“ಯಾಗ, ಯಜ್ಞಾದಿಗಳಿಂದ ನಾಡು ಸಮೃದ್ಧವಾಗಲಿ’


Team Udayavani, Dec 26, 2019, 12:50 AM IST

yajna

ಶಿರ್ವ: ಗ್ರಹಣ ದುಷ್ಪರಿ ಣಾಮಗಳನ್ನು ಬೀರಬಾರದು ಎಂಬ ಉದ್ದೇಶದಿಂದ ಯಾಗ ನಡೆಸುತ್ತಿರುವುದು ಸ್ವಾಗತಾರ್ಹ. ಯಜ್ಞ ಯಾಗಾದಿಗಳಿಂದ ಉತ್ತಮ ವಾತಾವರಣ ಸೃಷ್ಟಿಯಾಗಿ ಶಾಂತಿ ನೆಲೆಸಲಿ, ನಾಡು ಸಮೃದ್ಧವಾಗಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಉಡುಪಿ ಜಿಲ್ಲೆ ಕಾಪು ತಾಲೂಕಿನ ಕುತ್ಯಾರು ಯಾಗ ಸಂಘಟನ ಸಮಿತಿಯ ಆಶ್ರಯದಲ್ಲಿ ಕುತ್ಯಾರು ವಿದ್ಯಾದಾಯಿನಿ ಹಿ.ಪ್ರಾ. ಶಾಲೆಯ ಪ್ರಾಂಗಣದಲ್ಲಿ ಐದು ದಿನಗಳ ಕಾಲ ಲೋಕ ಕಲ್ಯಾಣಾರ್ಥ ಜರಗಲಿರುವ ಸಹಸ್ರಮಾನ ನವಕುಂಡ ಶ್ರೀ ಮಹಾಗಣಪತಿ ಅಥರ್ವಶೀರ್ಷ ಮಹಾಯಾಗ, ಸನಾತನ ಧರ್ಮ ಸಂಸತ್‌ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

ಯಾಗ ಸಂಕಲ್ಪದ ಬಳಿಕ ಮುಖ್ಯಮಂತ್ರಿ ಗೋಪೂಜೆ ನಡೆಸಿ ದರು. ಬಳಿಕ ವೇದಿಕೆಯಲ್ಲಿ ಅಟಲ್‌ ಜನ್ಮಜಯಂತಿಯ ಪ್ರಯುಕ್ತ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಗೌರವಾರ್ಪಣೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಳುಗಳಾದ ಕುತ್ಯಾರಿನ ಪ್ರತೀಕ್ಷಾ ಕುಲಾಲ್‌ ಮತ್ತು ವಂದನಾ ಎಸ್‌. ಅವರನ್ನು ಮುಖ್ಯಮಂತ್ರಿ
ಗಳು ಗೌರವಿಸಿದರು. ಯಾಗ ಸಂಘಟನ ಸಮಿತಿಯ ವತಿ ಯಿಂದ ಮುಖ್ಯಮಂತ್ರಿಗಳನ್ನು ಗೌರವಿಸ ಲಾಯಿತು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪ್ರವಾಸೋ ದ್ಯಮ ಸಚಿವ ಸಿ.ಟಿ. ರವಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಲಾಲಾಜಿ ಮೆಂಡನ್‌, ರಘುಪತಿ ಭಟ್‌, ಸುನಿಲ್‌ ಕುಮಾರ್‌, ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಕುತ್ಯಾರು ಗ್ರಾ.ಪಂ. ಅಧ್ಯಕ್ಷ ಧೀರಜ್‌ ಶೆಟ್ಟಿ, ಯಾಗ ಸಮಿತಿಯ ಗೌರವಾಧ್ಯಕ್ಷ ಜಿನೇಶ್‌ ಬಲ್ಲಾಳ್‌, ನಾರಾಯಣ ತಂತ್ರಿ, ಶಾಲಾ ಮುಖ್ಯ ಶಿಕ್ಷಕಿ ಶರ್ಮಿಳಾ, ಪ್ರವೀಣ್‌ ಆಚಾರ್ಯ ವೇದಿಕೆಯಲ್ಲಿದ್ದರು.

ಯಾಗದ ಮಹಾ ಸಂಚಾಲಕ ವೇ|ಮೂ| ಕುತ್ಯಾರು ಕೇಂಜ ಶ್ರೀಧರ ತಂತ್ರಿ ಪ್ರಸ್ತಾವನೆಗೈದರು. ಕಾರ್ಯಾಧ್ಯಕ್ಷ ಕುತ್ಯಾರು ನವೀನ್‌ ಶೆಟ್ಟಿ ಸ್ವಾಗತಿಸಿದರು. ಕುತ್ಯಾರು ಪ್ರಸಾದ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಅನಂತ ಮೂಡಿತ್ತಾಯ ವಂದಿಸಿದರು.

ಶಾಂತಿ, ಸುಭಿಕ್ಷೆ ನೆಲೆಸಲಿ: ಪುತ್ತಿಗೆ ಶ್ರೀ
ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ನಿಸ್ವಾರ್ಥ ಕರ್ಮ ಭಗವಂತನನ್ನು ಸೇರುತ್ತದೆ. ಭಕ್ತಿ, ಶ್ರದ್ಧೆಗಳಿಂದ ದೇವರನ್ನು ಒಲಿಸಿಕೊಂಡಾಗ ಅನುಗ್ರಹ ಪ್ರಾಪ್ತಿಯಾಗಿ ಮಳೆ, ಬೆಳೆ, ಸಮೃದ್ಧಿಯುಂಟಾಗುತ್ತದೆ. ಲೋಕಕಲ್ಯಾಣಾರ್ಥ ಯಾಗದಲ್ಲಿ ಮುಖ್ಯಮಂತ್ರಿಗಳು ಭಕ್ತಿ, ಶ್ರದ್ಧೆಯಿಂದ ಭಾಗವಹಿಸಿ ಸಂಕಲ್ಪ ಮಾಡಿದ್ದು, ಅವರ ಮೂಲಕ ಲೋಕದಲ್ಲಿ ಸುಭಿಕ್ಷೆ, ಶಾಂತಿ ನೆಲೆಸುವಂತಾಗಲಿ ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.