Karnataka ರಾಜ್ಯಪಾಲರ ಕಚೇರಿ ದುರುಪಯೋಗ: ಮಂಜುನಾಥ ಭಂಡಾರಿ
Team Udayavani, Aug 19, 2024, 11:41 PM IST
ಉಡುಪಿ: ಗ್ಯಾರಂಟಿ ಯೋಜನೆಯ ಸಮರ್ಪಕ ಅನುಷ್ಠಾನದ ಮೂಲಕ ಜನ ಪರವಾದ ಸರಕಾರವನ್ನು ಅಸ್ಥಿರಗೊಳಿಸಲು ರಾಜ್ಯ ಪಾಲರ ಕಚೇರಿಯನ್ನು ಬಿಜೆಪಿ ದುರುಪಯೋಗ ಮಾಡಿಕೊಂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಂಎಲ್ಸಿ ಮಂಜುನಾಥ ಭಂಡಾರಿ ಆರೋಪಿಸಿದರು.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕೇಂದ್ರ ಬಿಜೆಪಿ ಸರಕಾರವು ಈಗಾಗಲೇ ಮಹಾರಾಷ್ಟ್ರ, ಅರುಣಾಚಲ ಪ್ರದೇಶ, ದಿಲ್ಲಿ ಮೊದಲಾದ ರಾಜ್ಯಗಳಲ್ಲಿ ರಾಜ್ಯಪಾಲರ ಕಚೇರಿಯನ್ನು ದುರುಪಯೋಗಿಸಿಕೊಂಡು ಅಲ್ಲಿನ ಸರಕಾರ ಗಳನ್ನು ಅಸ್ಥಿರಗೊಳಿಸಿದೆ. ಅದೇ ಪ್ರಯತ್ನ ವನ್ನು ಕರ್ನಾಟಕದಲ್ಲೂ ನಡೆಸುತ್ತಿದೆ.
ಸಿದ್ದರಾಮಯ್ಯನವರ ಜನ ಪ್ರಿಯತೆಯನ್ನು ಸಹಿಸಲಾಗದೇ ಹೀಗೆ ಮಾಡಲಾಗುತ್ತಿದೆ ಎಂದು ಆಪಾದಿಸಿದರು.
ರಾಜ್ಯಪಾಲರು ರಾಜಕಾರಣಿ ಯಾಗಬಾರದು ಎಂದು ಹೇಳಿದ ಅವರು, ರಾಜ್ಯಪಾಲರ ನಡೆಯನ್ನು ಖಂಡಿಸುತ್ತೇವೆ ಎಂದು ಹೇಳಿದರು.
ಕಪ್ಪು ಚುಕ್ಕಿ ತರುವ ಪ್ರಯತ್ನ: ಹೆಗ್ಡೆ
ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಸಿದ್ದರಾಮಯ್ಯ ಮೇಲೆ ರಾಜಕೀಯವಾಗಿ ಕಪ್ಪು ಚುಕ್ಕಿ ತರುವ ಪ್ರಯತ್ನವಿದು. ಅವರನ್ನು ಆಡಳಿತ ಹಾಗೂ ವಿಪಕ್ಷದಲ್ಲಿದ್ದಾಗಲೂ ಕಂಡಿದ್ದೇನೆ. ನಾವು ವಿಪಕ್ಷದಲ್ಲಿದ್ದಾಗೂ ಅವರನ್ನು ವಿರೋಧಿಸಲು ನಮಗೆ ಯಾವುದೇ ವಿಷಯ ಸಿಕ್ಕಿರಲಿಲ್ಲ. ಹೀಗಾಗಿ ಕಳಂಕ ರಹಿತವಾದ ವ್ಯಕ್ತಿಗೆ ಕಳಂಕ ತರುವ ಪ್ರಯತ್ನ ನಡೆಸಲಾಗುತ್ತಿದೆ. ಇದರ ವಿರುದ್ಧ ಕಾನೂನಾತ್ಮಕ ಹಾಗೂ ರಾಜಕೀಯವಾಗಿ ಹೋರಾಟ ಮಾಡುತ್ತೇವೆ ಎಂದರು.
ನೈತಿಕತೆ ಇಲ್ಲದವರು ಮುಖ್ಯಮಂತ್ರಿ ಯ ರಾಜೀ ನಾಮೆ ಕೇಳುತ್ತಿದ್ದಾರೆ. ಮಾಜಿ ಮಂತ್ರಿಯೊಬ್ಬರು ಪರಶುರಾಮನ ಹೆಸರಿನಲ್ಲಿ ರಾಜಕೀಯ ಮಾಡಿ, ಫೈಬರ್ ಪ್ರತಿಮೆಯನ್ನು ತಂದಿಟ್ಟು ಈಗ ಸಿಎಂ ರಾಜೀನಾಮೆಗಾಗಿ ಆಗ್ರಹಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.