Inna ಗ್ರಾಮಸ್ಥರ ಹೋರಾಟಕ್ಕೆ ಜಯ : ವಿದ್ಯುತ್‌ ಟವರ್‌ ನಿರ್ಮಾಣಕ್ಕೆ ತಾತ್ಕಾಲಿಕ ತಡೆ


Team Udayavani, Jun 7, 2024, 7:30 AM IST

Inna ಗ್ರಾಮಸ್ಥರ ಹೋರಾಟಕ್ಕೆ ಜಯ : ವಿದ್ಯುತ್‌ ಟವರ್‌ ನಿರ್ಮಾಣಕ್ಕೆ ತಾತ್ಕಾಲಿಕ ತಡೆ

ಬೆಳ್ಮಣ್‌: ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಅವರ ಕೃಷಿ ಜಮೀನಿನ ನಡುವೆ ವಿದ್ಯುತ್‌ ಟವರ್‌ ಸ್ಥಾಪಿಸುವ ಕಾಮಗಾರಿಗೆ ತಾತ್ಕಾಲಿಕ ತಡೆಯನ್ನು ಕಾರ್ಕಳದ ನ್ಯಾಯಾಲಯ ಗುರುವಾರ ನೀಡಿದೆ.

ಉಡುಪಿಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ ಕಾಸರಗೋಡಿಗೆ ವಿದ್ಯುತ್‌ ಸರಬರಾಜು ಮಾಡಲು ಇನ್ನಾ ಗ್ರಾಮದಲ್ಲಿ ಟವರ್‌ ನಿರ್ಮಾಣಕ್ಕೆ ಹಲವು ಸಮಯದಿಂದ ಸರ್ವೇ ಕಾರ್ಯ ನಡೆಯುತ್ತಿತ್ತು. ಟವರ್‌ ನಿರ್ಮಾಣದಿಂದ ಕೃಷಿ ಭೂಮಿ ನಷ್ಟವಾಗುತ್ತದೆ ಎನ್ನುವ ಕಾರಣಕ್ಕೆ ಗ್ರಾಮಸ್ಥರಿಂದ ಸಾಕಷ್ಟು ಹೋರಾಟ, ಮಾತಿನ ಚಕಮಕಿ ನಡೆದಿತ್ತು. ಆದರೆ ಕಾಮಗಾರಿಯನ್ನು ಗುತ್ತಿಗೆದಾರ ಸಂಸ್ಥೆಯು ಪೊಲೀಸ್‌ ಭದ್ರತೆಯಲ್ಲಿ ಬುಧವಾರ ಜೆಸಿಬಿ ಮೂಲಕ ಬೃಹತ್‌ ಹೊಂಡಗಳನ್ನು ನಿರ್ಮಿಸಿ ಕಾಮಗಾರಿಗೆ ಆರಂಭಿಸಿತ್ತು. ಗುರುವಾರವೂ ಕಾಮಗಾರಿ ಆರಂಭವಾದಾಗ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರೂ ಜಿಲ್ಲಾಧಿಕಾರಿಗಳ ಆದೇಶವಿದೆ ಎಂದು ಹೇಳಿ ಕಂಪೆನಿಯ ಸಿಬಂದಿ ಪೊಲೀಸರ ಸಹಕಾರದಲ್ಲಿ ಕಾಮಗಾರಿ ನಡೆಸಿದರು. ಮಧ್ಯಾಹ್ನದ ವೇಳೆಗೆ ನ್ಯಾಯಾಲಯ ತಾತ್ಕಾಲಿಕ ತಡೆಯನ್ನು ನೀಡಿದ ಹಿನೆ‌°ಲೆಯಲ್ಲಿ ಕಾಮಗಾರಿ ಸ್ಥಗಿತವಾಗಿದೆ.

ಸ್ಥಳಕ್ಕೆ ಇನ್ನಾ ಗ್ರಾಮಕರಣಿಕ ಹಣಮಂತ, ಜಿ.ಪಂ. ಮಾಜಿ ಸದಸ್ಯೆ ರೇಷ್ಮಾ ಉದಯ್‌ ಶೆಟ್ಟಿ, ಗ್ರಾ.ಪಂ. ಸದಸ್ಯ ದೀಪಕ್‌ ಕೋಟ್ಯಾನ್‌, ಚಂದ್ರಹಾಸ್‌ ಶೆಟ್ಟಿ, ಗ್ರಾಮಸ್ಥರಾದ ಅಮರನಾಥ್‌ ಶೆಟ್ಟಿ, ಪ್ರವೀಣ್‌ ಶೆಟ್ಟಿ ಭೇಟಿ ನೀಡಿದ್ದರು.

ಹೋರಾಟ ನಿಲ್ಲದು
ಟವರ್‌ ನಿರ್ಮಾಣದಿಂದ ಫ‌ಲವತ್ತಾದ ಕೃಷಿ ಭೂಮಿಗೆ ಅಪಾರ ಹಾನಿಯಾಗುತ್ತಿದೆ. ಯಾವುದೇ ಅಧಿಕಾರಿಗಳು ಕೃಷಿ ಉಳಿಸುವತ್ತ ಮನ ಮಾಡಿಲ್ಲ; ಕೃಷಿಕರ ಬವಣೆಯನ್ನು ಆಲಿಸುವ ಪ್ರಯತ್ನವನ್ನೂ ಮಾಡಿಲ್ಲ. ಕಂಪೆನಿಯ ಸಿಬಂದಿ ಗ್ರಾಮಸ್ಥರನ್ನು ಗದರಿಸಿ ಕಾಮಗಾರಿ ಮಾಡುತ್ತಿದ್ದಾರೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಹಾಗೂ ಇಡೀ ಈ ಯೋಜನೆಯ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ನ್ಯಾಯಾಲಯದ ಆದೇಶದ ಮೇರೆಗೆ ಕಾಮಗಾರಿಯನ್ನು ಮುಂದಿನ ಆದೇಶದ ವರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
– ನರಸಪ್ಪ , ಕಾರ್ಕಳ ತಹಶೀಲ್ದಾರ್‌

ಟಾಪ್ ನ್ಯೂಸ್

1-crick

India vs England ಸೆಮಿ ಪಂದ್ಯ; ನಿರೀಕ್ಷೆಯಂತೆ ಮಳೆಯಿಂದ ಟಾಸ್ ವಿಳಂಬ

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

1-saddas

Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

1-asdsad

Agumbe ಘಾಟಿ; ಭಾರೀ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗ

rain 3

Red Alert; ನಾಳೆ ದಕ್ಷಿಣ ಕನ್ನಡದ ಶಾಲೆಗಳಿಗೆ, ಪಿಯು ಕಾಲೇಜುಗಳಿಗೆ ರಜೆ

suicide

Belthangady; ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

1-wqeqwewq

CM ಹುದ್ದೆ ಬಿಟ್ಟು ಕೊಡಲಿ; ಸ್ವಾಮೀಜಿ ಹೇಳಿಕೆ ಬಳಿಕ ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

Udupi: ವಿಮಾ ಕಂಪೆನಿ ವಿರುದ್ಧ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ತೀರ್ಪು 

Nejar Case: Accused Praveen Chowgule’s bail application dismissed by High Court

Nejar Case: ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್

ಖರ್ದುಂಗ್ಲಾದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ -ಮಗ

Khardung La; 17,982 ಅಡಿ ಎತ್ತರದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ -ಮಗ

Udupi; ಬಸ್ ಗೆ ಡಿಕ್ಕಿ ಹೊಡೆದ ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು

Udupi; ಬಸ್ ಗೆ ಡಿಕ್ಕಿ ಹೊಡೆದ ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-crick

India vs England ಸೆಮಿ ಪಂದ್ಯ; ನಿರೀಕ್ಷೆಯಂತೆ ಮಳೆಯಿಂದ ಟಾಸ್ ವಿಳಂಬ

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

1-saddas

Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.