15 ಸಾವಿರಕ್ಕೂ ಅಧಿಕ ಪೌಷ್ಟಿಕ ತೋಟ : ಪೌಷ್ಟಿಕ ತೋಟದಲ್ಲಿ ಏನೇನು ಇರಲಿದೆ?


Team Udayavani, Oct 31, 2022, 9:16 AM IST

15 ಸಾವಿರಕ್ಕೂ ಅಧಿಕ ಪೌಷ್ಟಿಕ ತೋಟ : ಪೌಷ್ಟಿಕ ತೋಟದಲ್ಲಿ ಏನೇನು ಇರಲಿದೆ?

ಉಡುಪಿ : ಪೋಷಣ್‌ ಅಭಿಯಾನದ ಮುಂದುವರಿದ ಭಾಗವಾಗಿ ಜಿ.ಪಂ., ತೋಟಗಾರಿಕೆ ಇಲಾಖೆ ಹಾಗೂ ನ್ಯಾಶನಲ್‌ ರೂರಲ್‌ ಲೈವ್ಲಿಹುಡ್‌ ಮಿಷನ್‌ (ಎನ್‌ಆರ್‌ಎಲ್‌ಎಂ) ಒಟ್ಟಾಗಿ ಗ್ರಾ.ಪಂ.ಗಳಲ್ಲಿರುವ ಸಂಜೀವಿನಿ ಸಂಘಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ನರೇಗಾ ಯೋಜನೆಯಡಿಯಲ್ಲಿ ಪೌಷ್ಟಿಕ ತೋಟಗಳ ನಿರ್ಮಾಣಕ್ಕೆ ರೂಪರೇಖೆ ಸಿದ್ಧಪಡಿಸಲಾಗಿದೆ.
ಎಲ್ಲರ ಆರೋಗ್ಯ ವರ್ಧನೆಗೆ ಕೇಂದ್ರ ಸರಕಾರ 2022-23ರ ಅಂತ್ಯಕ್ಕೆ ಅಪೌಷ್ಟಿಕತೆ ಮುಕ್ತ ಭಾರತವೆಂದು ಘೋಷಿಸಲು ಪೂರಕವಾಗಿ ರಾಷ್ಟ್ರೀಯ ಪೋಷಣ್‌ ಅಭಿಯಾನ ಜಾರಿಗೊಳಿಸಿದೆ. ಇದರಡಿಯಲ್ಲಿ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಕುಟುಂಬದ ಪೌಷ್ಟಿಕ ಹೊರೆಯನ್ನು ಪೂರ್ತಿಗೊಳಿಸುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಆದ್ದರಿಂದ ಸಂಜೀವಿನಿ ಸ್ವ-ಸಹಾಯ ಮಹಿಳಾ ಗುಂಪುಗಳ ಮೂಲಕ ಜಿ.ಪಂ., ತೋಟಗಾರಿಕೆ ಇಲಾಖೆಯ ಸಹಭಾಗಿತ್ವದಲ್ಲಿ ಮನೆಗೊಂದು ಪೌಷ್ಟಿಕ ತೋಟದ ಅಡಿಯಲ್ಲಿ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಜಿಲ್ಲೆಯ ಗುರಿ
ಜಿಲ್ಲೆಯ 155 ಗ್ರಾ.ಪಂ.ಗಳಲ್ಲಿ ತಲಾ 101 ಪೌಷ್ಟಿಕ ತೋಟದಂತೆ ಒಟ್ಟು 15,500ಕ್ಕೂ ಮನೆಯಂಗಳದಲ್ಲಿ ಪೌಷ್ಟಿಕ ತೋಟ ನಿರ್ಮಾಣಕ್ಕೆ ಯೋಜನೆ ರೂಪಿಸ ಲಾಗಿದೆ. ಪೌಷ್ಟಿಕ ತೋಟ ನಿರ್ಮಾಣಕ್ಕೆ ನರೇಗಾದಡಿಯಲ್ಲಿ ವೈಯಕ್ತಿಕ ಕಾಮಗಾರಿ ಹೆಸರಿನಡಿ ಕೂಲಿ ಹಾಗೂ ಸಾಮಗ್ರಿ ವೆಚ್ಚ ಸೇರಿ ಒಟ್ಟು 4,503 ರೂ. ಸಿಗಲಿದೆ. ಆರಂಭದಲ್ಲಿ ಪೌಷ್ಟಿಕ ತೋಟ ನಿರ್ಮಾಣ ಮಾಡುವವರೇ ತಮ್ಮ ಖರ್ಚಿನಲ್ಲಿ ಇದನ್ನು ಮಾಡಿಕೊಳ್ಳಬೇಕು. ಅನಂತರದಲ್ಲಿ ನರೇಗಾ ಯೋಜನೆಯಡಿ ಅವರ ಖಾತೆಗೆ ಹಣ ಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಪೌಷ್ಟಿಕ ತೋಟದಲ್ಲಿ ಏನೇನು ಇರಲಿದೆ?
ಜಿಲ್ಲೆಯ ಭೌಗೋಳಿಕ ಪರಿಸರಕ್ಕೆ ಪೂರಕವಾಗುವಂತೆ ಯಾವೆಲ್ಲ ಗಿಡಗಳನ್ನು ನಡೆಬಹುದು ಎಂಬುದನ್ನು ತೋಟಗಾರಿಕೆ ಇಲಾಖೆ ಹಾಗೂ ಜಿ.ಪಂ. ಒಟ್ಟಾಗಿ ತಜ್ಞರ ಮೂಲಕ ಚರ್ಚಿಸಿ ತೀರ್ಮಾನಿಸಲಾಗಿದೆ. ಪೌಷ್ಟಿಕ ತೋಟದಲ್ಲಿ ತಲಾ ಎರಡೆರೆಡು ತೆಂಗು, ಸೀಬೆ, ನೆಲ್ಲಿ, ಕರಿಬೇವು, ನಿಂಬೆ, ನುಗ್ಗೆ ಹಾಗೂ ಪಪಾಯ ಗಿಡ ಇರಲಿದೆ. ಕನಿಷ್ಠ ತಲಾ ಒಂದರಂತೆ ಎಂಟು ಗಿಡಗಳು ಇರಬೇಕು. ಗರಿಷ್ಠ 14 ಗಿಡ ಹೊಂದಲು ಅವಕಾಶವಿದೆ.

ಇದನ್ನೂ ಓದಿ : ಚಿಂಚೋಳಿ ಪುರಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಬಿಜೆಪಿಗೆ ಮುಖಬಂಗ

ಗಿಡದ ಲಭ್ಯತೆ ಮತ್ತು ದರ
ಒಂದು ತೆಂಗಿನ ಗಿಡಕ್ಕೆ 70 ರೂ., ಸೀಬೆ 85 ರೂ., ನೆಲ್ಲಿ 40 ರೂ., ಕರಿಬೇವು 12 ರೂ., ನಿಂಬೆ 15 ರೂ., ನುಗ್ಗೆ 10 ರೂ. ಹಾಗೂ ಪಪಾಯಕ್ಕೆ 10 ರೂ. ನಿಗದಿ ಮಾಡಲಾಗಿದೆ. ಒಬ್ಬರಿಗೆ ಗರಿಷ್ಠ ಎಲ್ಲ ಬಗೆಯ ಎರಡೆರೆಡು ಗಿಡಗಳನ್ನು ನೀಡಲಾಗುತ್ತದೆ. ತೋಟಗಾರಿಕೆ ಇಲಾಖೆಯ ಅಧಿಕೃತ ನರ್ಸರಿ, ಜಿ.ಪಂ.ಗಳಿಂದ ರಚಿಸಲ್ಪಟ್ಟಿರುವ ಸಂಜೀವಿನಿ ಸಂಘಗಳ ನರ್ಸರಿಗಳಲ್ಲಿ ನಿರ್ದಿಷ್ಟ ದರ ನೀಡಿ ಗಿಡ ಖರೀದಿ ಮಾಡಬಹುದಾಗಿದೆ. ನರೇಗಾದಡಿ ಈಗಾಗಲೇ 10 ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿವೆ ಎಂದು ಅಧಿಕಾರಿಯೊಬ್ಬರು ವಿವರ ನೀಡಿದರು.

ಪೌಷ್ಟಿಕ ತೋಟಕ್ಕೆ ಪೂರಕವಾದ ಗಿಡಗಳು ತೋಟಗಾರಿಕೆ ಇಲಾಖೆಯ ಅಧಿಕೃತ ನರ್ಸರಿ ಹಾಗೂ ಗ್ರಾ.ಪಂ. ಸಂಜೀವಿನಿ ಸಂಘಗಳ ನರ್ಸರಿಗಳಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಲಿದ್ದೇವೆ. ಪ್ರತೀ ಗ್ರಾ.ಪಂ.ನಲ್ಲಿ 101 ಪೌಷ್ಟಿಕ ತೋಟ ನಿರ್ಮಾಣದ ಗುರಿಯಿದೆ.
– ಭುವನೇಶ್ವರಿ, ಉಪನಿರ್ದೇಶಕಿ, ತೋಟಗಾರಿಕೆ ಇಲಾಖೆ

ಪೌಷ್ಟಿಕ ತೋಟ ನಿರ್ಮಾಣ ಸಂಬಂಧ ನರೇಗಾದಡಿ ಕಾರ್ಯಕ್ರಮ ಅನುಷ್ಠಾನಕ್ಕೆ ಈಗಾಗಲೇ ಪಿಡಿಒಗಳಿಗೆ ನಿರ್ದೇಶನ ನೀಡಿದ್ದೇವೆ. ಎಲ್ಲ ಗ್ರಾ.ಪಂ.ಗಳಲ್ಲಿ ಅರ್ಜಿ ಸ್ವೀಕರಿಸಲಾಗುತ್ತದೆ. ಸಂಜೀವಿನಿ ಸಂಘಗಳನ್ನು ಇದರಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು.
-ಪ್ರಸನ್ನ ಎಚ್‌., ಜಿ.ಪಂ. ಸಿಇಒ ಉಡುಪಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.