ತಂಬಾಕು ವ್ಯಸನ ನಿಯಂತ್ರ ಣಕ್ಕೆ ಮಾನಿಟರಿಂಗ್‌ ಸ್ಕ್ವ್ಯಾಡ್‌


Team Udayavani, May 20, 2022, 11:46 AM IST

tobacco

ಉಡುಪಿ: ತಂಬಾಕು ನಿಯಂತ್ರಿಸುವ ಉದ್ದೇಶಕ್ಕಾಗಿ ಜಿಲ್ಲಾ ಸರ್ವೇಕ್ಷಣ ಘಟಕ ಮಹತ್ತರ ಕ್ರಮಕ್ಕೆ ಮುಂದಾಗಿದೆ. ವಿದ್ಯಾರ್ಥಿಗಳೇ ಹೆಚ್ಚಿರುವ ಮಣಿಪಾಲದ ಆಸುಪಾಸು ತಂಬಾಕು ವ್ಯಸನ ನಿಯಂತ್ರಣಕ್ಕೆ ಮಾನಿಟರಿಂಗ್‌ ಸ್ಕ್ವ್ಯಾಡ್‌ ನಿರ್ಮಿಸುವ ಬಗ್ಗೆ ಆರೋಗ್ಯ ಇಲಾಖೆ ಮೂಲಕ ಚಿಂತನೆ ನಡೆಯುತ್ತಿದೆ.

ಸ್ಕ್ವ್ಯಾಡ್‌ ನಿರ್ಮಾಣ ಸಂಬಂಧ ಈಗಾಗಲೇ ಕೆಎಂಸಿಯವರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ.

ತಂಬಾಕು ವ್ಯಸನಕ್ಕೆ ಕಡಿವಾಣ

ದೇಶ-ವಿದೇಶ ಸಹಿತ ವಿವಿಧ ಊರುಗಳಿಂದ ವಿದ್ಯಾರ್ಥಿಗಳು ಮಣಿಪಾಲಕ್ಕೆ ವಿದ್ಯಾಭ್ಯಾಸಕ್ಕಾಗಿ ಆಗಮಿಸುತ್ತಿದ್ದಾರೆ. ಮಣಿಪಾಲ ಆಸುಪಾಸು ಹಲವಾರು ಅಂಗಡಿಗಳಲ್ಲಿ ತಂಬಾಕು ವಸ್ತುಗಳು ಮಾರಾಟವಾಗುತ್ತಿರುವ ದೂರುಗಳೂ ಕೇಳಿಬರುತ್ತಿವೆ. ಈ ಬಗ್ಗೆ ಆರೋಗ್ಯ ಇಲಾಖೆ ನಿಗಾ ಇಟ್ಟಿದ್ದು, ಇದನ್ನು ನಿಯಂತ್ರಿಸುವ ಉದ್ದೇಶದಿಂದ ಹಲವಾರು ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.

ಹುಕ್ಕಾ ಬಾರ್‌ಗಳ ಮೇಲೆ ನಿಗಾ

ಪಬ್‌ಗಳು, ಹುಕ್ಕಾಬಾರ್‌ಗಳ ಮೇಲೆ ನಿಗಾ ಇರಿಸ ಲಾಗಿದ್ದು, ತಂಬಾಕು ಉತ್ಪನ್ನ ಕಂಡುಬಂದರೆ ಸ್ಕ್ವ್ಯಾಡ್‌ಗಳ ಮೂಲಕ ತೆರಳಿ ದಂಡ ವಿಧಿಸುವ ಪ್ರಕ್ರಿಯೆಯೂ ನಡೆಯಲಿದೆ. ವಿದ್ಯಾರ್ಥಿಗಳನ್ನೇ ಗುರಿಯಾಗಿರಿಸಿಕೊಂಡು ಈ ವ್ಯಸನ ಚಟುವಟಿಕೆ ನಡೆಯುತ್ತಿದ್ದು, ಇದನ್ನು ನಿಯಂತ್ರಿ ಸುವ ಉದ್ದೇಶವನ್ನು ಆರೋಗ್ಯ ಇಲಾಖೆ ಹೊಂದಿದೆ.

ಜಾಗೃತಿ ಚಟುವಟಿಕೆ

ತಂಬಾಕು ವ್ಯಸನ ನಿಯಂತ್ರಿಸುವ ಸಲುವಾಗಿ ಜಿಲ್ಲಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲ ಇಲಾಖೆ, ಶಾಲಾ ಕಾಲೇಜುಗಳಲ್ಲಿ ಹಂತಹಂತವಾಗಿ ಮಾಹಿತಿ ನೀಡಿ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಅಂಗಡಿ- ಮುಂಗಟ್ಟುಗಳಿಗೆ ನಿಯಮಿತವಾಗಿ ದಾಳಿ ನಡೆಸಿ ದಂಡ ಹಾಕುವ ಕೆಲಸವನ್ನೂ ಮಾಡಲಾಗುತ್ತಿದೆ. ಪರವಾನಿಗೆ ರಹಿತವಾಗಿ ತಂಬಾಕು, ಬೀಡಿ, ಸಿಗರೇಟ್‌ ಮಾರಾಟ ಮಾಡುವವರ ಮೇಲೆ ಕೋಟ್ಟಾ ಕಾಯ್ದೆಯಡಿ ಪ್ರಕರಣ ದಾಖಲಿಸುವ ಕೆಲಸವೂ ಆರೋಗ್ಯ ಇಲಾಖೆಯಿಂದ ಜಿಲ್ಲಾದ್ಯಂತ ನಡೆಯುತ್ತಿದೆ.

ಕೆಎಂಸಿ ಮುಖ್ಯಸ್ಥರೊಂದಿಗೆ ಸಭೆ

ಮಣಿಪಾಲ ಆಸುಪಾಸು ಪ್ರದೇಶಗಳಲ್ಲಿ ತಂಬಾಕು ವ್ಯಸನ ನಿಯಂತ್ರಿಸುವ ಬಗ್ಗೆ ಮಾನಿಟರಿಂಗ್‌ ಸ್ಕ್ವ್ಯಾಡ್‌ನಿರ್ಮಿಸುವ ಬಗ್ಗೆ ಆರೋಗ್ಯ ಇಲಾಖೆ ಮೂಲಕ ಕೆಎಂಸಿ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗಿದೆ. ನಿರ್ಮಾಣದ ಬಗ್ಗೆ ಚಿಂತನೆ ಇದ್ದು, ಶೀಘ್ರದಲ್ಲಿ ಈ ಬಗ್ಗೆ ತಿಳಿಸಲಾಗುವುದು. -ಡಾ| ನಾಗರತ್ನಾ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ, ಉಡುಪಿ

ಟಾಪ್ ನ್ಯೂಸ್

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Byarathi-suresh

 MUDAದಲ್ಲಿ ಯಾವ ಹಗರಣವೂ ನಡೆದಿಲ್ಲ: ಸಚಿವ ಭೈರತಿ ಸುರೇಶ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

DK-Shivakumar

H.D.Kumaraswamyಗೆ ನನ್ನ ನೆನಪಿಸಿಕೊಳ್ಳದಿದ್ದರೆ ತಲೆ ಓಡಲ್ಲ: ಡಿಕೆಶಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

rain 3

RED alert; ಜು.6 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

1-suresh-Raina

Jerseys; ನಂ.18, ನಂ.45 ಜೆರ್ಸಿಗಳನ್ನು ನಿವೃತ್ತಿಗೊಳಿಸಲು ರೈನಾ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.