![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 17, 2017, 4:00 AM IST
ಕೊಲ್ಲೂರು: ಸಮಾಜ ಬಾಂಧವರು ಒಗ್ಗಟ್ಟಿನಿಂದ ಸಮಾಜಮುಖೀಯಾಗಿ ಕಾರ್ಯನಿರ್ವಹಿಸ ಬೇಕು. ಜನಪರ ಕಾಳಜಿಯಿಂದ ಯುವ ಸಂಘಟನೆ ಕ್ರಿಯಾಶೀಲರಾಗಿ ಕಾರ್ಯತತ್ಪರತೆಯೊಡನೆ ಸೇವೆಯಲ್ಲಿ ತೊಡಗಿಸಿಕೊಂಡಲ್ಲಿ ಸಮಾಜದ ಗೌರವವು ಇನ್ನಷ್ಟು ಬೆಳಗುವುದು ಎಂದು ಉಡುಪಿ ಶಾಮಿಲಿ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ. ಶಂಕರ್ ಹೇಳಿದರು.
ಬಗ್ವಾಡಿಯ ಮಹಿಷಮರ್ದಿನಿ ದೇವಸ್ಥಾನದ ಸಭಾಭವನದಲ್ಲಿ ರವಿವಾರ ನಡೆದ ಸಾಮೂಹಿಕ ಚಂಡಿಕಾಹೋಮ ಹಾಗೂ ಹೆಮ್ಮಾಡಿಯ ಮೊಗವೀರ ಯುವ ಸಂಘಟನೆ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಮೊಗವೀರ ಸಮಾಜದ ಹಿರಿಯ ಮುಖಂಡ ಗುಜ್ಜಾಡಿ ಮಂಜು ನಾಯ್ಕ ಅವರು ಮಾತನಾಡಿ ರಾಜಕಾರಣದಲ್ಲಿ ಮೊಗವೀರ ಸಮಾಜದವರಿಗೆ ಹೆಚ್ಚಿನ ಪ್ರಾತಿನಿದÂ ದೊರಕಬೇಕು. ಸಮಾಜ ಬಾಂಧವರು ಸವಲತ್ತಿಗಾಗಿ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದರು.
ಹೆಮ್ಮಾಡಿ ಘಟಕದ ಅಧ್ಯಕ್ಷ ವಾಸು ಜಿ. ನಾಯ್ಕ ಸಭಾಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೊಗವೀರ ಮಹಾಜನ ಬಗ್ವಾಡಿ ಹೋಬಳಿ ಅಧ್ಯಕ್ಷ ಕೆ.ಕೆ. ಕಾಂಚನ್ ಮಾತನಾಡಿ ಗುರಿಕಾರರ ಪದ್ದತಿ ಹೊಂದಿರುವ ಮೊಗವೀರ ಸಮಾಜದಲ್ಲಿ ಆ ಒಂದು ವ್ಯವಸ್ಥೆಗೆ ಹೆಚ್ಚಿನ ಗೌರವವಿದೆ. ಯುವ ಸಂಘಟನೆ ಶಿಸ್ತು, ಒಗ್ಗಟ್ಟಿನಿಂದ ಸಮಾಜದ ಉನ್ನತಿಗಾಗಿ ಶ್ರಮಿಸಬೇಕು ಎಂದರು.
ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್, ಜಿ.ಪಂ. ಮಾಜಿ ಸದಸ್ಯ ಗಣಪತಿ ಶ್ರೀಯಾನ್, ಗೌರವಾಧ್ಯಕ್ಷ ಆನಂದ ಮೊಗವೀರ, ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಗಣೇಶ ಕಾಂಚನ್, ನೂತನ ಅಧ್ಯಕ್ಷ ಮಂಜುನಾಥ ಚಂದನ್, ಮೊಗವೀರ ಮಹಾಜನ ಕಾರ್ಯದರ್ಶಿ ಸುರೇಶ ವಿಠಲವಾಡಿ ಉಪಸ್ಥಿತರಿದ್ದರು.
ಮೊಗವೀರ ಸಂಘಟನೆಯ ಮುಖಂಡ ಉದಯ್ಕುಮಾರ್ ಹಟ್ಟಿಯಂಗಡಿ ಸ್ವಾಗತಿಸಿ, ನೂತನ ಕಾರ್ಯದರ್ಶಿ ಲೋಹಿತಾಕ್ಷ ಆರ್. ಕುಂದರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಪ್ರಭಾಕರ ಎಂ. ಸೇನಾಪುರ ವಂದಿಸಿದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.