ಲಕ್ಷ್ಮೀ ನಗರದ ರಸ್ತೆ ಇಕ್ಕೆಲದಲ್ಲಿ ರಾಶಿಬಿದ್ದ ತ್ಯಾಜ್ಯ

ಶಾಂತಿವನದಿಂದ ಲಕ್ಷ್ಮೀ ನಗರ ಜಂಕ್ಷನ್‌ವರೆಗೆ ಕಸದ ರಾಶಿ

Team Udayavani, May 23, 2019, 6:10 AM IST

lakshmi-nagara

ಮಲ್ಪೆ: ಕೊಡವೂರಿನಿಂದ ಕಲ್ಯಾಣಪುರ ಸಂತೆಕಟ್ಟೆ ಹೋಗುವ ಮಾರ್ಗದ ಲಕ್ಷ್ಮೀನಗರದಲ್ಲಿ ಪ್ಲಾಸ್ಟಿಕ್‌ ತಾಜ್ಯಗಳು ರಸ್ತೆಯ ಎರಡೂ ಬದಿಯಲ್ಲಿ ಹರಡಿಕೊಂಡು ಪರಿಸರಕ್ಕೆ ಮಾರಕವಾಗಿ ಪರಿಣಮಿಸಿದೆ.

ಇಲ್ಲಿನ ಶಾಂತಿವನದಿಂದ ಲಕ್ಷ್ಮೀ ನಗರ ಜಂಕ್ಷನ್‌ವರೆಗಿನ ರಸ್ತೆಯ ಎರಡೂ ಬದಿಗಳು ತಿಪ್ಪೆಗುಂಡಿಗಳಾಗಿವೆ. ಉಡುಪಿ ನಗರಸಭಾ ವ್ಯಾಪಿಯ ಈ ರಸ್ತೆಯ ಒಂದು ಭಾಗ ಸುಬ್ರಹ್ಮಣ್ಯ ವಾರ್ಡ್‌, ಇನ್ನೊಂದು ಭಾಗ ಗೋಪಾಲಪುರ ವಾರ್ಡ್‌ಗೆ ಸೇರಿದೆ. ಲಕೀÒ$¾ನಗರದ ಸ್ವಲ್ಪ ಮುಂದೆ ಕೊಡವೂರು ವಾರ್ಡ್‌ಗೆ ಒಳಪಟ್ಟಿದೆ.

ಎರಡೂ ಇಕ್ಕೆಲಗಳಲ್ಲಿ ವರ್ಷಪೂರ್ತಿ ಕಸದ ರಾಶಿ ಹರಡಿಕೊಂಡಿರುವುದರಿಂದ ಇಲ್ಲಿ ನಡೆದಾಡುವುದೇ ಅಸಹ್ಯವಾಗಿದೆ. ದಿನನಿತ್ಯ ಇಲ್ಲಿ ಕಸದ ರಾಶಿ ಗುಡ್ಡೆಯಂತೆ ಶೇಖರಣೆಗೊಳ್ಳುತ್ತಿದ್ದು ಕನಿಷ್ಟ ಎರಡು ಮೂರು ದಿನಗಳಿಗೊಮ್ಮೆ ಸಮರ್ಪಕವಾಗಿ ವಿಲೇವಾರಿ ಆಗದಿರುವುದರಿಂದ ಕಾಗೆ, ನಾಯಿ, ದನಗಳ ಮತ್ತಿತರ ಪ್ರಾಣಿಗಳಿಗೆ ಆಹಾರ ಕೇಂದ್ರವಾಗಿದೆ. ಅಸಮರ್ಪಕ ಕಸ ವಿಲೇವಾರಿಯಿಂದ ನಗರದ ಜನತೆ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.

ರಸ್ತೆಯ ಬದಿಯಲ್ಲಿ ಸಂಗ್ರಹವಾಗಿರುವ ಕಸ ವಿಲೇವಾರಿಗೆ ಸಂಬಂಧಪಟ್ಟ ಆಡಳಿತ ಆದ್ಯತೆ ನೀಡುತ್ತಿಲ್ಲ ಎಂದು ಆರೋಪವೂ ವ್ಯಕ್ತವಾಗಿದೆ.

ಸಾಂಕ್ರಮಿಕ ರೋಗ ಭೀತಿ ಮಳೆಗಾಲ ಆರಂಭದ ಈ ದಿನಗಳಲ್ಲಿ ಸಾಂಕ್ರಮಿಕ ರೋಗಗಳ ಹಾವಳಿಯ ಭೀತಿಯಲ್ಲಿ ಬದುಕುತ್ತಿರುವ ಜನರಿಗೆ ಕಸ ವಿಲೇವಾರಿ ಆಗದಿರುವುದು ಮತ್ತಷ್ಟು ಸಹನೆಯನ್ನು ಕಳೆದುಕೊಳ್ಳುವಂತಾಗಿದೆ. ಜನರ ಆರೋಗ್ಯ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುವ ಈ ತ್ಯಾಜ್ಯರಾಶಿಗೆ ಶಾಶ್ವತ ಮುಕ್ತಿ ದೊರಕಿಸಿ ಕೊಡಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

ದೊಡ್ಡ ಮೊತ್ತದ ದಂಡ ಹಾಕಬೇಕು
ತ್ಯಾಜ್ಯ ಎಸೆಯುವವರು ಸಾಮಾನ್ಯ ಜನರಲ್ಲ. ಕಾರುಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ಬಂದು ಎಸೆದು ಹೋಗುತ್ತಾರೆ. ತ್ಯಾಜ್ಯ ಎಸೆಯುವ ವಾಹನವನ್ನು ತಡೆದು ದೊಡ್ಡ ಮೊತ್ತದ ದಂಡ ವಿಧಿಸಿದರೆ ಮತ್ತು ಕಾನೂನು ಕ್ರಮ ತೆಗೆದುಕೊಂಡರೆ ಸ್ವಲ್ಪ ಮಟ್ಟಿನ ಕಡಿವಾಣ ಹಾಕಬಹುದು.
– ರವಿ, ಲಕ್ಷ್ಮೀ ನಗರ, ಸ್ಥಳೀಯರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.