾವನೆಗೈದರು. ರಾಜೇಶ್‌ ಆಚಾರ್ಯ ಅವರು ವಂದಿಸಿದರು. ಪುರೋಹಿತ್‌ ದಾಮೋದರ ಶರ್ಮಾ ಅವರು ಕಾರ್ಯಕ್ರಮ ನಿರೂಪಿಸಿದರು.

ಸಮಾರಂಭಕ್ಕೆ ಉಡುಪಿ ಶ್ರೀಕೃಷ್ಣ ಮಠದಿಂದ ಎಂಟು ಸಾವಿರ ಲಾಡು ಕಳುಹಿಸಿಕೊಡಲಾಗಿತ್ತು. ಮಣಿಪಾಲ ಮಾಹೆಯ ಉದ್ಯೋಗಿ, ಯುವ
ಸಂಘಟನೆಯ ಸದಸ್ಯ ಪ್ರದೀಪ್‌ ಅವರು ದಿವ್ಯಾ ಅವರನ್ನು ವಿವಾಹವಾಗುವ ಮೂಲಕ ಮಾದರಿಯಾದರು. 7 ಸಾವಿರಕ್ಕೂ ಅಧಿಕ ಮಂದಿ ನೂತನ ವಧು-ವರರನ್ನು ಆಶೀರ್ವದಿಸಿದರು. ಸಮಾಜದ ಸಾಧಕರು, ಪ್ರತಿಭೆಗಳನ್ನು ಗುರುತಿಸಿ ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.