ನವ ಕದಿರಿನ ನವ ಚೈತನ್ಯದ ತೆನೆ ಹಬ್ಬ
Team Udayavani, Sep 8, 2019, 9:21 AM IST
ಶಿರ್ವ: ಕ್ರೈಸ್ತರ ಪವಿತ್ರ ಹಬ್ಬಗಳಲ್ಲಿ ಒಂದಾದ ಮೊಂತಿ ಫೆಸ್ಟ್ ಇಂದು ಸಂಭ್ರಮದಲ್ಲಿ ನಡೆಯುತ್ತಿದೆ. ಹೊಸ ತೆನೆಯನ್ನು ಮನೆಗೆ ತರುವ ತೆನೆ ಹಬ್ಬ ಇದಾಗಿದ್ದು, ಮಾತೆ ಮೇರಿಯ ಹುಟ್ಟುಹಬ್ಬ ಇದಾಗಿದ್ದು, ಕ್ರೈಸ್ತರ ಮನೆಗಳಲ್ಲಿ ಸಂಭ್ರಮ ಮೂಡಿದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆನೆ ಹಬ್ಬವನ್ನು ಸಂತಸ ಸಡಗರದಿಂದ ಆಚರಿಸಲಾಗುತ್ತಿದೆ. ಬೆಳಗಿನ ಜಾವ ಚರ್ಚ್ ಗೆ ತರಳಿ ಪೂಜೆ ಸಲ್ಲಿಸುತ್ತಾರೆ. ಚೆಂದದ ಬಟ್ಟೆ ತೊಟ್ಟು, ಕೈಯಲ್ಲಿ ಬಣ್ಣ ಬಣ್ಣದ ಹೂವುಗಳನ್ನು ಹಿಡಿದು ತರುವ ಮಕ್ಕಳಿಗೆ ಈ ಹಬ್ಬದ ಪ್ರಧಾನ ಆಕರ್ಷಣೆ. ನಂತರ ಮೆರವಣಿಗೆಯಲ್ಲಿ ಹೊಸ ತೆನೆಯನ್ನು ಹಿಡಿದು ಪೂಜೆ ಸಲ್ಲಿಸಲಾಗುತ್ತದೆ. ಹೀಗೆ ಅಲ್ಲಿ ಆಶೀರ್ವಚಿಸಲ್ಪಟ್ಟ ಭತ್ತದ ತೆನೆಗಳನ್ನು ಮನೆಗೆ ತಂದು, ಹೊಸ ಬೆಳೆಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ, ಹಾಲು ಅಥವಾ ಪಾಯಸದಲ್ಲಿ ಹಾಕಿ ಸೇವಿಸುತ್ತಾರೆ.
ಈ ದಿನದ ಮತ್ತೊಂದು ವಿಶೇಷವೆಂದರೆ ಇಂದು ಮಾಂಸಹಾರಿ ನಿಷಿದ್ಧ. ಇಂದಿನ ದಿನ ಹಲವು ಬಗೆಯ ತರಕಾರಿಗಳ ಪದಾರ್ಥ ತಯಾರಿಸಿ ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಊಟ ಮಾಡುತ್ತಾರೆ.
ಶಿರ್ವ ಆರೋಗ್ಯ ಮಾತಾ ದೇವಾಲಯದಲ್ಲಿ ರವಿವಾರ ತೆನೆಹಬ್ಬದ ಸಂಭ್ರಮದಿಂದ ನಡೆಯಿತು. ರೆ.ಫಾ.ಡೆನ್ನಿಸ್ ಡೇಸಾ ನೇತ್ರತ್ವದಲ್ಲಿ ಬಲಿಪೂಜೆ ಸಹಿತ ಧಾರ್ಮಿಕ ಆಚರಣೆಗಳು ನಡೆದವು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.