ಮುಂಡ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

114 ವರ್ಷಗಳ ಇತಿಹಾಸದ ಕನ್ನಡ ಶಾಲೆ

Team Udayavani, Nov 4, 2019, 5:17 AM IST

0311BELMNE1A

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಬೆಳ್ಮಣ್‌: ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಸನ್ನಿಧಿಯಲ್ಲಿ 1906ರಲ್ಲಿ ದಿ| ಅಣ್ಣಪ್ಪ ಶ್ಯಾನುಭಾಗರಿಂದ ಆರಂಭಿಸಲಾದ ಮುಂಡ್ಕೂರು ಸರಕಾರಿ ಮಾದರಿ ಹಿ.ಪ್ರಾ. ಶಾಲೆ ಸಹಸ್ರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದೆ.

ಗ್ರಾಮೀಣ ಭಾಗವಾದ ಮುಂಡ್ಕೂರು, ಮುಲ್ಲಡ್ಕ, ಇನ್ನಾ , ಬೋಳ, ಉಳೆಪಾಡಿ, ಸಂಕಲಕರಿಯದಲ್ಲಿ ಕೃಷಿಕರೇ ಅಧಿಕವಾಗಿರುವ ಈ ಊರಲ್ಲಿ ಅಣ್ಣಪ್ಪ ಶ್ಯಾನುಭಾಗರು, ಹಿಂದಿನ ಮುಖ್ಯ ಶಿಕ್ಷಕ ಪುಂಡಲೀಕ ಮಲ್ಯರು ದೇಗುಲದ ಮಾಜಿ ಆಡಳಿತ ಮೊಕ್ತೇಸರ ನಡಿಗುತ್ತು ಜಗದೀಶ್ಚಂದ್ರ ಹೆಗ್ಡೆಯವರ ಮೂಲಕ ಶಾಲೆಗೆ ಹೊಸ ಜಾಗದ ತಲಾಶೆ ನಡೆಸಿ ನಿವೇಶನ ಹೊಂದುವಲ್ಲಿ ಯಶಸ್ವಿಯಾದರು.

ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಪ್ರಧಾನ ಅರ್ಚಕ ಜಯರಾಮ ಆಚಾರ್ಯ, ಡಾ| ಪಿ. ಬಾಲಕೃಷ್ಣ ಆಳ್ವರ ಮುತುವರ್ಜಿಯಲ್ಲಿ 1986ರಲ್ಲಿ ಅಂದಿನ ಸಚಿವ ಕೆ. ಅಮರನಾಥ ಶೆಟ್ಟಿಯವರ ಆಧ್ಯಕ್ಷತೆಯಲ್ಲಿ, ಶಿಕ್ಷಣ ಸಚಿವ ಗೋವಿಂದೇ ಗೌಡರಿಂದ ಪಂಚಾಯತ್‌ ಬಳಿಯಲ್ಲಿ ನೂತನ ಕಟ್ಟಡ ಉದ್ಘಾಟಿಸಲ್ಪಟ್ಟಿತು.

ಪ್ರಸ್ತುತ 120 ವಿದ್ಯಾರ್ಥಿಗಳು
ಪ್ರಸ್ತುತ 120 ವಿದ್ಯಾರ್ಥಿಗಳಿದ್ದು ಮುಖ್ಯ ಶಿಕ್ಷಕರು , ದೈಹಿಕ ಶಿಕ್ಷಣ ಶಿಕ್ಷಕರು
ಸೇರಿದಂತೆ ಒಟ್ಟು ಐವರು ಖಾಯಂ ಶಿಕ್ಷಕರು, ಓರ್ವ ಗುಬ್ಬಚ್ಚಿ ನ್ಪೋಕನ್‌ ಇಂಗ್ಲಿಷ್‌ ಕಲಿಕೆಯ ಶಿಕ್ಷಕಿ ಹಾಗೂ ಓರ್ವ ಗೌರವ ಶಿಕ್ಷಕಿ ಈ ಶಾಲೆಯಲ್ಲಿ ಸೇವೆ
ಸಲ್ಲಿಸುತ್ತಿದ್ದಾರೆ.ಶಾಲೆಯಲ್ಲಿ ಸಾಕಷ್ಟು ಕೊಠಡಿ ವ್ಯವಸ್ಥೆ ಇದ್ದು, ಸಭಾಭವನ, ರಂಗವೇದಿಕೆ, ಶಾಲಾ ಆವರಣಗೋಡೆ, ಬಿಸಿಯೂಟ ಆಡುಗೆ ಕೋಣೆ ಸಹಿತ ಸಕಲ ವ್ಯವಸ್ಥೆಗಳು ಇವೆ.

ಸಾಧಕ ಹಳೆವಿದ್ಯಾರ್ಥಿಗಳು
ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಗೌರವಯುತ ಸ್ಥಾನದಲ್ಲಿದ್ದಾರೆ. ವೈದ್ಯರಾಗಿ, ಎಂಜಿನಿಯರ್‌ಗಳಾಗಿ, ಉದ್ಯಮಿಗಳಾಗಿ, ಹೊಟೇಲ್‌ ಮಾಲಕರಾಗಿ , ಸಮಾಜ ಸೇವಕರಾಗಿ,ಶಿಕ್ಷಕರಾಗಿ, ಜನಪ್ರತಿನಿಧಿಗಳಾಗಿ ಗುರುತಿಸಿಕೊಂಡ ನೂರಾರು ಮಂದಿ ಈ ಶಾಲೆಯನ್ನು ಇನ್ನೂ ಮರೆತಿಲ್ಲ.
ಮುಂಡ್ಕೂರು ಫ್ರೆಂಡ್ಸ್‌ ಎಂಬ ಹಳೆ ವಿದ್ಯಾರ್ಥಿಗಳ ಬಳಗ ಈ ಶಾಲೆಯ ಒಂದನೇ ತರಗತಿ ನೋಂದಣಿಗೆ ತಲಾ 2, 000 ರೂ. ಹಾಗೂ ನಿವೃತ್ತ ಕಂದಾಯ ಆಧಿಕಾರಿ ಅವಿಲ್‌ ಡಿ’ಸೋಜಾ ತಲಾ 1,000ರೂ. ನೀಡಿ ಈ ಶಾಲೆಯ ಉಳಿವಿಗಾಗಿ ಸಹಕರಿಸುತ್ತಿದ್ದಾರೆ.

ಆಶ್ರಯದ ಆಸರೆ
ಶಾಲೆಯಲ್ಲಿ ಕಳೆದ 4 ವರ್ಷಗಳ ಹಿಂದೆ ವಿದ್ಯಾರ್ಥಿಗಳ ಸಂಖ್ಯೆ ನೂರರ ಕೆಳಗೆ ತಲುಪಿದಾಗ ಮುಲ್ಲಡ್ಕ ಗುರುಪ್ರಸಾದ್‌, ಸುಧಾಕರ ಶೆಟ್ಟರ ನೇತೃತ್ವದ ಆಶ್ರಯ ಚಾರಿಟೆಬಲ್‌ ಟ್ರಸ್ಟ್‌ ವಿವಿಧ ಸೌಕರ್ಯಗಳಿಗಾಗಿ ಸುಮಾರು 15 ಲಕ್ಷ ರೂ.ಗಳಿಗೂ ಆಧಿಕ ಹಣ ವ್ಯಯಿಸಿ ಶಾಲೆಯ ಉಳಿವಿಗೆ ಸಹಕರಿಸಿತ್ತು. ನೂತನ ಕಂಪ್ಯೂಟರ್‌ ಕೊಠಡಿ, ವಾಚನಾಲಯ, ಶೌಚಾಲಯ, ಸಮವಸ್ತ್ರ, ಕ್ರೀಡಾ ಸಮವಸ್ತ್ರ, ಪಠ್ಯೇತರ ಚಟುವಟಿಕೆಗಳ ಆಯೋಜನೆ ನಡೆಸಿ ಶಾಲೆಗೆ ಹೈಟೆಕ್‌ ಸ್ಪರ್ಶ ನೀಡಿತ್ತು. ಪರಿಣಾಮವಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಮಖ್ಯೆ 150ಕ್ಕೆ ತಲುಪಿತ್ತು. ಹಿಂದಿ ಚಿತ್ರ ರಂಗದ ತಾರೆ ನಾನಾಪಾಟೇಕರ್‌ ಈ ಶಾಲೆಗೆ ಭೇಟಿ ನೀಡಿದ್ದು ಕಂಪ್ಯೂಟರ್‌ ಕೊಠಡಿಗೆ ಅನುದಾನ ನೀಡಿದ್ದರು.

ಶತಮಾನ ಕಂಡ ನಮ್ಮೂರ ಹೆಮ್ಮೆಯ ಕನ್ನಡ ಶಾಲೆಯ ಬಗ್ಗೆ ನಮಗೆ ಹೆಮ್ಮೆ ಇದೆ. ಎಲ್ಲ ಕಡೆಗಳಂತೆ ವಿದ್ಯಾರ್ಥಿಗಳ ಕೊರತೆ ಬಾಧಿಸುತ್ತಿದೆ. ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿಗಳು, ಶಿಕ್ಷಣಪ್ರೇಮಿಗಳು ಹಾಗೂ ಇತರ ದಾನಿಗಳು ಈ ಕನ್ನಡ ಶಾಲೆಯನ್ನು ಉಳಿಸಲು ನಮ್ಮೊಂದಿಗೆ ಶ್ರಮಿಸುತ್ತಿದ್ದಾರೆ. ಉತ್ತಮ ಶಿಕ್ಷಕರ ಬಳಗ ಇದೆ. ಈ ಶಾಲೆಯನ್ನು ಉಳಿಸುವ ಜವಾಬ್ದಾರಿ ಎಲ್ಲರದ್ದಾಗಿದೆ.
-ಪೂರ್ಣಿಮಾ ಭಟ್‌ , ಶಾಲೆಯ ಮುಖ್ಯ ಶಿಕ್ಷಕಿ

ಶತಮಾನ ಕಂಡ ಮುಂಡ್ಕೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಎನ್ನಲು ಹೆಮ್ಮೆ ಎನಿಸುತ್ತದೆ. ಅಂದು ಈ ಶಾಲೆಯಲ್ಲಿ ಗುರುಗಳು ಕಲಿಸಿದ ಪಾಠ ಇಂದು ಬದುಕುವ ಪಾಠ ಕಲಿಸಿತು.
-ಡಾ| ಗೋಪಾಲ ಮುಗೆರಾಯರು,
ನಿರ್ದೇಶಕರು, ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ , ಗೋವಾ

-ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

1-traa

Train; ಹಳಿತಪ್ಪಿದ ಅಗರ್ತಲಾ-ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು

ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಗ್ರ್ಯಾಂಡ್‌ ಫಿನಾಲೆ

ಅ.19-20ರಂದು ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಗ್ರ್ಯಾಂಡ್‌ ಫಿನಾಲೆ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.